ಜಿಲ್ಲಾ ಸುದ್ದಿತಾಜಾ ಸುದ್ದಿ

ಪದವೀಧರರು-ಶಿಕ್ಷಕರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಿ : ಡಿಸಿ

Share Below Link

ಶಿವಮೊಗ್ಗ : ಮುಂದಿನ ಕೆಲವು ತಿಂಗಳುಗಳಲ್ಲಿ ನಡೆಯಲಿರುವ ವಿಧಾನ ಪರಿಷತ್ ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯ ಅರ್ಹ ಪದವೀಧರರು ಹಾಗೂ ಶಿಕ್ಷಕರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಿ ಕೊಳ್ಳುವಂತೆ ಜಿಧಿಕಾರಿ ಡಾ| ಸೆಲ್ವಮಣಿ ಅವರು ಕರೆ ನೀಡಿದರು.
ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಏರ್ಪಡಿಸಿದ್ದ ಎ ರಾಜಕೀಯ ಪಕ್ಷಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸಕ್ತ ಚುನಾವಣೆಯಲ್ಲಿ ಪ್ರeವಂತರಾದ ಪದವೀಧರರು ಹಾಗೂ ಶಿಕ್ಷಕರು ಮತ ಚಲಾವಣೆ ಮಾಡಬೇಕಾಗಿರುವುದರಿಂದ ಅರ್ಹರು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವ ಮೂಲಕ, ನಿಗಧಿಪಡಿಸಿದ ದಿನಾಂಕ ದಂದು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ, ಪ್ರಜಪ್ರಭುತ್ವದ ಯಶಸ್ಸಿಗೆ ಸಹಕರಿ ಸುವಂತೆ ಮನವಿ ಮಾಡಿದರು.


ಪ್ರಸಕ್ತ ಅವಧಿಯಲ್ಲಿ ಹೊಸ ದಾಗಿ ಸುಮಾರು ೧ಲಕ್ಷ ಮತದಾರ ರನ್ನು ಪಟ್ಟಿಗೆ ಸೇರಿಸುವ ಉದ್ದೇಶ ಹೊಂದಲಾಗಿದೆ ಎಂದ ಅವರು, ಕಳೆದ ಸಾಲಿನಲ್ಲಿ ಅನೇಕ ಪ್ರಯತ್ನಗಳ ನಂತರ ಸುಮಾರು ೨೭,೦೦೦ ಮತದಾರರನ್ನು ಮಾತ್ರ ನೋಂದಾಯಿಸಲಾಗಿತ್ತು. ಅರ್ಹರು ಸ್ವಯಂ ಪ್ರೇರಿತರಾಗಿ ಹೆಸರನ್ನು ನೋಂದಾಯಿಸಿಕೊಳ್ಳಲು ಮುಂದಾಗುವಂತೆ ಅವರು ಮನವಿ ಮಾಡಿದರು.
ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆಗೊಳಿಸುವ ಸಂಬಂಧ ಹೆಚ್ಚಿನ ಸಂಖ್ಯೆಯ ಪದವೀಧರರು ಇರುವ ವಿವಿಧ ಇಲಾಖೆಗಳು ಹಾಗೂ ಸಂಘ-ಸಂಸ್ಥೆಗಳ ಮುಖ್ಯಸ್ಥ ರುಗಳಿಗೆ ಹಾಗೂ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಶಿಕ್ಷಣ ಇಲಾಖೆಗಳ ಮುಖ್ಯಸ್ಥರ ಸಭೆ ಕರೆದು ಮಾಹಿತಿ ನೀಡಿ, ನಿಗಧಿತ ನಮೂನೆಯಲ್ಲಿ ನೋಂದಣಿಗೆ ಅರ್ಜಿಯನ್ನು ನೀಡಿ ಮಾಹಿತಿ ಪಡೆದುಕೊಳ್ಳುವಂತೆ ಸೂಚಿಸಲಾಗು ವುದು. ಇದರಿಂದಾಗಿ ಹೆಚ್ಚಿನ ಸಂಖ್ಯೆಯ ಮತದಾರರು ಪಟ್ಟಿಗೆ ಸೇರ್ಪಡೆಗೊಳ್ಳುವ ಆಶಯವಿದೆ ಎಂದವರು ನುಡಿದರು.
