ಜಿಲ್ಲಾ ಸುದ್ದಿತಾಜಾ ಸುದ್ದಿ

ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್‌ಪಿಗೆ ಮನವಿ…

Share Below Link

ಶಿವಮೊಗ್ಗ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಅವಹೇಳನಕಾರಿ ಯಾಗಿ ಹೇಳಿಕೆ ನೀಡಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕಠಿಣಕ್ರಮಕ್ಕೆ ಆಗ್ರಹಿಸಿ ಅಖಿಲ ಕರ್ನಾಟಕ ಡಿಕೆಶಿ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ, ಆರ್. ಮೋಹನ್ ಅವರ ನೇತೃತ್ವದಲ್ಲಿ ಇಂದು ಜಿಲ್ಲಾ ರಕ್ಷಣಾಧಿಕಾರಿಗಲಿಗೆ ಮನವಿ ಸಲ್ಲಿಸಲಾಯಿತು.
ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ನಿಯಮಗಳನ್ನು ಪಾಲಿಸುತ್ತಿದೆ. ಕೆ.ಎಸ್. ಈಶ್ವರಪ್ಪ ಜಲಸಂಪನ್ಮೂಲ ಸಚಿವರೂ ಆಗಿದ್ದವರು. ಅವರಿಗೆ ಇದರ ಅರ್ಥವಾಗದೇ ಎಂದು ಪ್ರಶ್ನಿಸಿದ ಮೋಹನ್, ಡಿಕೆಶಿ ಅವರನ್ನು ನೀರಿನ ಕಳ್ಳ ಎಂದು ಅವಮಾನಿಸಿದ್ದಾರೆ. ಆದ್ದರಿಂದ ಈಶ್ವರಪ್ಪ ಅವರ ವಿರುದ್ಧ ಕಠಿಣಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು.
ರಾಜ್ಯದಲ್ಲಿ ಬರಗಾಲ ಇರುವುದು ನಿಜ. ಜಲಾಶಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ನೀರು ಇಲ್ಲ ಎಂಬುದೂ ನಿಜ. ಆದರೆ, ಡಿ.ಕೆ. ಶಿವಕುಮಾರ್ ಅವರ ಪಾತ್ರ ಇದರಲ್ಲಿ ಏನಿದೆ? ನ್ಯಾಯಾಲ ಯದ ಆದೇಶಗಳನ್ನು ಗೌರವಿಸ ಬೇಕು. ಅದಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಸಲಹೆ ಕೊಡಬಹು ದಿತ್ತು. ಆದರೆ, ನೀರಿನ ಕಳ್ಳ ಎಂದು ಹೀಯಾಳಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ದರು.
ಈಶ್ವರಪ್ಪ ತನ್ನ ಇರುವಿಕೆಗಾಗಿ ಇಂತಹ ಅಸಂಬದ್ಧ ಹೇಳಿಕೆ ನೀಡು ತ್ತಿದ್ದಾರೆ. ಕೆ.ಎಸ್. ಈಶ್ವರಪ್ಪ ಅವರಂತೆ ಡಿ.ಕೆ. ಶಿವಕುಮಾರ್ ಮನೆಯಲ್ಲಿ ನೋಟು ಎಣಿಸುವ ಯಂತ್ರ ಇಟ್ಟುಕೊಂಡಿಲ್ಲ. ಯಾರು ಕಳ್ಳರು? ಯಾರು ಸುಳ್ಳರು? ಎಂದು ಈ ನಾಡಿನ ಜನಕ್ಕೆ ಗೊತ್ತಿ ದೆ. ಇನ್ನಾದರೂ ಡಿ.ಕೆ. ಶಿವಕು ಮಾರ್ ಅವರ ವಿರುದ್ಧ ಮಾತನಾ ಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಒ. ಶಿವಕುಮಾರ್, ಜಿಲ್ಲಾ ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟ, ಕೆಪಿಸಿಸಿ ಸದಸ್ಯ ವೈ.ಹೆಚ್. ನಾಗ ರಾಜ್, ಪ್ರಮುಖರಾದ ರಂಗ ಸ್ವಾಮಿ ಗೌಡ, ಟಾಕ್ರಾನಾಯ್ಕ್, ಸಿದ್ದಪ್ಪ, ಗಣೇಶ್, ಶ್ರೀಕಾಂತ್, ಮಂಜು ನಾಯ್ಕ್, ಸುರೇಶ್ ಕಲ್ಮನೆ, ಮುತ್ತಣ್ಣ ಶಿಕಾರಿಪುರ, ಅಮರ್, ಕುರುವಳ್ಳಿ ನಾಗರಾಜ್, ಗಾಜನೂರು ಸುದೀಪ್, ರಾಮ ಚಂದ್ರನಾಯ್ಕ್, ಸತ್ಯನಾರಾ ಯಣ್, ಗಾಜನೂರು ನಾಗ ರಾಜ್, ಲೋಕೇಶ್ ಮೊದಲಾದವರಿದ್ದರು.