ಜಿಲ್ಲಾ ಸುದ್ದಿತಾಜಾ ಸುದ್ದಿ

ಪ್ರವಾಸದಿಂದ ವೈವಿಧ್ಯಮಯ ಸಂಸ್ಕೃತಿ ಪರಂಪರೆಯ ಅರಿವು…

Share Below Link

ಶಿವಮೊಗ್ಗ: ಪ್ರವಾಸ ಕೈಗೊಳ್ಳುವುದರಿಂದ ರಾಜ್ಯಗಳ ವೈವಿಧ್ಯಮಯ ಸಂಸ್ಕೃತಿಯ ಪರಿಚಯ ಹಾಗೂ ತಿಳವಳಿಕೆ ಮೂಡುತ್ತದೆ. ವಿವಿಧ ರಾಜ್ಯಗಳ ಜನರ ಜೀವನಶೈಲಿ ತಿಳಿಯುತ್ತದೆ ಎಂದು ಶಿವಮೊಗ್ಗ ಬೈಕ್ ಕ್ಲಬ್ ಅಧ್ಯಕ್ಷ ಸಚ್ಚಿದಾನಂದ ಹೇಳಿದರು.
ಯೂತ್ ಹಾಸ್ಟೆಲ್ಸ್ ಅಸೋಸಿ ಯೇಷನ್ ಆಫ್ ಇಂಡಿಯ ತರು ಣೋದಯ ಘಟಕದ ವತಿಯಿಂದ ನೇಪಾಳ ದಿಂದ ಶಿವಮೊಗ್ಗದ ಗೋಪಾಳದ ವರೆಗೆ ಆಯೋಜಿಸಿ ರುವ ಬೈಕ್ ರ್‍ಯಾಲಿ ನಡೆಸುತ್ತಿರುವ ಸಾಹಸಿಗರಿಗೆ ಬೀಳ್ಕೋಡುಗೆ ಕಾರ್‍ಯ ಕ್ರಮದಲ್ಲಿ ಭಾಗವಹಿಸಿ ಮಾತನಾ ಡಿದ ಅವರು ಈಗಾಗಲೇ ಬೈಕ್ ಮೂಲಕ ಶಿವಮೊಗ್ಗದಿಂದ ಜಮ್ಮು ಕಾಶ್ಮೀರ, ಕನ್ಯಾಕುಮಾರಿ, ಅಸ್ಸಾಂ ನಿಂದ ಗುಜರಾತ್ ಹೀಗೆ ದೇಶಾ ದ್ಯಂತ ಸಂಚರಿಸಿದ್ದೇವೆ. ಇದೀಗ ನೇಪಾಳ ದಿಂದ ಶಿವಮೊಗ್ಗದವ ರೆಗೂ ಬೈಕ್ ರ್‍ಯಾಲಿ ನಡೆಸಲಾ ಗುತ್ತಿದೆ ಎಂದು ತಿಳಿಸಿದರು.
ಪ್ರಥಮವಾಗಿ ಅಂತರ ರಾಷ್ಟ್ರೀಯ ಬೈಕ್ ಸವಾರಿಯ ಮುಂದಾಳತ್ವ ವಹಿಸಿರುವ ಅ.ನಾ. ವಿಜಯೇಂದ್ರ ಮಾತನಾಡಿ, ಅಂತರಾಷ್ಟ್ರೀಯ ರೋಟರಿ ಕ್ಲಬ್, ವಾಣಿಜ್ಯ ಸಂಘ, ಯೂತ್ ಹಾಸ್ಟೆಲ್ಸ್ ಸಹಕಾರ ನೀಡುತ್ತಿದೆ. ಪ್ರವಾಸೋದ್ಯಮ ಉನ್ನತೀಕರಣ ಕ್ಕಾಗಿ ಶಿವಮೊಗ್ಗಕ್ಕೆ ಬನ್ನಿ, ಸೇಫ್ ಡ್ರೈವಿಂಗ್, ಮಹಿಳಾ ಸಬಲೀ ಕರಣ ವಿಚಾರದ ಜಗೃತಿ ರ್‍ಯಾಲಿ ಯಲ್ಲಿ ಮಾಡಲಾಗುತ್ತದೆ ಎಂದು ಹೇಳಿದರು.ಯೂತ್ ಹಾಸ್ಟೆಲ್ಸ್ ಚೆರ್‌ಮನ್ ಎಸ್.ಎಸ್.ವಾಗೇಶ್ ಮಾತನಾಡಿ, ಎಲ್ಲ ಹನ್ನೊಂದು ಸವಾರರು ನಮ್ಮ ತರುಣೋದಯ ಘಟಕದ ಅಜೀವ ಸದಸ್ಯರು. ನಮಗೆ ಹೆಮ್ಮೆ ತರುವ ವಿಚಾರ ಎಲ್ಲರ ಪ್ರಯಾಣ ಸುಖಕರವಾ ಗಿರಲಿ ಎಂದರು.
ಜಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸದಸ್ಯರು ಎನ್.ಗೋಪಿನಾಥ್ ಮಾತನಾಡಿ, ಉದ್ದಿಮೆ ದಾರರಿಗೆ ಧೈರ್ಯ ಅತೀ ಮುಖ್ಯ. ಈ ರೀತಿಯ ಸಾಹಸ ಮಾಡುವ ಪ್ರವೃತಿಯವರು ಎ ಸಂದರ್ಭದಲ್ಲಿಯೂ ಎದೆಗುಂ ದದೆ ಮುನ್ನಡೆಯುತ್ತಾರೆ. ನಮ್ಮ ವಾಣಿಜ್ಯ ಸಂಘದ ೬೦ನೇ ವರ್ಷದ ಸಂಭ್ರಮ ಆಚರಣೆಯ ಪ್ರಥಮ ಕಾರ್ಯಕ್ರಮವಾಗಿ ಅಂತರರಾ ಷ್ಟ್ರೀಯ ಸಾಹಸ ಕಾರ್ಯಕ್ರಮಕ್ಕೆ ಉತ್ತೇಜನ ನೀಡುವ ಮೂಲಕ, ಉದ್ದಿಮೆದಾರರು ಸಾಹಸ ಕಾರ್‍ಯ ಗಳಲ್ಲಿ ತೊಡಗಿಸಿಕೊಳ್ಳಲು ಸಹ ಕಾರ ನೀಡುವುದಾಗಿ ತಿಳಿಸಿದರು.
ಪ್ರಮುಖರಾದ ನಾಗರಾಜ್, ಜಿ.ವಿಜಯಕುಮಾರ್, ರಮೇಶ್ ಬಾಬು, ಶ್ರೀಕಾಂತ್, ಗಿಡ್ಡಪ್ಪ, ಮಂಜುನಾಥ್, ಗಿರೀಶ್ ಕಾಮತ್, ವಿಜಯೇಂದ್ರ, ರವೀಂದ್ರ, ವಿನಾಯಕ್ ಬಾಯರಿ, ಮಮತಾ, ಭಾರತಿ, ಪ್ರಕೃತಿ, ನಾಗರಾಜ್ ಮುಂತಾದವರಿದ್ದರು.