ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಆರಗ ಜ್ಞಾನೇಂದ್ರರ ವಿರುದ್ಧ ಕಿಡಿಕಾರಿದ ಪಲ್ಲವಿ

Share Below Link

ಶಿವಮೆಗ್ಗ: ಮಾಜಿ ಗೃಹ ಸಚಿವ ಆರಗ ಜನೇಂದ್ರ ಆಡಿರುವ ಮಾತು ಅವರ ಮಾತು ಗಳಲ್ಲ, ಅವು ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು ಎಂದು ಕೆಪಿಸಿಸಿ ಸಂಚಾಲಕಿ ಜಿ. ಪಲ್ಲವಿ ವ್ಯಂಗ್ಯವಾಡಿದ್ದಾರೆ.
ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ. ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು, ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ. ಆರಗ ಜನೇಂದ್ರ ಅವರು ಒಂದೇ ಒಂದು ದಿನ ಮಣ್ಣು ಹೊತ್ತರೆ ಅವರ ಮೈಬಣ್ಣವೂ ಕಪ್ಪಗಾಗುತ್ತದೆ ಎಂದಿದ್ದಾರೆ.
ಮನುಸ್ಮೃತಿಯ ವರ್ಣಾಶ್ರಮ ವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತು ಗಳಿಂದ ಹೊರಬರುತ್ತವೆ. ಬಿಜೆಪಿಯ ಈ ಅಸಹನೆ ಬಿಜೆಪಿ ಯನ್ನೇ ಸುಟ್ಟು ಕರಕಲು ಮಾಡುತ್ತದೆ, ಏಕೆಂದರೆ ಇದು ಮನುಸ್ಮೃತಿಯ ಕಾಲವಲ್ಲ, ಬಾಬಾ ಸಾಹೇಬರ ಸಂವಿಧಾನದ ಕಾಲ ಎಂದು ತಿಳಿಸಿದ್ದಾರೆ.