ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಕಿಡಿಗೇಡಿಗಳ ಹೆಡೆಮುರಿಕಟ್ಟಲು ಸಜ್ಜಾದ ಚನ್ನಮ್ಮ ಪಡೆ…

Share Below Link

ಶಿವಮೊಗ್ಗ : ಜಿಯಲ್ಲಿ ವಿದ್ಯಾರ್ಥಿನಿಯರ ರಕ್ಷಣೆಗಾಗಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿ ಯಿಂದ ಹಾಗೂ ಮಹಿಳೆ ಮತ್ತು ಮಕ್ಕಳ ವಿರುದ್ಧ ದೌರ್ಜನ್ಯ ಮಾಡುವ, ಅಸಭ್ಯವಾಗಿ ವರ್ತಿಸುವವರ ವಿರುದ್ಧ, ಸೂಕ್ತ ಕ್ರಮ ಕೈಗೊಳ್ಳುವ ಸಲುವಾಗಿ ಶಿವಮೊಗ್ಗ ಜಿ ಪೊಲೀಸ್ ವತಿಯಿಂದ ಸಮುದಾಯದತ್ತ ಪೊಲೀಸ್ ನ ಭಾಗವಾಗಿ ಚೆನ್ನಮ್ಮ ಪಡೆ ರಚಿಸಲಾಗಿದ್ದು, ಇಂದು ನಗರದ ಕಮಲಾ ನೆಹರೂ ಕಾಲೇಜಿನಲ್ಲಿ ಜಿ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿನಿಯರ ಜೀವನ ರೂಪಿಸುವಲ್ಲಿ ಮತ್ತು ಸರ್ವ ತೋಮುಖ ಅಭಿವೃದ್ಧಿಯಲ್ಲಿ ಶಿಕ್ಷಣವೇ ಪ್ರಮುಖ ಸಾಧನವಾಗಿರುತ್ತದೆ. ಶಿಕ್ಷಣದಿಂದ ಮಾತ್ರ ಸಾಮಾಜಿಕ ಮತ್ತು ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಿದ್ದು ಯಾವುದೇ ಕಾರಣಕ್ಕೂ ವಿದ್ಯಾರ್ಥಿನಿಯರು ಶಿಕ್ಷಣ ದಿಂದ ವಂಚಿತರಾಗಬಾರದು ಎಂದರು.
ವಿದ್ಯಾರ್ಥಿ ಜೀವನದಲ್ಲಿ ಯಾವುದೋ ಸಣ್ಣ ಪುಟ್ಟ ಸಮಸ್ಯೆ / ಕಿರಿಕಿರಿಗಳಿಂದಾಗಿ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಯಾದಾಗ, ಅವರು ತಮ್ಮ ಶಿಕ್ಷಣವನ್ನು ಮುಂದುವರೆಸಲು ಸಾಧ್ಯವಾಗದೇ ಅಲ್ಲಿಗೇ ನಿಲ್ಲಿಸುವ ಸಾಧ್ಯತೆ ಇರುತ್ತದೆ. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಮತ್ತು ಅವರಿಗೆ ರಕ್ಷಣೆ ನೀಡುವುದು ಪೊಲೀಸ್ ಇಲಾಖೆಯ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿ ಯಾಗಿರುತ್ತದೆ. ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಈಗಾಗಲೇ ಸಾಕಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದ್ದು, ಹೆಣ್ಣು ಮಕ್ಕಳ ರಕ್ಷಣೆಯ ನಿಟ್ಟಿನಲ್ಲಿ, ಸಮುದಾಯದತ್ತ ಪೊಲೀಸ್‌ನ ಒಂದು ಭಾಗವಾಗಿ ಚೆನ್ನಮ್ಮ ಪಡೆಯನ್ನು ರಚಿಸಲಾಗಿರುತ್ತದೆ ಎಂದರು.
