ಜಿಲ್ಲಾ ಸುದ್ದಿತಾಜಾ ಸುದ್ದಿ

ಆ.೨೨: ರಾಜ್ಯ ಗ್ರಾ.ಪಂ. ನೌಕರರ ಸಿಐಟಿಯು ಪ್ರತಿಭಟನೆ

Share Below Link

ಶಿವಮೊಗ್ಗ: ಗ್ರಾಮ ಪಂಚಾಯಿತಿ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸು ವಂತೆ ಒತ್ತಾಯಿಸಿ ಆ.೨೨ರಂದು ಬೆಳಿಗ್ಗೆ ೧೦ಗಂಟೆಗೆ ಜಿ.ಪಂ.ಮುಂಭಾ ಗದಲ್ಲಿ ಅನಿರ್ಧಿಷ್ಟಾ ಧರಣಿ ಆರಂ ಭಿಸಲಾಗುವುದು ಎಂದು ರಾಜ್ಯ ಗ್ರಾಪಂ ನೌಕರರ ಸಂಘದ ಜಿ ಪ್ರಧಾನ ಕಾರ್ಯದರ್ಶಿ ಪರಮೇಶ್ ಆರ್. ಹೇಳಿದರು.
ಅವರು ಇಂದು ಪತ್ರಿಕಾಗೋ ಷ್ಠಿಯಲ್ಲಿ ಮಾತನಾಡಿ, ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾ ಯತ್ ರಾಜ್ ಇಲಾಖೆಯಲ್ಲಿ ಹಲವರು ವರ್ಷಗಳಿಂದ ಗ್ರಾ.ಪಂ. ಗಳಲ್ಲಿ ಕರ ವಸೂಲಿಗಾರ, ವಾಟರ್ ಮ್ಯಾನ್, ಜವಾನ, ಕ್ಲರ್ಕ್, ಸ್ವಚ್ಚತ ಗಾರ ಹೀಗೆ ವಿವಿಧ ಹುzಗಳನ್ನು ನಿರ್ವಹಿಸುತ್ತಾ ಬಂದಿದ್ದೇವೆ. ಸರ್ಕಾರ ನೌಕರರ ಹಿತದಷ್ಠಿಯಿಂದ ಅನೇಕ ಆದೇಶಗಳನ್ನು ಮಾಡಿದ್ದರೂ ಕೂಡ ನಿಗದಿತ ಸಮಯದೊಳಗೆ ಅನುಷ್ಠಾನಗೊಳ್ಳುತ್ತಿಲ್ಲ. ಗ್ರಾಪಂ ನೌಕರರು ಸರ್ಕಾರದ ಸೌಲಭ್ಯಗ ಳಿಂದ ವಂಚಿತರಾಗುತ್ತಿzರೆ. ನಮ್ಮ ನೌಕರರ ಸಂಘ ಸಿಐಟಿಯುನೊ ಂದಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಕೂಡ ನಮ್ಮ ಬೇಡಿಕೆಗಳಿ ಈಡೇರಿಲ್ಲ. ಹಾಗಾಗಿ ಈ ಧರಣಿ ಹಮ್ಮಿಕೊಳ್ಳಲಾಗಿದೆ ಎಂದರು.
೨೦೧೭ರ ಅ. ೩೧ರ ಒಳಗೆ ಗ್ರಾ.ಪಂ.ಸಭಾ ನಡುವಳಿ ಮೂಲಕ ಕರ್ತವ್ಯಕ್ಕೆ ನೇಮಕ ಆದಂತಹ ವಿವಿಧ ವಂದದ ನೌಕರರಿಗೆ ಏಕ ಕಾಲದಲ್ಲಿ ಅನುಮೋದನೆ ನೀಡಬೇಕು. ನೌಕರರ ಸಮಸ್ಯೆಗಳಿಗೆ ಸ್ಪಂದಿಸದ ವಿಷಯ ನಿರ್ವಾಹಕ ರನ್ನು ಬದಲಾವಣೆ ಮಾಡಬೇಕು. ಗ್ರಾ.ಪಂ.ನೌಕರರಿಗೆ ಸುರಕ್ಷತಾ ಕಿಟ್, ಸಮವಸ್ತ್ರ, ಐಡಿ ಕಾರ್ಡ್ ಅಂತ್ಯ ಸಂಸ್ಕಾರಕ್ಕೆ ೧೦ ಸಾವಿರ ಸಹಾಯ ಧನ. ಕನಿಷ್ಠ ವೇತನ ತುಟ್ಟಿ ಭತ್ಯೆ ನೀಡಬೇಕು. ಜಬ್ ಚಾರ್ಟ್‌ನಲ್ಲಿ ನಮೂದಿಸಿರುವ ಕರ್ತವ್ಯಗಳನ್ನು ಬಿಟ್ಟು ಅನ್ಯ ಕೆಲಸಕ್ಕೆ ನೇಮಕ ಮಾಡ ಬಾರದು ಎಂದು ಅವರು ಆಗ್ರಹಿಸಿ ದರು.ಕ್ಲರ್ಕ್, ಡಾಟಎಂಟ್ರಿ ಆಪರೇ ಟರ್, ನೌಕಕರಿಗೆ ಕಾರ್ಯದರ್ಶಿ ಗ್ರೇಡ್೨, ಎಸ್‌ಡಿಎಎ ಹುzಗಳಿಗೆ ಮುಂಬಡ್ತಿ ಇರುವ ಲೋಪದೋಷ ಗಳನ್ನು ಸರಿಪಡಿಸಬೇಕು. ಖಾಲಿ ಇರುವ ಹುzಗಳನ್ನು ಗುತ್ತಿಗೆ ಆಧಾರದಲ್ಲಿ ಕೈ ಬಿಟ್ಟು ಸರ್ಕಾರದ ಅಧಿಸೂಚನೆಯಂತೆ ೧೧೨ ಮತ್ತು ೧೧೩ರಂತೆ ನೇಮಕ ಮಾಡಿ ಕೊಳ್ಳಬೇಕು ಎಂದರು.
ಪತ್ರಕಾಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಎಂ. ಸಂತೋ ಷ್, ಚೆನ್ನಬಸಪ್ಪ, ಉಮೇಶ್, ಸ್ವಾಮಿ, ರಂಗಸ್ವಾಮಿ ಇದ್ದರು.