ಜಿಲ್ಲಾ ಸುದ್ದಿತಾಜಾ ಸುದ್ದಿ

ಮಂಗಳಗೌರಿ ಹಬ್ಬದ ಸಂಭ್ರಮದ ಆಚರಣೆ…

Share Below Link

ಶಿವಮೊಗ್ಗ: ಶ್ರಾವಣ ಮಾಸ ಬಂದರೆ ಸಾಲು ಸಾಲು ಹಬ್ಬಗಳು ಆರಂಭವಾಗುತ್ತವೆ. ಪಂಚಮಿ, ದಾನಮ್ಮ ದೇವಿ, ಗೌರಿ ಗಣೇಶ ಹೀಗೆ ಧಾರ್ಮಿಕ ಪೂಜೆಯ ಆಚರಣೆಗಳು ಶುರುವಾಗುತ್ತವೆ. ಮಹಿಳೆಯರು ಮಂಗಳ ಗೌರಿ ವೃತವನ್ನು ಸಂಭ್ರಮದಿಂದ ಆಚರಿ ಸುತ್ತಾರೆ ಎಂದು ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಬಿಂದು ವಿಜಯ್‌ಕುಮಾರ್ ಹೇಳಿದರು.
ವಿನೋಬನಗರದ ಆನಂದ್ ಗೌರಿಶಂಕರ್ ನಂದಿನಿ ನಿವಾಸದಲ್ಲಿ ೧೬ ವರ್ಷದಿಂದ ನಡೆಸಿಕೊಂಡು ಬರುತ್ತಿರುವ ಮಂಗಳಗೌರಿ ವಿಶೇಷ ವೃತ ಸಂಪನ್ನಗೊಂಡ ಕಾರ್ಯಕ್ರಮದಲ್ಲಿ ಮಾತನಾಡಿ, ಹಿಂದೂ ಧರ್ಮದ ಹಬ್ಬಗಳಲ್ಲಿ ಮಹಿಳೆಯರು ಮಂಗಳಗೌರಿ ವೃತವನ್ನು ವಿಶೇಷವಾಗಿ ಆಚರಿಸುತ್ತಾರೆ ಎಂದು ತಿಳಿಸಿದರು.
ದೇವರ ಅನುಗ್ರಹವಿದ್ದರೆ ಇಡೀ ಕುಟುಂಬಕ್ಕೆ ಒಳಿತಾಗುವ ಜತೆಯಲ್ಲಿ ಆತ್ಮವಿಶ್ವಾಸ, ಶಕ್ತಿ, ಸಾಮಾರ್ಥ್ಯ, ಧನಾತ್ಮಕ ಆಲೋ ಚನೆ ವೃದ್ಧಿಸುತ್ತದೆ. ಮಂಗಳಗೌರಿ ವೃತ ಪುಸ್ತಕ ಓದುವುದರಿಂದ, ಆಲಿಸುವುದರಿಂದ ಶ್ರದ್ಧೆ ಭಕ್ತಿ ಹೆಚ್ಚಾಗಿ ಒಳಿತಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ವೃತ ವನ್ನು ೧೬ ವರ್ಷದಿಂದ ಆಚರಣೆ ಮಾಡಿದ ಗೌರಿಶಂಕರ್ ಕುಟುಂ ಬದ ನಂದಿನಿ ಆನಂದ್ ಮಾತ ನಾಡಿ, ಮನೆಯಲ್ಲಿ ಶ್ರದ್ಧೆ ಭಕ್ತಿ ಯಿಂದ ೧೬ ವಷಗಳಿಂದ ಮಂಗಳ ಗೌರಿ ವೃತ ಆಚರಿಸುತ್ತಿದ್ದು, ದೇವರ ಆಶೀರ್ವಾದಿಂದ ಒಳ್ಳೆಯ ದಾಗಿದೆ. ೧೬ ಮುತ್ತೈದೆಯರಿಗೆ ವಿಶೇಷ ಬಾಗಿನ ನೀಡಿ ವೃತ ಸಂಪ ನ್ನಗೊಳಿಸಲಾಗುವುದು ಎಂದರು.
ಮಂಗಳಗೌರಿ ವೃತದ ಆಚರಣೆ ಯನ್ನು ಮಹಿಳೆಯರು ಕ್ರಮ ಬದ್ಧವಾಗಿ ಮಾಡುವುದರಿಂದ ದೇವಿಯು ಸಕಲವನ್ನು ಕರುಣಿ ಸುತ್ತದೆ ಎಂದು ತಿಳಿಸಿದರು.
ಮಂಗಳಗೌರಿ ವೃತದಲ್ಲಿ ೧೫೦ಕ್ಕೂ ಹೆಚ್ಚು ಜನರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾದರು. ನವ್ಯ, ನಯನ, ಶಾರದಾ, ಆಶಾ, ಕಲ್ಪನಾ, ವೀರಭದ್ರಪ್ಪ, ಜಯರತ್ನ, ಪ್ರಸನ್ನ, ರೇಣುಕಾ, ವಸುಂಧರಾ, ಗಾಯತ್ರಿ, ಯೋಗಪಟುಗಳು ಭಾಗವಹಿಸಿದ್ದರು.