ಚೆನ್ನಮ್ಮ ಪಡೆಯನ್ನು ವಿದ್ಯಾರ್ಥಿನಿ ಯರ ಸುರಕ್ಷತೆ ಮತ್ತು ರಕ್ಷಣೆಯ ಉzಶ ದಿಂದ ರಚಿಸಿದ್ದು, ಚೆನ್ನಮ್ಮ ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಪ್ರಮುಖವಾಗಿ ಶಾಲಾ ಕಾಲೇಜುಗಳು ಬೆಳಗ್ಗೆ ಆರಂಭವಾಗುವ ಮತ್ತು ಮುಕ್ತಾಯ ವಾಗುವ ಸಮಯದಲ್ಲಿ ಶಾಲಾ ಕಾಲೇಜು ಗಳ ಹತ್ತಿರ, ವಿದ್ಯಾರ್ಥಿನಿಯರ ಹಾಸ್ಟೆಲ್‌ಗಳ ಹತ್ತಿರ, ಪಾರ್ಕ್ ಗಳ ಬಳಿ ಮತ್ತು ಬಸ್ ಸ್ಟಾಂಡ್‌ಗಳಲ್ಲಿ ಗಸ್ತು ಮಾಡಲಿದ್ದು, ಈ ವೇಳೆ ಅನಾವಶ್ಯಕವಾಗಿ ಸೇರಿರುವ ಗುಂಪುಗಳು, ಅಸಭ್ಯವಾಗಿ ವರ್ತಿಸುವ ವರು, ಸಮಾಘಾತುಕ ಚಟುವಟಿಕೆ ಗಳನ್ನು ಮಾಡುವವರು ಹಾಗೂ ಕೀಟಲೆ ಮಾಡುವ ಕಿಡಿಗೇಡಿಗಳ ಮೇಲೆ ನಿಗಾವಹಿಸಲಿದ್ದು, ಯಾರಾದರೂ ತೊಂದರೆಯನ್ನು ಕೊಡು ವುದು ಕಂಡುಬಂದಲ್ಲಿ ಅಂತಹವರ ವಿರುದ್ದ ಕೂಡಲೇ ಕಾನೂನು ರೀತಿಯ ಕ್ರಮವನ್ನು ಕೈಗೊಳ್ಳಲಿzರೆ ಎಂದು ತಿಳಿಸಿದರು.
ಚೆನ್ನಮ್ಮ ಪಡೆಯ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಮಫ್ತಿಯಲ್ಲಿಯೂ ಸಹಾ ಬಸ್‌ಸ್ಟ್ಯಾಂಡ್, ಶಾಲಾ ಕಾಲೇಜುಗಳ ಹತ್ತಿರ, ಪಾರ್ಕ್‌ಗಳ ಹತ್ತಿರ ಗಸ್ತಿಗೆ ನೇಮಕ ಮಾಡಲಿದ್ದು, ಇವರು ಮಫ್ತಿಯಲ್ಲಿ ಗಸ್ತು ಮಾಡಿ, ಯಾರಾದರೂ ಹೆಣ್ಣು ಮಕ್ಕಳಿಗೆ ತೊಂದರೆ ಕೊಡುವವರು ಕಂಡು ಬಂದಲ್ಲಿ, ಅಂತಹವರ ವಿರುದ್ದ ಕೂಡಲೇ ಕಾನೂನು ರೀತ್ಯ ಕ್ರಮವನ್ನು ಕೈಗೊಳ್ಳಲಿzರೆ ಎಂದರು.
