ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಯುವ ಜನರಲ್ಲಿ ನಾಯಕತ್ವ – ಸೇವಾಗುಣ ಬೆಳೆಸಲು ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ಎಲೈಟ್ ರಚನೆ…

Share Below Link

ಶಿವಮೊಗ್ಗ: ಯುವಜನರಲ್ಲಿ ಸೇವಾ ಮನೋಭಾವನೆ ಹಾಗೂ ನಾಯಕತ್ವ ಗುಣ ಬೆಳೆಸುವಲ್ಲಿ ರೋಟರಿ ಸಂಸ್ಥೆಯು ಮಹತ್ತರ ಪಾತ್ರ ವಹಿಸುತ್ತದೆ. ಯುವಜನತೆ ಹೆಚ್ಚು ಹೆಚ್ಚು ಸೇವಾ ಚಟುವಟಿಕೆ ಗಳನ್ನು ನಡೆಸಬೇಕು ಎಂದು ರೋಟರಿ ಜಿ ೩೧೮೨ರ ಜಿ ರೋಟರ್‍ಯಾಕ್ಟ್ ಪ್ರತಿನಿಧಿ, ಮಣಿಪಾಲ್ ಸೆಂಟ್ರಲ್ ರೋಟರ್‍ಯಾಕ್ಟ್ ಕ್ಲಬ್‌ನ ಮಹಾಲಸಾ ಕಿಣಿ ಅಭಿಪ್ರಾಯಪಟ್ಟರು.
ನೂತನವಾಗಿ ರೋಟರಿ ಕ್ಲಬ್ ಉತ್ತರ ಎಲೈಟ್ ಗ್ರೂಪ್ ರಚಿಸಿ ಮಾತನಾಡಿದ ಅವರು, ಯುವಜನರು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಪೂರಕವಾಗಿ ಕಾರ್ಯ ಚಟುವಟಿಕೆಗಳು ನಡೆಯುತ್ತವೆ. ಮುಂದಿನ ದಿನಗಳಲ್ಲಿ ಸಮಾಜಮುಖಿಯಾಗಿ ಕೆಲಸ ಮಾಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಎಲೈಟ್ ಸಂಸ್ಥೆಯು ಪ್ರಮುಖ ವಾಗಿ ಸೇವಾ ಮನೋಭಾವ ಮತ್ತು ನಾಯಕತ್ವ ಗುಣ ಬೆಳಸಿಕೊಳ್ಳಲು ಪೂರಕವಾಗುವ ನಿಟ್ಟಿನಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವ ಉದ್ಯಮಿಗಳನ್ನು ಒಳಗೊಂಡ ಸಮುದಾಯ ಆಧಾರಿತ ಸದಸ್ಯರನ್ನು ಒಳಗೊಂಡಿರುವುದು ವಿಶೇಷತೆ ಆಗಿರುವುದು ಅತ್ಯಂತ ಸಂತೋಷದ ಸಂಗತಿ ಎಂದರು.
ನೂತನ ಅಧ್ಯಕ್ಷರು ಮತ್ತು ಕಾರ್ಯದರ್ಶಿಯಾಗಿ ಪೆಸಿಟ್ ಇಂಜಿನಿಯರಿಂಗ್ ಕಾಲೆಜು ವಿದ್ಯಾರ್ಥಿಗಳಾದ ಆದಿತ್ಯ.ಎಸ್ ಮತ್ತು ಧನ್ವಿರಾವ್ ಅಧಿಕಾರ ವಹಿಸಿಕೊಂಡರು. ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ಅಧ್ಯಕ್ಷ ಜಗದೀಶ್ ಸಜ ಅಧ್ಯಕ್ಷತೆ ವಹಿಸಿದ್ದರು.
ಜಿ ಮಾಜಿ ಗವರ್ನರ್ ಪ್ರೊ. ಎ.ಎಸ್.ಚಂದ್ರಶೇಖರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಸಹಾಯಕ ಗೌವರ್ನರ್ ಸುನೀತಾ ಶ್ರೀಧರ್, ಕಾರ್ಯದರ್ಶಿ ವೆಂಕಟೇಶ್ ಮತ್ತು ಯುವಜನ ಸೇವಾ ನಿರ್ದೇಶಕ ಬಸವರಾಜ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಾರಿಜ ಜಗದೀಶ್ ನಿರೂಪಿಸಿದರು.