ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಕಲಿಯುವ ಸೌಜನ್ಯತೆ ಬೆಳೆಸಿಕೊಳ್ಳಿ…

Share Below Link

ಶಿವಮೊಗ್ಗ : ಎ ಕ್ಷೇತ್ರಗಳಲ್ಲಿ ಕಲಿಯುವ ಅವಕಾಶವಿದ್ದು, ಹೊಸತನವನ್ನು ಕಲಿಯುವ ಸೌಜನ್ಯತೆ ಬೆಳೆಸಿ ಕೊಂಡಾಗ ಮಾತ್ರ ನಿಜವಾದ ಮನುಷ್ಯರಾಗಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯ ರಾವ್ ಅಭಿಪ್ರಾಯಪಟ್ಟರು.
ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ವತಿಯಿಂದ ಎಸ್.ಆರ್.ಎನ್.ಎಂ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ದವರಿಗಾಗಿ ಏರ್ಪಡಿಸಿದ್ದ ಆಡಳಿತ ನಿರ್ವಹಣೆ- ಕೌಶಲ್ಯತೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಏಕರೂಪವಾಗಿ ಕಾರ್ಯ ನಿರ್ವಹಿಸಿದಾಗ ಮಾತ್ರ ನಿಜವಾದ ಉನ್ನತಿಯಾಗುತ್ತದೆ. ಲೆಕ್ಕಾಚಾರ ವಿಲ್ಲದ ಬದುಕು ನಿರರ್ಥಕ. ಅಧಿಕಾರ ಎಂಬುದು ದರ್ಪದಿಂದ ಕೂಡಿರದೆ, ಸೌಜನ್ಯತೆಯಿಂದ ಕೂಡಿರಲಿ. ವಿಶ್ವಾಸಪೂರ್ವಕ ನಡೆ ಹೊಸತನವನ್ನು ಕಲಿಯಲು ಸಾಧ್ಯ ಮಾಡಿಕೊಡಲಿದೆ ಎಂದರು.
ಯಶಸ್ಸಿಗೆ ಮೆಟ್ಟಿಲಿದೆ ವಿನಃ ಅಂತ್ಯವಿಲ್ಲ. ಬದುಕಿನ ದೊಡ್ಡ ಸಂಪತ್ತು ಬುದ್ಧಿವಂತಿಕೆ, ನಂಬಿಕೆ ಮತ್ತು ಸತ್ಯ ರಕ್ಷಣೆ ನೀಡಿದರೆ, ನಗು ದಿವ್ಯ ಔಷಧ. ಅಂತಹ ಕೌಶಲ್ಯತೆ ಯನ್ನು ರೂಡಿಸಿಕೊಳ್ಳಿ. ತಾನು ಸರ್ವಶ್ರೇಷ್ಠ ಎಂಬ ಭ್ರಮೆ ಬೇಡ ಎಂದು ಸಲಹೆ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಕಾನೂನು ತಜ್ಞ ವೆಂಕಟೇಶರಾವ್, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭದ್ರತೆಯಲ್ಲಿ ವಿದ್ಯಾಸಂಸ್ಥೆಯ ಎ ಸಿಬ್ಬಂದಿಗಳು ಜವಾಬ್ದಾರರು. ಅಲ್ಲಿ ಅನುದಾನಿತ ಮತ್ತು ಅನುದಾನರಹಿತ ಎಂಬ ವ್ಯತ್ಯಾಸವಿಲ್ಲ. ಕರ್ನಾಟಕ ಸರ್ಕಾರದ ಶಿಕ್ಷಣ ಕಾಯ್ದೆಯನ್ನು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗಗಳು ಅಧ್ಯಯನ ನಡೆಸಬೇಕು. ಶಿಕ್ಷಣ ಇಲಾಖೆಯೆಂಬುದು ತನ್ನದೇ ಇತಿಹಾಸ ಹೊಂದಿದೆ. ಬ್ರಿಟಿಷರ ಕಾಲದಲ್ಲಿ ಕಂದಾಯ ಮತ್ತು ಶಿಕ್ಷಣೆ ಇಲಾಖೆಗಳು ಮಾತ್ರ ಕಾರ್ಯ ನಿರ್ವಹಿಸುತ್ತಿತ್ತು ಎಂಬುದು ವಿಶೇಷ ಎಂದರು.
ಮಾಹಿತಿ ಹಕ್ಕು ಅಧಿನಿಯಮ ಬಹುದೊಡ್ಡ ಪ್ರಬಲವಾದ ಅಸ್ತ್ರ ವಾಗಿದೆ. ಪ್ರತಿಯೊಂದು ಆಡಳಿತ ಹಂತದಲ್ಲಿ ಸಾರ್ವಜನಿಕರು ಭಾಗವಹಿಸಲು ಮಾಹಿತಿ ಹಕ್ಕು ಅವಕಾಶ ಮಾಡಿಕೊಟ್ಟಿದೆ. ಸವಾಲು ಗಳನ್ನು ವಿಮರ್ಶಿಸಲು ಪ್ರಯತ್ನಿಸಿ. ಅದು eನಾರ್ಜನೆಯೊಂದಿಗೆ ಹೊಸ ಅನುಭವಗಳನ್ನು ನೀಡುತ್ತದೆ ಎಂದು ಹೇಳಿದರು.
ಎನ್‌ಇಎಸ್ ಕಾರ್ಯದರ್ಶಿ ಎಸ್.ಎನ್. ನಾಗರಾಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಕಾರ್ಯದರ್ಶಿ ಡಾ.ಪಿ. ನಾರಾಯಣ್, ನಿರ್ದೇಶಕರಾದ ಪಿ. ಮೈಲಾರಪ್ಪ, ಎಂ.ಎಸ್. ಅನಂತದತ್ತ, ಜಿ.ಎನ್.ಸುಧೀರ್, ಹೆಚ್.ಸಿ .ಶಿವಕುಮಾರ್, ಸೀತಾಲಕ್ಷ್ಮೀ, ಕುಲಸಚಿವರಾದ ಪ್ರೊ. ಎನ್.ಕೆ. ಹರಿಯಪ್ಪ ಉಪಸ್ಥಿತರಿದ್ದರು. ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ. ನೃಪತುಂಗ ಕಾರ್ಯಕ್ರಮ ನಿರೂಪಿಸಿದರು.