ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಪ್ರಧಾನಿ ಮೋದಿ ಸಮಾವೇಶ ಸ್ಥಳದ ಭೂಮಿಪೂಜೆ

Share Below Link

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಮೇ ೭ರಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯನೂರಿನಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿ ಸಲಿದ್ದು, ಸಮಾವೇಶ ಸ್ಥಳದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹಾಗೂ ಗ್ರಾ ಮಾಂತರ ಶಾಸಕ ಕೆ.ಬಿ. ಅಶೋಕ ನಾಯ್ಕ ಪಾಲ್ಗೊಂಡಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಚಾರ ನಡೆಸಲು ಆಗಮಿಸುತ್ತಿ ರುವುದು ಅತ್ಯಂತ ಸಂತೋಷದ ಸಂಗತಿ. ಶಿವಮೊಗ್ಗ ಜಿಯ ಏಳು ಕ್ಷೇತ್ರ ಹಾಗೂ ಇನ್ನೂ ಮೂರು ಕ್ಷೇತ್ರ ಒಳಗೊಂಡಂತೆ ಹತ್ತು ವಿಧಾನಸಭಾ ಕ್ಷೇತ್ರಗಳ ಮತದಾರ ರನನ್ನು ಉದ್ದೇಶಿಸಿ ಮಾತನಾಡಲಿ zರೆ. ಮೂರು ಲಕ್ಷಕ್ಕೂ ಅಧಿಕ ಸಾರ್ವಜನಿಕರು ಭಾಗವಹಿಸುವ ನೀರಿಕ್ಷೆ ಇದೆ ಎಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ.ಅಶೋಕನಾಯ್ಕ ತಿಳಿಸಿದರು.
ವೇದಿಕೆ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದ್ದು, ಮಿನಿ ಹೆಲಿಪ್ಯಾಡ್, ಸಾರ್ವಜನಿಕರಿಗೆ ಆಸನ ವ್ಯವಸ್ಥೆ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಸಾರ್ವ ಜನಿಕರಿಗೆ ಆಗಮಿಸುವ ಮಾರ್ಗ ಸೇರಿದಂತೆ ಎಲ್ಲ ರೀತಿಯಲ್ಲಿ ಸಕಲ ವ್ಯವಸ್ಥೆ ಮಾಡಲು ಕ್ರಮ ವಹಿಸ ಲಾಗಿದೆ. ಹಿರಿಯರ ಮಾರ್ಗದರ್ಶ ನದಲ್ಲಿ ಸಮಾವೇಶ ಆಯೋಜನೆ ಆಗಲಿದೆ ಎಂದರು. ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಬಿಜೆಪಿ ಜಿಧ್ಯಕ್ಷ ಟಿ.ಡಿ. ಮೇಘರಾಜ್ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಶನಿವಾರ ಬೆಳಗ್ಗೆ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೊಳ ಲೂರು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮೇಲಿನನ ಹನಸ ವಾಡಿ, ಹೊಳೆಹನಸವಾಡಿ ಬೆಳಲ ಕಟ್ಟೆ ಸೇರಿದಂತೆ ವಿವಿಧ ಗ್ರಾಮ ಗಳಲ್ಲಿ ಮತಯಾಚನೆ ನಡೆಸಿದರು. ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯದಲ್ಲಿ ಕ್ಷೇತ್ರ ಪ್ರಭಾರಿ ಎಸ್.ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಮಂಜು ನಾಥ್ ಕಲ್ಲಜ್ಜನಾಳ್, ಗ್ರಾಮಾಂತರ ಕ್ಷೇತ್ರ ಚುನಾವಣಾ ಸಮಿತಿ ಸಂಚಾಲಕ ಸಿಂಗನಹಳ್ಳಿ ಸುರೇಶ್, ಸ್ವರೂಪ್ ಸೇರಿದಂತೆ ಪ್ರಮುಖರು ಸಭೆ ನಡೆಸಿದರು.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೊಳ ಲೂರು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಪ್ರಚಾರ ಕಾರ್ಯದಲ್ಲಿ ಗ್ರಾಮಾಂತರ ಅಭ್ಯರ್ಥಿ ಪ್ರಮು ಖ್ ವೀರೂಪಾಕ್ಷಪ್ಪ, ಅರುಣ್, ಕೇಶವ್, ಷಣ್ಮುಖ, ಸುರೇಶ್, ಜಗ ದೀಶ್, ಮಂಜುನಾಥ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.