ಜಿಲ್ಲಾ ಸುದ್ದಿತಾಜಾ ಸುದ್ದಿ

ಪಂ.ಪುಟ್ಟರಾಜ ಸಾಹಿತ್ಯ ಪುರಸ್ಕಾರಕ್ಕೆ ಪುಸ್ತಕ ಆಹ್ವಾನ..

Share Below Link

ಗದಗ : ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು ತ್ರಿಭಾಷಾ ಕವಿ ಗುರು ಪುಟ್ಟರಾಜರ ಸಾಹಿತ್ಯ ಸೇವೆಯನ್ನು ಸ್ಮರಿಸಿಕೊಳ್ಳುವ ಉದ್ದೇಶದಿಂದ ೨೦೨೩-೨೪ ಸಾಲಿನಲ್ಲಿ ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿಯನ್ನು ಕನ್ನಡ, ಹಿಂದಿ ಮತ್ತು ಸಂಸ್ಕೃತ ಭಾಷೆಯ ಸಾಹಿತ್ಯದ ಎ ಪ್ರಕಾರಗಳ ಕೃತಿಗಳನ್ನು ಆಹ್ವಾನಿಸಲಾಗಿದೆ.
ಈ ಪ್ರಶಸ್ತಿಗೆ ಕನ್ನಡದ ಕೃತಿಗಳನ್ನು ಮಾತ್ರಆಯ್ಕೆ ಮಾಡಲಾಗುವುದು ಹಿಂದಿ ಮತ್ತು ಸಂಸ್ಕೃತ ಕೃತಿಗಳಲ್ಲಿ ಉತ್ತಮ ಕೃತಿ ಆಯ್ಕೆಮಾಡಿ ಉತ್ತಮ ಕೃತಿಕರ್ತರಿಗೆ ಪುಟ್ಟರಾಜ ಸಾಹಿತ್ಯ ಸಮ್ಮಾನ ನೀಡಲಾಗುವದು.
ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿಯು ೫ ಸಾವಿರ ರೂ ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಪ್ರಶಸ್ತಿಗೆ ಆಯ್ಕೆಯಾದ ಕೃತಿಕರ್ತರಿಗೆ ಡಾ. ಪಂ. ಪುಟ್ಟರಾಜರ ಪುಣ್ಯಸ್ಮರಣೋತ್ಸವದ ಸಮಾರಂಭ ದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಮತ್ತು ಇದೇ ಸಂದರ್ಭದಲ್ಲಿ ಪ್ರಶಸ್ತಿಗೆ ಸಮೀಪದ ಪ್ರತಿಸ್ಪರ್ಧಿಯಾದ ವಿವಿಧ ಪ್ರಕಾರದ ೧೦ ಕೃತಿಗಳನ್ನು ಗುರುತಿಸಿ ವರ್ಷದ ಶ್ರೇಷ್ಠ ಕೃತಿರತ್ನ ಸಮ್ಮಾನ ನೀಡಿಗೌರವಿಸಲಾಗುವುದು ಎಂದು ಸೇವಾ ಸಮಿತಿಯಕಾರ್ಯಕಾರಿಣಿ ಸದಸ್ಯರು ಮತ್ತು ಸಾಹಿತ್ಯ ಪುರಸ್ಕಾರ ಆಯ್ಕೆ ಸಮಿತಿಯ ಸದಸ್ಯ ಸಂಚಾಲಕರೂ ಆಗಿರುವ ಸುಮಾ ಹಡಪದ ಹಳಿಯಾಳ ಇವರು ತಿಳಿಸಿದ್ದಾರೆ.
ಆಸಕ್ತ ಲೇಖಕರು ತಮ್ಮ ಭಾವಚಿತ್ರ ಸಹಿತ ಪರಿಚಯ ಪತ್ರ, ಏಪ್ರಿಲ್ ೧, ೨೦೨೩ ರಿಂದ ೨೦೨೪ ಮಾ.೩೧ರ ಒಳಗಾಗಿ ಪ್ರಕಟವಾದ ೩ ಕೃತಿಗಳೊಂದಿಗೆ ಜು.೧೦ರ ಒಳಗಾಗಿ ತಲುಪುವಂತೆ ಕಳಿಸಿಕೊಡಲು ಕೋರಲಾಗಿದೆ.
ಪುಸ್ತಕಗಳನ್ನು ಕಳಿಸಿಕೊಡುವ ವಿಳಾಸ, ಸಿ. ಕೆ. ಹೆಚ್ ಶಾಸ್ತ್ರೀ (ಕಡಣಿ) ಸದಸ್ಯರು: ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ಪ್ರಶಸ್ತಿ ಆಯ್ಕೆ ಸಮಿತಿ, ಗಿರಿಜ ನಿವಾಸ ಪಂಚಾಕ್ಷರಿ ನಗರ, ೩ನೇ ಅಡ್ಡರಸ್ತೆ ಗದಗ-೫೮೨೧೦೧.

Leave a Reply

Your email address will not be published. Required fields are marked *