ಚೆನ್ನಮ್ಮ ಪಡೆಯ ಅಧಿಕಾರಿ ಸಿಬ್ಬಂದಿ ಗಳು ಕಾಲೇಜುಗಳಿಗೆ ಭೇಟಿ ನೀಡಿ, ವಿಧ್ಯಾರ್ಥಿನಿಯರಿಗೆ ಮಹಿಳಾ ಮತ್ತು ಮಕ್ಕಳ ಕಾನೂನಿನ ಬಗ್ಗೆ ಹಾಗೂ ಕಾನೂನಿನಲ್ಲಿ ಅವರಿಗಿರುವ ರಕ್ಷಣೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಿದ್ದು, ಇದರೊಂದಿಗೆ ಯಾವುದೇ ತುರ್ತು ಸಂದರ್ಭದಲ್ಲಿ ಸ್ವಯಂ ರಕ್ಷಣೆಗಾಗಿ, ಕರಾಟೆ/ ಬೇಸಿಕ್ ಸೆಲ್ಫ್ ಡಿಫೆನ್ಸ್ ಟೆಕ್ನಿಕ್‌ಗಳ ಬಗ್ಗೆ ತರಬೇತಿ ಯನ್ನು ಸಹಾ ನೀಡಲಿzರೆ. ಇದರಿಂದಾಗಿ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಸಹಕಾರಿ ಎಂದರು.
ಸಮಸ್ಯೆಗಳ ಬಗ್ಗೆ ಯಾವುದೇ ಮುಚ್ಚು ಮರೆ ಇಲ್ಲದೆ, ಸಮಸ್ಯೆಯ ಮೂಲದ ಲ್ಲಿಯೇ ನೀವು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದಲ್ಲಿ, ಆ ತೊಂದರೆಯನ್ನು ಬುಡದಿಂದಲೇ ಬಗೆಹರಿಸಲು ಸಾಧ್ಯವಿರುತ್ತದೆ. ಇದರಿಂದ ಮುಂದೆ ಸಮಸ್ಯೆ ದೊಡ್ಡದಾಗದಂತೆ ತಡೆಯಲು ಸಾಧ್ಯವಿರುತ್ತದೆ ಹಾಗೂ ವಿದ್ಯಾರ್ಥಿನಿ ಯರು ಯಾವುದೇ ಸಮಸ್ಯೆಯ ಸಂದರ್ಭ ಗಳಲ್ಲಿ, ಯಾರಾದರೂ ನಿಮ್ಮನ್ನು ಹಿಂಬಾಲಿಸುವುದು ಕಂಡುಬಂದಲ್ಲಿ, ಈವ್ ಟೀಸಿಂಗ್ ಮಾಡಿದ್ದಲ್ಲಿ ಮತ್ತು ಕೀಟಲೆ ಮಾಡುವುದು ಕಂಡುಬಂದರೆ ಕೂಡಲೇ ಯಾವುದೇ ಸಂಕೋಚ ಅಥವಾ ಭಯ ಇಲ್ಲದೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದಲ್ಲಿ, ಅಂತಹ ಕಿಡಿಗೇಡಿಗಳ ವಿರುದ್ಧ ಕಾನೂನು ರೀತ್ಯಾ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಮತ್ತು ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿ ಇಡಲಾಗುವುದು. ವಿದ್ಯಾರ್ಥಿನಿಯರ ರಕ್ಷಣೆಗಾಗಿ ಚೆನ್ನಮ್ಮ ಪಡೆ ಇದ್ದು, ಯಾವುದೇ ಸಮಸ್ಯೆಗಳಿದ್ದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು.
ಎ ಶಾಲಾ ಕಾಲೇಜುಗಳಲ್ಲಿ ತುರ್ತು ಸಂದರ್ಭದಲ್ಲಿ ಸಂಪರ್ಕಿಸ ಬೇಕಾದ ಸ್ಥಳೀಯ ಪೊಲೀಸ್ ಠಾಣೆ ಮತ್ತು ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಪ್ಲೇ ಕಾರ್ಡ್ ಮೂಲಕ ಪ್ರಕಟಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ರಾಘವೇಂದ್ರ, ವೆಂಕಟೇಶ್, ಅನಿಲ್ ಕುಮಾರ್ ಭೂಮರಡ್ಡಿ , ಕಾರ್ಯಪ್ಪ ಎ ಜಿ, ಪ್ರಕಾಶ್, ಬಾಬು ಆಂಜನಪ್ಪ, ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

This image has an empty alt attribute; its file name is Arya-coll.gif