ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಪಾಗಲ್ ಪ್ರೇಮಿಯಿಂದ ಕಾಲೇಜ್ ಕ್ಯಾಂಪಸ್‌ನಲ್ಲೇ ಯುವತಿ ಬರ್ಭರ ಹತ್ಯೆ ಖಂಡಿಸಿ ಭುಗಿಲೆದ್ದ ಆಕ್ರೋಶ…

Share Below Link

ಹುಬ್ಬಳ್ಳಿ: ಕಾಲೇಜು ಕ್ಯಾಂಪಸ್ ನಲ್ಲಿ ಕಾರ್ಪೊರೇಟರ್ ಮಗಳ ಭೀಕರ ಹತ್ಯೆ ವಿರುದ್ಧ ಹುಬ್ಬಳ್ಳಿಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಯುವತಿ ಕೊಲೆ ಖಂಡಿಸಿ ನೂರಾರು ಸಂಖ್ಯೆಯಲ್ಲಿ ಹಿಂದೂಪರ ಹಾಗೂ ವಿದ್ಯಾರ್ಥಿ ಸಂಘಟನೆಗಳ ಕಾರ್ಯ ಕರ್ತರು ಜಮಾಯಿಸಿ ನಗರದಲ್ಲಿ ಭಾರೀ ಪ್ರತಿಭಟನೆ ನಡೆಸಿzರೆ.
ಎಬಿವಿಪಿಯಿಂದ ಮಹಾನಗರ ವ್ಯಾಪ್ತಿಯ ಕಾಲೇಜು ಬಂದ್‌ಗೆ ಕರೆ ನೀಡಲಾಗಿದೆ. ಹಿಂದೂ ಜಗರಣ ವೇದಿಕೆ, ಶ್ರೀರಾಮಸೇನೆ, ವಿಶ್ವ ಹಿಂದೂ ಪರಿಷತ್‌ನಿಂದ ಬಿವಿಬಿ ಕಾಲೇಜು ಎದುರು ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನಾಕಾರರು ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿzರೆ. ಈ ಹಿನ್ನೆಲೆಯಲ್ಲಿ ನಗರದಡೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಜಿಹಾದಿ ಫಯಾಜ್‌ನನ್ನು ಗಲ್ಲಿಗೇರಿಸಿ ಎಂದು ಪೋಸ್ಟರ್ ಹಿಡಿದು ವಿದ್ಯಾರ್ಥಿಗಳು ಬೀದಿಗಿಳಿದಿ zರೆ. ಪ್ರತಿಭಟನೆಯಿಂದಾಗಿ ಬಿವಿಬಿ ಕಾಲೇಜು ರಸ್ತೆ ಬಂದ್ ಆಗಿದೆ. ವಿದ್ಯಾರ್ಥಿಗಳು ರಸ್ತೆಯ ಪ್ರತಿಭಟನೆಗೆ ಕುಳಿತಿzರೆ. ಸ್ಥಳಕ್ಕೆ ಪೊಲೀಸ್ ಆಯುಕ್ತರು ಬರಬೇಕು ಎಂದು ಪಟ್ಟು ಹಿಡಿದಿzರೆ. ಜಸ್ಟಿಸ್ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿzರೆ.
ಪ್ರತಿಭಟನಾಕಾರರು ಹತ್ಯೆಯಾದ ಯುವತಿ ನೇಹಾಳ ದೊಡ್ಡ ಕಟೌಟ್ ಮಾಡಿ ತಂದಿzರೆ. ಕಟೌಟ್ ಮೇಲೆ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆಯಲಾಗಿದೆ. ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಫಯಾಜ್ ಫೋಟೊ ಮೇಲೆ ಜಿಹಾದಿ ಎಂದು ಬರೆಯಲಾಗಿದೆ. ಫಯಾಜ್ ಫೋಟೊಗೆ ಚಪ್ಪಲಿಯಿಂದ ಹೊಡೆದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿzರೆ.
ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಗ್ರತಾ ಕ್ರಮ ವಹಿಸಲಾಗಿತ್ತು. ಬಿವಿಬಿ ಕಾಲೇಜ್‌ನಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಒಂದು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ೩ ಸಿಪಿಐ, ೫ ಪಿಎಸ್‌ಐ ಹಾಗೂ ೫೦ ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿ ನಿಯೋಜಿಸಲಾಗಿದೆ.
ಬಳಿಕ ಪ್ರತಿಭಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಆಗಮಿಸಿ ವಿದ್ಯಾರ್ಥಿ ಸಂಘಟನೆ ಮುಖಂಡರ ಜೊತೆ ಮಾತುಕತೆ ನಡೆಸಿzರೆ. ಈ ವೇಳೆ ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿzರೆ.