ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಸ್ವಚ್ಚತೆಯೇ ಸೇವೆ-ವಿಶೇಷ ಜನಾಂದೋಲನ: ಸಿಇಓ

Share Below Link

ಶಿವಮೊಗ್ಗ :ಜಿಯ ಎ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಹಿ ಸೇವಾ ಎಂಬ ವಿಶೇಷ ಜನಾಂ ದೋಲನವನ್ನು ಸೆ.೧೫ ರಿಂದ ಅ.೨ ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ತಿಳಿಸಿzರೆ.
ಅ. ೨ ರಂದು ಮಹಾತ್ಮಾ ಗಾಂಧೀಜಿ ಜನ್ಮದಿನದ ಸ್ಮರಣಾರ್ಥ ವಾಗಿ ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತಿದೆ. ಮಹಾತ್ಮರ ಧ್ಯೆಯವಾಕ್ಯ ಸ್ವಚ್ಛತೆಯೇ ದೈವತ್ವ ಎಂಬ ಕನಸನ್ನು ನನಸಾಗಿಸಲು ಸೆ.೧೫ ರಿಂದ ಅ.೨ ರವರೆಗೆ ೧೫ ದಿನಗಳ ಕಾಲ ಜಿಯ ಎ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಹಿ ಸೇವಾ-ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಆಂದೋಲನವನ್ನು ಹಮ್ಮಿ ಕೊಳ್ಳಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ತೀರ್ಮಾನಿಸಲಾಗಿದೆ.
ಈ ವರ್ಷದ ಸ್ವಚ್ಛತಾ ಹಿ ಸೇವಾ -ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಆಂದೋಲನದ ಘೋಷವಾಕ್ಯ ವಾಗಿ ಕಸಮುಕ್ತ, ತ್ಯಾಜ್ಯಮುಕ್ತ ಭಾರತ ಎಂದು ಘೋಷಿಸಲಾ ಗಿದ್ದು, ಎಡೆ ಸದೃಶ್ಯ ಸ್ವಚ್ಛತೆ ಸಾಧಿಸಿ, ಸ್ವಚ್ಛ ಸುಂದರ, ಸಧೃಢ ಗ್ರಾಮಗಳನ್ನು ರೂಪಿ ಸುವ ಮಹತ್ವಾಕಾಂಕ್ಷಿ ಗುರಿ ಹೊಂದಲಾಗಿದೆ.
ಗ್ರಾಮಗಳ ಸ್ವಚ್ಛತೆಗೆ ಸ್ವಯಂ ಪ್ರೇರಿತರಾಗಿ ಶ್ರಮದಾನ ಚಟುವ ಟಿಕೆಗಳಲ್ಲಿ ಭಾಗವಹಿಸುವುದು. ಜಿಯ ತಾಲೂಕು, ಗ್ರಾ.ಪಂ ವ್ಯಾಪ್ತಿಗಳಲ್ಲಿ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ, ನದಿ ತೀರ, ಸಾಂಸ್ಥಿಕ, ಸಮುದಾಯ ಭವನ, ಪ್ರವಾಸಿ ತಾಣಗಳು, ಐತಿಹಾಸಿಕ ಸ್ಮಾರಕ ಗಳು, ಚರಂಡಿಗಳು, ಸರ್ಕಾರಿ ಶಾಲೆ, ಅಂಗನವಾಡಿ ಮತ್ತು ನಾಲಾಗಳು ಮುಂತಾದ ಸ್ಥಳಗಳಲ್ಲಿ ಸ್ವಚ್ಛತೆಯ ಕುರಿತು ಜಗೃತಿ ಮತ್ತು ಸದೃಶ್ಯ ಸ್ವಚ್ಛತೆ ಕಾಯ್ದುಕೊಳ್ಳಲು ಶ್ರಮದಾನ ಮತ್ತು ವಿವಿಧ ಚಟುವಟಿಕೆಗಳನ್ನು ಆಯೋಜನೆ ಮಾಡಲಾಗಿದೆ.
ಸ್ವಚ್ಛತಾ ಹಿ ಸೇವಾ-ಸ್ವಚ್ಛತೆಯೇ ಸೇವೆಯನ್ನು ಉತ್ತಮವಾಗಿ ಯಶಸ್ವಿಗೊಳಿಸಲು ಹಾಗೂ ಸದೃಢ ಭಾರತ ನಿರ್ಮಾಣಕ್ಕೆ ಜಿಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರ ಶ್ರಮ ಅಗತ್ಯವಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿ zರೆ.