ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬರಗಾಲ-ಬೆಲೆ ಏರಿಕೆ ನಡುವೆ ಜನಸಾಮಾನ್ಯರಿಗೆ ಆಸರೆಯಾದ ಕಾಂಗ್ರೆಸ್ ಗ್ಯಾರೆಂಟಿಗಳು: ಗೀತಾ

Share Below Link

ಶಿವಮೊಗ್ಗ: ರಾಜ್ಯದಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು ಬರಗಾಲ ಮತ್ತು ಬೆಲೆ ಏರಿಕೆಯ ಇಂದಿನ ದಿನಮಾನಗಳಲ್ಲಿ ಜನಸಾಮಾನ್ಯರ ಕೈಹಿಡಿದಿವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಸಿರಿಗೆರೆ ಗ್ರಾಪಂ ವ್ಯಾಪ್ತಿಯ ಸಿರಿಗೆರೆ ಮಾರಿಕಾಂಬಾ ದೇವಸ್ಥಾನ ಆವರಣದಲ್ಲಿ ಆಯೋಜಿಸಿದ್ದ ಗ್ರಾಮಾಂತರ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ, ಮಹಿಳೆಯರಿಗೆ ವಾರ್ಷಿಕ ೧ ಲಕ್ಷ ರೂ. ಕುಟುಂಬ ನಿರ್ವಹಣೆ ಭತ್ಯೆ ಸೇರಿದಂತೆ, ಅನೇಕ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ ಎಂದರು.
ಗ್ಯಾರಂಟಿ ಯೋಜನೆಗಳು ಶೇ ೧೦೦ರಷ್ಟು ನಮ್ಮ ಕೈಹಿಡಿಯಲಿವೆ. ಇವುಗಳಿಂದ ಬಿಜೆಪಿಯವರು ಸೇರಿದಂತೆ ಎಲ್ಲ ವರ್ಗದ ಜನರಿಗೂ ಅನುಕೂಲ ಆಗಿದ್ದು, ಆರ್ಥಿಕ ಶಕ್ತಿ ಸಿಕ್ಕಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸರಾಸರಿ ೬೦ಸಾವಿರ ಕುಟುಂಬಗಳು ಒಂದಿಂದು ಯೋಜನೆಯ ಫಲಾನುಭವಿಗಳಾಗಿವೆ. ಫಲಾನುಭವಿಗಳೆಲ್ಲರಿಗೂ ಕಾಂಗ್ರೆಸ್ ಬಗ್ಗೆ ಕೃತಜ್ಞತೆ ಇರುವುದು ನನಗೆ ಶ್ರೀರಕ್ಷೆಯಾಗಲಿದೆ ಎಂದರು.
ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಮಾತನಾಡಿ, ತಳಮಟ್ಟದಲ್ಲೂ ಮೋದಿ ಅಲೆ ಇಲ್ಲ. ಇರುವುದೆಲ್ಲವೂ ರಾಜ್ಯ ಸರ್ಕಾರದ ಗ್ಯಾರಂಟಿ ಕಾರ್ಯಕ್ರಮಗಳು ಮತ್ತು ಕಾಂಗ್ರೆಸ್ ಅಲೆ ಎಂದ ಅವರು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಅವರಿಗೆ ಬೆಂಬಲಿಸಬೇಕು ಎಂದು ಕೋರಿದರು.
ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ಈ ಭಾಗಕ್ಕೆ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರು ಅತಿ ಹೆಚ್ಚಿನ ಕೊಡುಗೆ ನೀಡಿzರೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಕೂಡ ಇಲ್ಲಿನ ರೈತರ ನೆರವಿಗೆ ನಿಂತಿದ್ದರು. ಅದೇ ಹಾದಿಯಲ್ಲಿ ಗೀತಾ ಅವರು ಕೂಡ ಸಾಗಲಿzರೆ. ಆದ್ದರಿಂದ, ಈ ಚುನಾವಣೆಯಲ್ಲಿ ಮತ ನೀಡಿ ಹರಸಬೇಕು ಎಂದರು.
ಕಾಂಗ್ರೆಸ್ ಮುಖಂಡ ಡಾ| ಶ್ರೀನಿವಾಸ ಕರಿಯಣ್ಣ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ಎ ಜತಿ- ಧರ್ಮಗಳಿಗೆ ಅನುಕೂಲ ವಾಗಿದೆ. ಕಡುಬಡವರು ಬದುಕು ರೂಪಿಸಿಕೊಂಡಿzರೆ. ಗ್ಯಾರಂಟಿ ಯೋಜನೆ ಋಣ ತೀರಿಸಲು ಸಿಕ್ಕ ಅವಕಾಶವಿದು. ಆದ್ದರಿಂದ, ಇಲ್ಲಿ ಗೀತಕ್ಕ ಅವರಿಗೆ ಮತ ನೀಡಬೇಕು ಎಂದರು.
ನಟ ಶಿವರಾಜಕುಮಾರ್ ಮಾತನಾಡಿದರು.
ಭೋವಿ ನಿಗಮ ಅಧ್ಯಕ್ಷ ಎಸ್. ರವಿಕುಮಾರ್, ಜಿಪಂ ಮಾಜಿ ಸದಸ್ಯ ಶಾಂತವೀರ ನಾಯ್ಕ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ಆರ್.ನಾಗರಾಜ, ನೇತ್ರಾವತಿ, ಲೋಕೇಶಪ್ಪ, ನಿರಂಜನ್, ಧೀರ ರಾಜ ಹೊನ್ನವಿಲೆ, ಎಚ್.ಪಿ. ಗಿರೀಶ್, ಇಕ್ಕೇರಿ ರಮೇಶ್, ಗಿರೀಶ್, ಉಡ್ಡಪ್ಪ, ಮಸ್ಕರ್ ರಾಜಪ್ಪ, ಕೆ.ಪಿ.ಗಣಪತಿ, ಅಣ್ಣಪ್ಪ, ಕಲೀಂ, ಕೆ.ಆರ್.ಲೋಕೇಶ್, ಶ್ರೀನಿವಾಸ, ಕೆ.ಸಿ.ನಾಗರಾಜ, ನೂರು, ದೊಡಪ್ಪ, ಶಂಕರಪ್ಪ, ಇದ್ದರು.