ಜ.೧೧: ಸ್ಪರ್ಧಾತ್ಮಕ ಪರೀಕ್ಷೆಗಳು-ಸಕಲ ಸಿದ್ದತೆಗೆ ಸೂಚನೆ : ಅಭಿಷೇಕ್
ಶಿವಮೊಗ್ಗ: ವಿವಿಧ ಇಲಾಖೆ/ ಸಂಸ್ಥೆಗಳಲ್ಲಿ ಖಾಲಿ ಇರುವ ಹುzಗಳಿಗೆ ಜ.೧೧ರಂದು ಜಿಯ ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಂಡು ಪರೀಕ್ಷೆಗಳನ್ನು ಶಾಂತಿಯುತವಾಗಿ ಯಶಸ್ವಿಗೊಳಿಸಬೇಕೆಂದು ಅಪರ ಜಿಧಿಕಾರಿ ಅಭಿಷೇಕ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಡಳಿತ ಕಚೇರಿ ಸಭಾಂಗಣದಲ್ಲಿ ಪರೀಕ್ಷೆ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆಗಳು ನಗರದ ಒಟ್ಟು ೧೪ ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಬೆಳಿಗ್ಗೆ ೧೧.೩೦ ರಿಂದ ೧೨.೩೦ ಮತ್ತು ಮಧ್ಯಾಹ್ನ ೨.೩೦ ರಿಂದ ಸಂಜೆ ೪.೩೦ರವರೆಗೆ ನಡೆಯಲಿವೆ. ಪರೀಕ್ಷೆಗೆ ಜಿಯಿಂದ ಬೆಳಿಗ್ಗೆ ಒಟ್ಟು ೪೩೧೩ ಮತ್ತು ಮಧ್ಯಾಹ್ನ ೪೨೭೧ ವಿದ್ಯಾರ್ಥಿಗಳು ಹಾಜರಾಗುತ್ತಿzರೆ.
ಪ್ರಶ್ನೆ ಪತ್ರಿಕೆ ವಿತರಕ ಮಾರ್ಗಗಳನ್ನು ನಿಗದಿಪಡಿಸಿದ್ದು, ಪತ್ರಿಕೆ ಸಾಗಾಟ ಮಾಡಲು ಸಂಬಂಧಿಸಿದಂತೆ ತ್ರಿಸದಸ್ಯ ಸಮಿತಿ ಯನ್ನು ಈಗಾಗಲೇ ರಚಿಸಲಾಗಿದೆ. ಪರೀಕ್ಷಾ ಗೌಪ್ಯ ಸಾಮಗ್ರಿಯನ್ನು ಠೇವಣಿಕರಿಸಲು ಮತ್ತು ವಿತರಿಸಲು ಜಿ ಖಜನೆಗೆ ಸೂಚಿಸಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತಮುತ್ತ ೨೦೦ ವ್ಯಾಪ್ತಿಯಲ್ಲಿ ೧೪೪ ಸೆಕ್ಷನ್ ಜರಿಗೊಳಿಸಿದ್ದು, ಸಾರ್ವಜನಿಕರ ಪ್ರವೇಶ ನಿಷೇಧಿಸಿದೆ ಹಾಗೂ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಬಂಧ್ ಮಾಡಲು ಸೂಚಿಸಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್, ಪರೀಕ್ಷಾರ್ಥಿಗಳ ತಪಾಸಣೆಗೆ ಸಿಬ್ಬಂದಿ ನಿಯೋಜಿಸಲಾಗಿದೆ. ಪ್ರತಿ ಕೇಂದ್ರಕ್ಕೆ ಎ ಮತ್ತು ಬಿ ದರ್ಜೆಯ ಅಧಿಕಾರಿಗಳನ್ನು ವೀಕ್ಷಕರಾಗಿ ನೇಮಿಸಲಾಗಿದೆ. ಪ್ರತಿ ಕೇಂದ್ರಕ್ಕೆ ಹಿರಿಯ ಪ್ರಾಂಶುಪಾಲರನ್ನು ಪ್ರಶ್ನೆ ಪತ್ರಿಕೆ ಪಾಲಕರನ್ನಾಗಿ ಹಾಗೂ ಒಬ್ಬರು ಉಪನ್ಯಾಸಕರನ್ನು ಜಗೃತ ದಳದ ಸಿಬ್ಬಂದಿಯಾಗಿ ನೇಮಿಸಲಾಗಿದೆ ಎಂದರು.
ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಿದ್ದು, ಜಮರ್ಗಳನ್ನು ಅಳವಡಿಸಲಾ ಗುವುದು ಹಾಗೂ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ವಾಚು, ವಸ್ತುಗಳಿಗೆ ಪ್ರವೇಶವಿಲ್ಲ. ಅಭ್ಯರ್ಥಿಗಳು ಧರಿಸುವ ಮೆಟಲ್ ಆಭರಣಗಳು, ವಸ್ತ್ರಸಂಹಿತೆ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದು, ಸೂಕ್ಷ್ಮವಾಗಿ ತಮ್ಮ ವಿವೇಚನೆ ಮತ್ತು ನಿಯಮಗಳನ್ವಯ ಈ ಕುರಿತು ನಿರ್ವಹಣೆ ಮಾಡಿ ಪರೀಕ್ಷೆಗಳು ಶಾಂತಿಯುತವಾಗಿ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ವಿಕಲಚೇತನ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ನೆಲ ಮಾಳಿಗೆಯಲ್ಲಿ ಪರೀಕ್ಷೆಗೆ ಅವಕಾಶ ಮಾಡಿ ಅವರಿಗೆ ನಿಯಮಾನುಸಾರ ಇರುವ ಸೌಲಭ್ಯ ಗಳನ್ನು ನೀಡಬೇಕು. ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿಗಳಿಗೆ ಈಗಾಗಲೇ ಎಲ್ಲ ರೀತಿಯ ಸೂಚನೆಗಳನ್ನು ನೀಡಿದ್ದು, ಸಂಬಂಧಿಸಿದ ಅಧಿಕಾರಿಗಳು ಪರೀಕ್ಷೆಗಳು ಶಾಂತಿ ಮತ್ತು ಸುವ್ಯಸ್ಥಿತವಾಗಿ ನಡೆಯುವಂತೆ ಕ್ರಮ ವಹಿಸಿ ಯಶಸ್ವಿಗೊಳಿಸಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಜಿ ಖಜನಾಧಿಕಾರಿ ಸಾವಿತ್ರಿ, ಬಿಇಓ ರಮೇಶ್, ಜಿ ಮಟ್ಟದ ಅಧಿಕಾರಿ ಗಳು, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಅಧಿಕಾರಿಗಳು ಪಾಲ್ಗೊಂಡಿದ್ದರು.

