ಜಿಲ್ಲಾ ಸುದ್ದಿತಾಜಾ ಸುದ್ದಿ

ಡಿ.10: ಆರ್ಯ ಈಡಿಗ ಸಂಘದ ಅಮೃತ ಮಹೋತ್ಸವ ನಿಮಿತ್ತ ಬೃಹತ್ ಜಾಗೃತಿ ಸಮಾವೇಶ…

Share Below Link

ಶಿವಮೊಗ್ಗ: ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ೭೫ನೇ ವರ್ಷದ ಅಮೃತ ಮಹೋತ್ಸವ ನಿಮಿತ್ತ ಡಿ.೧೦ರ ಬೆಳಗ್ಗೆ ೧೧ ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಜಗೃತಿ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ ಸುದ್ದಿಗೋಷ್ಯಿಯಲ್ಲಿ ತಿಳಿಸಿದರು.


ಈಡಿಗ ಸಮುದಾಯ ರಾಜ್ಯದಲ್ಲಿ ೫೦ ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದ್ದು, ರಾಜಕೀಯ, ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಈ ನಾಡು ಕಟ್ಟುವ ಕಾಯಕದಲ್ಲಿ ಸಮುದಾಯದ ಪಾತ್ರ ಹಿರಿಯದಾ ದದ್ದು. ಎಸ್. ಬಂಗಾರಪ್ಪ ಹಾಗೂ ಕಾಗೋಡು ತಿಮ್ಮಪ್ಪನವರ ರಾಜಕೀಯ ಇಚ್ಚಾಶಕ್ತಿ ಹಾಗೂ ಬದ್ಧತೆಯ ಕಾರಣ ದಿಂದಾಗಿ ತಮ್ಮ ಅಧಿಕಾರದ ಅವಧಿಯಲ್ಲಿ ಹಲವಾರು ಜನಪರ ಹಾಗೂ ರೈತಪರ ಯೋಜನೆಗಳನ್ನು ರೂಪಿಸಿ ಆರ್ಥಿಕವಾಗಿ, ರಾಜಕೀಯವಾಗಿ ಹಾಗೂ ಶೈಕ್ಷಣಿಕವಾಗಿ ಸಮುದಾಯಕ್ಕೆ ಶಕ್ತಿ ನೀಡುವ ಕೆಲಸವಾಗಿದೆ ಎಂದರು.
ಸಮುದಾಯ ಗಂಭೀರ ಸಮಸ್ಯೆ ಗಳಿಗೆ ನ್ಯಾಯ ಕಂಡುಕೊಳ್ಳಬೇಕಾಗಿದೆ. ಈಡಿಗ ಸೇರಿದಂತೆ ೨೫ ಉಪ ಪಂಗಡಗಳ ಸಮಾಜ ಬಾಂಧವರು ಬೃಹತ್ ಸಂಖ್ಯೆಯಲ್ಲಿ ಸಮಾವೇಶ ಗೊಂಡು ನಮ್ಮ ಒಗ್ಗಟ್ಟಿನ ಶಕ್ತಿ ಪ್ರದರ್ಶನದ ಜೊತೆಗೆ ಮುಖ್ಯಮಂತ್ರಿ ಗಳ ಗಮನ ಸೆಳೆದು ಮೂಲಭೂತ ಸಮಸ್ಯೆಗಳ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಬೃಹತ್ ಜಗೃತ ಸಮಾವೇಶದಲ್ಲಿ ಪಕ್ಷಾತೀತವಾಗಿ ಹಮ್ಮಿಕೊಳ್ಳಲಾಗಿದೆ ಎಂದರು.
ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಚಿವರು ಸಮಾಜದ ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪ, ಖ್ಯಾತ ಚಲನಚಿತ್ರ ನಟ ಡಾ. ಶಿವರಾಜ್ ಕುಮಾರ್, ಈಡಿಗ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಶ್ರೀ ರೇಣುಕಾನಂದ ಸ್ವಾಮೀಜಿ, ಕಾರ್ತಿಕೇಯ ಪೀಠದ ಶ್ರೀ ಯೋಗೇಂದ್ರ ಅವಧೂತರು, ಶ್ರೀಕ್ಷೇತ್ರ ಸಿಂಗದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ರಾಮಪ್ಪ, ಸಚಿವ ಸಂಪುಟದ ಸಚಿವರುಗಳು ಸೇರಿದಂತೆ ಅನೇಕ ಮುಖಂಡರು ಭಾಗವಹಿಸಲಿ ದ್ದಾರೆ, ಅಧ್ಯಕ್ಷತೆಯನ್ನು ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷ ಡಾ| ಎಂ. ತಿಮ್ಮೆಗೌಡ ವಹಿಸಲಿದ್ದಾರೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವರುಗಳಾದ ಎಸ್. ಕುಮಾರ ಬಂಗಾರಪ್ಪ, ಹೆಚ್. ಹಾಲಪ್ಪ, ಮಾಜಿ ಶಾಸಕರುಗಳಾದ ಬಿ. ಸ್ವಾಮಿರಾವ್, ಡಾ| ಜಿ.ಡಿ. ನಾರಾಯಣಪ್ಪ ಹಾಗೂ ಸಮಾಜದ ಜಿಲ್ಲೆಯ ಹಿರಿಯ ಮುಖಂಡರು ಈ ಐತಿಹಾಸಿಕ ಸಮಾವೇಶದಲ್ಲಿ ಪಕ್ಷಾತೀತವಾಗಿ ಉಪಸ್ಥಿತರಿರುವರು.
ಈ ಸಮಾವೇಶದಲ್ಲಿ ರಾಜ್ಯದಿಂದ ಸುಮಾರು ೫ಲಕ್ಷ ಹಾಗೂ ಜಿಲ್ಲೆಯಿಂದ ಸುಮಾರು ೩೦ ಸಾವಿರ ಸಮಾಜ ಬಾಂಧವರು ಭಾಗವಹಿಸಲಿದ್ದಾರೆ ಎಂದರು.
ಜಿಲ್ಲಾ ಸಂಘದ ಮುಖಂಡರಾದ ಕಲಗೋಡು ರತ್ನಾಕರ್, ಹೊನ್ನಪ್ಪ, ಜಿ.ಡಿ.ಮಂಜುನಾಥ್, ರವಿ, ಗಣಪತಿ, ಧರ್ಮರಾಜ್, ರಾಜಪ್ಪ, ರಘುಪತಿ, ಪ್ರವೀಣ್ ಇದ್ದರು.