ಈ ಚುನಾವಣೆಯ ನೋಂದಣಿ ಮತ್ತು ಮತದಾನಕ್ಕೆ ಸಂಬಂಧಿಸಿದಂತೆ ಎ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಕಾರ್ಯಕ್ಷೇತ್ರದಲ್ಲಿ ಏಜೆಂಟ ರನ್ನು ನೇಮಿಸಿ, ಅರ್ಹ ಮತದಾರರನ್ನು ಗುರುತಿಸಿ, ನಿಗಧಿತ ನಮೂನೆಯಲ್ಲಿ ಅರ್ಜಿ ಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಗೊಳಿಸಲು ಸಹಕರಿಸುವಂತೆ ಅವರು ಮನವಿ ಮಾಡಿದರು.
ಈ ಚುನಾವಣೆಗೆ ಸಂಬಂಧಿಸಿದಂತೆ ಸಕಾಲದಲ್ಲಿ ನಿಯಮಾನುಸಾರ ನಡೆಸುವ ಪ್ರಕ್ರಿಯೆಗಳು ನಡೆಯುವಂತೆ ನೋಡಿಕೊಳ್ಳಲು ಜಿಯಲ್ಲಿನ ಸ್ಥಳೀಯ ಸಂಸ್ಥೆಗಳ ಆಯುಕ್ತರು, ವಿಧಾನಸಭಾ ಹಾಗೂ ತಾಲೂಕು ಗಳ ಮತದಾರರ ಸಹಾಯಕ ನೋಂದಣಾದಿಕಾರಿಗಳು, ಪತ್ರಾಂಕಿತ ಅಧಿಕಾರಿಗಳನ್ನು ನಿಯೋಜಿಸಿ, ಅವರಿಗೆ ಸೂಕ್ತ ತರಬೇತಿಯನ್ನು ನೀಡಲಾಗುವುದು ಎಂದರು.
ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆಗೊಳಿಸಲು ಇದೇ ಮಾಹೆಯ ೩೦ರಂದು ಜಿ ಚುನಾವಣಾಧಿಕಾರಿಗಳು ಪ್ರಕಟಣೆ ಹೊರಡಿಸಲಿzರೆ. ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳ ಅರ್ಹ ಮತದಾರರು ನ.೬ರೊಳಗಾಗಿ ಹೆಸರನ್ನು ನೋಂದಾಯಿಸಿ ಕೊಳ್ಳಬೇಕು ಎಂದು ತಿಳಿಸಿರುವ ಅವರು, ಪದವೀಧರರ ಕ್ಷೇತ್ರಕ್ಕೆ ಹೆಸರು ನೋಂದಾಯಿಸುವವರು ೨೦೨೩ರ ನ.೧ಕ್ಕೆ ಅನ್ವಯಗೊಳ್ಳು ವಂತೆ ಮೂರು ವರ್ಷಗಳ ಹಿಂದಿನ ದಿನಾಂಕಕ್ಕೆ ಭಾರತದ ಸರಹದ್ದಿನಲ್ಲಿನ ಯಾವುದೇ ಅಂಗೀಕೃತ ವಿವಿ ಪದವೀಧರರಾಗಿದ್ದು, ಕ್ಷೇತ್ರ ವ್ಯಾಪ್ತಿಯ ನಿವಾಸಿಯಾಗಿರಬೇಕು. ಪದವೀಧರರ ಕ್ಷೇತ್ರಕ್ಕೆ ನಿಗಧಿಪಡಿಸಿದ ಅರ್ಜಿ ನಮೂನೆ-೧೮, ಪದವಿ ಪ್ರಮಾಣಪತ್ರ, ಸರ್ಕಾರಿ ಅಧಿಕಾರಿ ಅಥವಾ ಸಿಬ್ಬಂದಿಯಾಗಿ ದ್ದಲ್ಲಿ ನಿಗಧಿಪಡಿಸಿದ ನಮೂನೆಯಲ್ಲಿ ದೃಢೀಕರಿಸಿದ ಮಾಹಿತಿ, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ಆಧಾರ್ ಸೇರಿದಮತೆ ಯಾವುದೇ ಸಾಮಾನ್ಯ ನಿವಾಸಿ ದಾಖಲೆಗಳನ್ನು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ದೃಢೀಕರಿಸಿ, ತಾಲೂಕು, ಮಹಾ ನಗರಪಾಲಿಕೆ ಮತ್ತು ನಗರಸಭೆಗಳಲ್ಲಿ ತೆರೆಯಲಾದ ಕೌಂಟರುಗಳಲ್ಲಿ ಸಲ್ಲಿಸುವಂತೆ ಅವರು ಸೂಚಿಸಿದರು.
ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಿಚ್ಚಿಸುವ ಶಿಕ್ಷಕರು ೨೦೨೩ರ ನ.೧ಕ್ಕೆ ಅನ್ವಯ ಗೊಳ್ಳುವಂತೆ ಆರು ವರ್ಷಗಳ ಹಿಂದಿನ ದಿನಾಂಕಕ್ಕೆ ಅಂದರೆ, ೨೦೧೭ರ ಅಕ್ಟೋಬರ್ ನಂತರದಲ್ಲಿ ಮೂರು ವರ್ಷಗಳು ಶಿಕ್ಷಕರಾಗಿ ಕಾರ್ಯನಿರ್ವಹಿಸಿದ ಕುರಿತು ನಮೂನೆ-೧೯ರ ಜೊತೆಗೆ ಸಕ್ಷಮ ಪ್ರಾಧಿಕಾರದಿಂದ ಪ್ರಮಾಣ ಪತ್ರ ಪಡೆದು, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ಆಧಾರ್ ಸೇರಿದಮತೆ ಯಾವುದೇ ಸಾಮಾನ್ಯ ನಿವಾಸಿ ದಾಖಲೆಗಳನ್ನು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ದೃಢೀಕರಿಸಿ, ತಾಲೂಕು, ಮಹಾ ನಗರಪಾಲಿಕೆ ಮತ್ತು ನಗರಸಭೆಗಳಲ್ಲಿ ತೆರೆಯಲಾದ ಕೌಂಟರುಗಳಲ್ಲಿ ಸಲ್ಲಿಸಿ ಹೆಸರನ್ನು ನೋಂದಾಯಿಸಿ ಕೊಳ್ಳಬಹುದಾಗಿದೆ. ಎಂದವರು ತಿಳಿಸಿದರು.
ಈ ಚುನಾವಣೆ ಸಂಬಂಧದ ಕುರಿತು ಅಗತ್ಯ ವಿಷಯಗಳನ್ನು ಚರ್ಚಿಸಲು ಮತ್ತೊಮ್ಮೆ ಸಭೆ ಕರೆದು ಸಮಾಲೋಚನೆ ನಡೆಸಲಾಗುವುದು ಎಂದು ಜಿಧಿಕಾರಿ ಡಾ| ಸೆಲ್ವಮಣಿ ಅವರು ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ರಾಜಕೀಯ ಪಕ್ಷಗಳ ಮುಖಂಡರು ಮಾತನಾಡಿ, ಮತದಾರರ ಯಾದಿಗೆ ಹೆಸರು ಸೇರ್ಪಡೆ ಗೊಳಿಸಲು ಏಕರೀತಿಯ ಅರ್ಜಿ ನಮೂನೆಗಳನ್ನು ಚುನಾವಣಾ ಶಾಖೆಯಿಂದಲೇ ನೀಡುವಂತೆ ಹಾಗೂ ಸಲ್ಲದ ಕಾರಣಕ್ಕಾಗಿ ಅರ್ಜಿಗಳನ್ನು ವಜಗೊಳಿಸದಂತೆ ಜಿಧಿಕಾರಿಗಳಿಗೆ ಮನವಿ ಮಾಡಿದರು.
ಸಭೆಯಲ್ಲಿ ಅಪರ ಜಿಧಿಕಾರಿ ಸಿದ್ದಲಿಂಗರೆಡ್ಡಿ ಸೇರಿದಂತೆ ಜಿಯ ಎ ರಾಜಕೀಯ ಪಕ್ಷ ಗಳ ಮುಖಂಡರು, ಸ್ಪರ್ಧಾಕಾಂಕ್ಷಿ ಗಳು ಹಾಗೂ ಜಿ ಚುನಾವಣಾ ಶಾಖೆಯ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು.