ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ಈ ಬಾರಿಯ ಕನ್ನಡ ರಾಜ್ಯೋತ್ಸವ ವಿಶೇಷ ರೀತಿ ಆಚರಣೆ…

Share Below Link

ಬೆಂಗಳೂರು : ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಿದ್ಧತೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು, ಈ ಬಾರಿಯ ಕನ್ನಡ ರಾಜ್ಯೋತ್ಸವವು ವಿಶೇಷ ವಾಗಲಿರುವುದಾಗಿ ತಿಳಿಸಿzರೆ.
ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದ ಸಿದ್ಧತೆಗಳನ್ನು ಸಚಿವರು ಪೊಲೀಸ್ ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.
ಶಾಲಾ ಶಿಕ್ಷಣ ಸಚಿವನಾಗಿ ಇದು ನನ್ನ ೩ನೇ ಕನ್ನಡ ರಾಜ್ಯೋತ್ಸವ. ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಭಿನ್ನವಾಗಿ ರೂಪಿಸಲಾಗಿದೆ. ಕಳೆದ ಬಾರಿ ೧೧೦೦ ಮಕ್ಕಳು ಭಾಗಿಯಾಗಿದ್ದು, ಅದರಲ್ಲಿ ೩೦೦ ಮಂದಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಾಗಿದ್ದರು. ಈ ಬಾರಿ ೧೭೦೦ ಮಕ್ಕಳು ಭಾಗವಹಿಸ ಲಿzರೆ, ಅವರಲ್ಲಿ ೭೦೦ ಮಂದಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು. ಭಾಗವಹಿಸುವ ಎಲ್ಲ ಮಕ್ಕಳಿಗೂ ಪ್ರಮಾಣಪತ್ರ ನೀಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.


ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸ ಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಉಪಸ್ಥಿತರಿರಲಿzರೆ.
ಕನ್ನಡ ರಾಜ್ಯೋತ್ಸವದಂದು ಮುಖ್ಯಮಂತ್ರಿಗಳು ಶಾಲಾ ಶಿಕ್ಷಣ ಇಲಾಖೆಗೆ ಸಂಬಂಧಪಟ್ಟ ಹಲವು ವಿಶೇಷ ಕಾರ್ಯಕ್ರಮವನ್ನು ಘೋಷಣೆ ಮಾಡಲಿzರೆ ಎಂದರಲ್ಲದೇ, ಸರ್ಕಾರಿ ಶಾಲೆಗಳಲ್ಲಿ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದರಿಂದ ಶಿಕ್ಷಕರು ರೆಮಿಡಿಯಲ್ ತರಗತಿಗಳನ್ನು ಸುಲಭವಾಗಿ ನಡೆಸುತ್ತಿzರೆ. ಮಕ್ಕಳ ದಿನಾಚರಣೆಯ ಅಂಗವಾಗಿ ನ.೧೪ ರಂದು ಮಕ್ಕಳು, ಪೋಷಕರು, ಶಿಕ್ಷಕರನ್ನು ಒಗ್ಗೂಡಿಸಿ ಮಕ್ಕಳ ದಿನಾಚರಣೆಯ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾ ಗುತ್ತಿದೆ. ಅಲ್ಲದೇ, ಶಾಲೆಗಳ ಪ್ರವೇಶ ಪ್ರಚಾರಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಹೇಳಿದರು.


ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಉತ್ತೀರ್ಣ ಅಂಕಗಳು ೩೫ರಿ ಂದ ೩೩ಕ್ಕೆ ನಿಗದಿ ಪಡಿಸಿರುವ ಬಗ್ಗೆ ಅವರು ಪ್ರತಿಕ್ರಿಯಿಸಿ, ಇದು ನನ್ನ ವೈಯಕ್ತಿಕ ನಿರ್ಧಾರವಲ್ಲ. ಜನಾಭಿಪ್ರಾಯ ಪಡೆದು ಮಾಡಲಾಗಿದೆ. ಇದು ಗ್ರಾಮೀಣ ಹಾಗೂ ಹಿಂದುಳಿದ ವರ್ಗದ ಮಕ್ಕಳಿಗೆ ಹೆಚ್ಚು ಪ್ರಯೋಜನಕಾರಿ ಯಾಗಿದೆ ಎಂದರು.
ನೇಮಕಾತಿ ಕುರಿತು ಮಾತನಾಡಿದ ಸಚಿವರು, ಈಗಾಗಲೇ ೧೩ ಸಾವಿರ ಶಿಕ್ಷಕರ ನೇಮಕಾತಿ ಪೂರ್ಣಗೊಂಡಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಒಟ್ಟಾರೆಯಾಗಿ ಸುಮಾರು ೩೨ ರಿಂದ ೩೩ ಸಾವಿರ (ಈಗಾಗಲೇ ೧೩ ಸಾವಿರ ಶಿಕ್ಷಕರ ನೇಮಕಾತಿ ಒಳಗೊಂಡಂತೆ) ಶಿಕ್ಷಕರನ್ನು (ಶಾಲಾ ಶಿಕ್ಷಣ, ಪಿಯುಸಿ, ಅನುದಾನಿತ ಶಾಲೆಗಳು ಸೇರಿದಂತೆ) ನೇಮಕ ಮಾಡಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಆಯುಕ್ತ ವಿಕಾಶ್ ಕಿಶೋರ್ ಸೂರಳ್ಕರ್, ಪಿಯುಸಿ ನಿರ್ದೇಶಕ ಭರತ್ ಎಸ್., ಶಾಲಾ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿ ಗಳಾದ ಡಾ. ಕೆ. ವಿದ್ಯಾಕುಮಾರಿ, ಬಸವರಾಜೇಂದ್ರ, ಹೆಚ್.ಎನ್. ಗೋಪಾಲಕೃಷ್ಣ ಮತ್ತು ಕೃಷ್ಣಾಜಿ ಕರಿಚಣ್ಣವರ ಉಪಸ್ಥಿತರಿದ್ದರು.