ಇತರೆತಾಜಾ ಸುದ್ದಿ

ಮೈಸೂರು ದಸರಾ ಅದ್ಧೂರಿ ಆಚರಣೆಗೆ ತೀರ್ಮಾನ…

Share Below Link

ಬೆಂಗಳೂರು: ಈ ವರ್ಷ ಮೈಸೂರು ದಸರಾವನ್ನು ಅರ್ಥಪೂರ್ಣ ಮತ್ತು ಅದ್ಧೂರಿ ಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಮತ್ತು ದಸರಾ ಆಚರಣೆಯ ಭಾಗವಾಗಿ ಏರ್ ಶೋ ನಡೆಸಲು ಯೋಚಿಸುತ್ತಿರು ವುದಾಗಿ ಸಿಎಂ ಸಿದ್ದರಾಮಯ್ಯ ಅವರು ಹೇಳಿzರೆ.
ಮೈಸೂರು ದಸರಾ ಮಹೋತ್ಸವ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ನಾಡಹಬ್ಬ ದಸರಾವನ್ನು ಅರ್ಥಪೂರ್ಣವಾಗಿ ಅದ್ಧೂರಿ ಯಾಗಿ ಮಾಡಬೇಕು ಎಂದು ಸಮಿತಿ ಸದಸ್ಯರು ಅಭಿಪ್ರಾಯ ಪಟ್ಟಿzರೆ. ಈ ವರ್ಷ ೫ ಗ್ಯಾರಂಟಿಗಳ ಬಗ್ಗೆ ತಿಳಿಸುವ ಸ್ತಬ್ಧಚಿತ್ರ ಸಹ ಇರಲಿದೆ ಎಂದರು.
ದಸರಾ ಸಾಂಪ್ರದಾಯಿಕ ಹಬ್ಬವಾಗಿದ್ದು, ಅದು ಜನರ ಹಬ್ಬವಾಗಬೇಕು. ವಿಜಯನಗರ ಅರಸರ ಕಾಲದಲ್ಲಿ ಉತ್ಸವ ಹಂಪಿ ಯಲ್ಲಿ ನಡೆಯುತ್ತಿತ್ತು. ಆಮೇಲೆ ಮೈಸೂರಿನಲ್ಲಿ ರಾಜರುಗಳು ಮಾಡಿಕೊಂಡು ಬಂದರು. ಇದೀಗ ಸರ್ಕಾರ ಆಚರಣೆ ಮಾಡಿಕೊಂಡು ಬರುತ್ತಿದೆ. ಜನರ ಆಕರ್ಷಣೆ ಮಾಡುವುದು, ದೀಪಾಲಂಕಾರ, ಮೆರವಣಿಗೆ, ಜಂಬೂಸವಾರಿ, ಸ್ತಬ್ಧಚಿತ್ರಗಳ ಮೆರವಣಿಗೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.
ಈ ಬಾರಿ ಟ್ಯಾಬ್ಲೋಗಳನ್ನು ಆಯ್ಕೆ ಮಾಡುವಾಗ ರಾಜ್ಯದ ಸಂಪ್ರದಾಯಗಳು, ವಿವಿಧ ಜಿಗಳ ವಿಶೇಷ ಅಂಶಗಳು ಮತ್ತು ಸರ್ಕಾರದ ಐದು ಖಾತರಿ ಯೋಜನೆಗಳ ಅನುಷ್ಠಾನದ ಬಗ್ಗೆ ಜನರಿಗೆ ತಿಳಿಸುವಂಥದ್ದನ್ನು ಆಯ್ಕೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.
ದಸರಾದ ಮತ್ತೊಂದು ಪ್ರಮುಖ ಆಕರ್ಷಣೆ, ಪಂಜಿನ ಕವಾಯತು, ಸಾಂಸ್ಕೃತಿಕ ಕಾರ್ಯ ಕ್ರಮಗಳು, ಚಲನಚಿತ್ರೋತ್ಸವ, ರೈತ (ರೈತ) ದಸರಾ ಮತ್ತು ಯುವ (ಯುವ) ದಸರಾ ಈ ವರ್ಷವೂ ಇರುತ್ತವೆ ಎಂದು ಸಿಎಂ ತಿಳಿಸಿದರು.
ಅ.೧೫ ರಂದು ಬೆಳಗ್ಗೆ ೧೦.೧೫ ರಿಂದ ೧೦.೩೦ರ ನಡುವಿನ ಶುಭ ಮುಹೂರ್ತದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವವನ್ನು ಉದ್ಘಾಟಿಸಲಾಗುವುದು ಮತ್ತು ಅದೇ ದಿನ ದಸರಾ ವಸ್ತು ಪ್ರದರ್ಶನವೂ ಉದ್ಘಾಟನೆಯಾಗ ಲಿದೆ ಎಂದು ಸಿಎಂ ಹೇಳಿzರೆ.
ದಸರಾ ಉದ್ಘಾಟಕರನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ನನಗೆ ನೀಡಿzರೆ. ದಸರಾ ಪೂರ್ವಭಾವಿ ಸಭೆಯಲ್ಲಿ ಒಬ್ಬರ ಹೆಸರಿನ ಬಗ್ಗೆ ಚರ್ಚೆ ಮಾಡಿದ್ದೇವೆ. ಕೆಆರ್ ಕ್ಷೇತ್ರದ ಶಾಸಕರು ಸುತ್ತೂರು ಶ್ರೀಗಳ ಹೆಸರು ಪ್ರಸ್ತಾಪ ಮಾಡಿzರೆ. ಆದರೆ, ಉದ್ಘಾಟಕರ ಹೆಸರು ಅಂತಿಮವಾಗಿಲ್ಲ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿzರೆ.
ಈ ವರ್ಷ ದಸರಾ ಅಂಗವಾಗಿ ಏರ್ ಶೋ ನಡೆಸುವ ಚಿಂತನೆ ಇದೆ. ಈ ವಿಚಾರವಾಗಿ ರಕ್ಷಣಾ ಸಚಿವರ ಜೊತೆ ಚರ್ಚೆ ಮಾಡುತ್ತೇವೆ. ಹಿಂದೆ ನಾನು ಮುಖ್ಯಮಂತ್ರಿ ಆಗಿzಗ ದಸರಾ ವೇಳೆ ಏರ್ ಶೋ ಆಯೋಜಿಸಿzವು ಎಂದು ಸಿಎಂ ತಿಳಿಸಿzರೆ.