ಜಿಲ್ಲಾ ಸುದ್ದಿತಾಜಾ ಸುದ್ದಿ

ರಕ್ತದಾನ ಮಹತ್ವದ ಅರಿವು ಪ್ರತಿಯೊಬ್ಬರಿಗೂ ಅವಶ್ಯಕ

Share Below Link

ಶಿವಮೊಗ್ಗ: ಅಪಘಾತ ಸಂದರ್ಭಗಳಲ್ಲಿ ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಹಾಗೂ ಪ್ರಥಮ ಚಿಕಿತ್ಸೆ ನೀಡುವ ಸಾಮಾನ್ಯ ಅರಿವನ್ನು ಸಮಾಜದ ಪ್ರತಿಯೊಬ್ಬ ವ್ಯಕ್ತಿಯು ಹೊಂದಿರಬೇಕು ಎಂದು ಡಿವಿಎಸ್ ಕಲಾ, ವಿeನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಹೇಳಿದರು.
ದೇಶಿಯ ವಿದ್ಯಾಶಾಲಾ ಸಮಿತಿ ಯ ಡಿವಿಎಸ್ ಕಲಾ, ವಿeನ ಮತ್ತು ವಾಣಿಜ್ಯ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಜಿಡಳಿತ, ಜಿ ಪಂಚಾಯಿತಿ, ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ವತಿಯಿಂದ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತ ದಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಕ್ತದಾನವು ಜೀವ ಉಳಿಸುವ ಪುಣ್ಯದ ಕೆಲಸ ಆಗಿದ್ದು, ಪ್ರತಿ ಯೊಬ್ಬ ಆರೋಗ್ಯವಂತ ವ್ಯಕ್ತಿಯು ರಕ್ತದಾನ ಮಾಡಲು ಮುಂದಾಗ ಬೇಕು. ಯುವಜನರು ರಕ್ತದಾನ ದಿಂದ ಆಗುವ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಯುವಜನತೆ ಹೆಚ್ಚು ಹೆಚ್ಚು ರಕ್ತ ದಾನ ಮಾಡಬೇಕು ಎಂದರು.
ಜಿ ರಕ್ತನಿಧಿ ಕೇಂದ್ರದ ವೈ ದ್ಯಾಧಿಕಾರಿ ಡಾ. ಟಿ.ಎನ್.ಚಂದ್ರ ಶೇಖರ್ ಮಾತನಾಡಿ, ಯುವಜ ನತೆ ರಕ್ತದಾನದ ಬಗ್ಗೆ ಯಾವುದೇ ಭಯ ಹೊಂದಬಾರದು. ರಕ್ತದಾ ನದ ಬಗ್ಗೆ ಯಾವುದೇ ಗೊಂದಲ ಗಳಿದ್ದಲ್ಲಿ ವೈದ್ಯರ ಬಳಿ ಸಮಾ ಲೋಚಿಸಿ ಮಾರ್ಗದರ್ಶನ ಪಡೆ ದುಕೊಳ್ಳಬೇಕು. ಆರೋಗ್ಯವಂತ ವ್ಯಕ್ತಿ ವರ್ಷಕ್ಕೆ ೩-೪ ಬಾರಿ ರಕ್ತದಾನ ಮಾಡಬಹುದಾಗಿದೆ ಎಂದು ಮಾಹಿತಿ ನೀಡಿದರು.
ಸ್ವಯಂ ಪ್ರೇರಿತರಾಗಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ಸುರೇಶ್ ಬಿ.ಎಸ್., ಮೋಹನಕೃಷ್ಣ ಜಿ.ವಿ., ಪದ್ಮಿನಿ ಕೆ.ಎಸ್. ಹಾಗೂ ಪವನ್ಕುಮಾರ್ ಅವರನ್ನು ಅಭಿನಂ ದಿಸಲಾಯಿತು. ರಕ್ತದಾನ ಮಾಡು ವುದರಿಂದ ಆರೋಗ್ಯ ಉತ್ತಮ ವಾಗಿ ಕಾಪಾಡಿಕೊಳ್ಳಲು ಸಹಕಾರಿ ಯಾಗುತ್ತದೆ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಸನ್ಮಾನಿತರು ಅನಿಸಿಕೆ ವ್ಯಕ್ತಪಡಿಸಿದರು.
ಜಿ ಮೆಗ್ಗಾನ್ ಬೋಧನಾ ಆಸ್ಪತ್ರೆ ಜಿ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ವೀಣಾ ಎಸ್., ಆಪ್ತ ಸಮಾಲೋಚಕ ಪುಲಿಗೇಶ್, ಡಾ. ಗುರುನಾಥ್, ಹನುಮಂ ತಪ್ಪ, ಶ್ರೀಧರ್, ಶ್ರೀನಿವಾಸ್, ಎನ್‌ಎಸ್‌ಎಸ್ ಅಧಿಕಾರಿ ಮಲ್ಲಿ ಕಾರ್ಜುನ್, ಬೋಧಕ ವರ್ಗ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.