ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಸಾರ್ವಜನಿಕರ ನೀರಿಕ್ಷೆಯಂತೆ ಅಭಿವೃದ್ಧಿ ಕೆಲಸ: ಶಾಸಕ ಚನ್ನಬಸಪ್ಪ

Share Below Link

ಶಿವಮೊಗ್ಗ: ಮುಂದಿನ ಐದು ವರ್ಷಗಳಲ್ಲಿ ಶಿವಮೊಗ್ಗದಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸ ಗಳನ್ನು ಸಾರ್ವಜನಿಕರ ನೀರಿಕ್ಷೆ ಯಂತೆ ಕಾರ್ಯರೂಪಕ್ಕೆ ತರಲಾಗುವುದು ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.
ಶಿವಮೊಗ್ಗ ಜಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಸಂಯೋಜಿತ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಜಿಯ ನೂತನ ಶಾಸಕರಿಗೆ ಅಭಿನಂದನಾ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಯಲ್ಲಿ ಅಭಿವೃದ್ಧಿ ಕೆಲಸಗಳ ಕಾರ್ಯ ಎಲ್ಲ ಶಾಸಕ ರಿಂದಲೂ ನಿರಂತರವಾಗಿ ಮುಂ ದುವರೆಯುತ್ತದೆ. ಜಿಯ ಸರ್ವ ತೋಮುಖ ಅಭಿವೃದ್ಧಿ ದೃಷ್ಠಿಯಿ ಂದ ಎಲ್ಲ ಶಾಸಕರು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.
ಶಿವಮೊಗ್ಗ ಜಿಯ ಪ್ರತಿ ತಾಲೂಕಿನಲ್ಲಿ ವಿವಿಧ ರೀತಿಯ ಸಮಸ್ಯೆಗಳಿದ್ದು, ಎಲ್ಲ ಶಾಸಕರು ಪರಸ್ಪರ ಒಟ್ಟಾಗಿ ಬೆಂಬಲಿಸಿ ರಾಜ್ಯಮಟ್ಟದಲ್ಲಿ ಜಿಯ ಬಗ್ಗೆ ಗಮನ ಸೆಳೆಯುತ್ತೇವೆ. ಜಿಯ ಅವಶ್ಯಕತೆ ಹಾಗೂ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರದ ಹಂತದಲ್ಲಿ ಸಕಲ ರೀತಿ ಪ್ರಯತ್ನ ನಡೆಸುತ್ತೇನೆ ಎಂದರು.

ಶಿವಮೊಗ್ಗ ನಗರ ವಿಧಾನಸಭಾ ದೃಷ್ಠಿಯಿಂದ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದು, ಆಗಬೇಕಿರುವ ಕೆಲಸಗಳ ಬಗ್ಗೆ ಸಮಗ್ರ ಸಮಾಲೋಚನೆ ನಡೆಸು ತ್ತೇನೆ. ಜಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿ ಗಳೊಂದಿಗೆ ಶೀಘ್ರದಲ್ಲಿಯೇ ಚರ್ಚಿಸುತ್ತೇನೆ. ಶಿವಮೊಗ್ಗ ಕೈಗಾರಿಕಾ ಹಾಗೂ ಉದ್ಯಮ ದೃಷ್ಠಿಯಿಂದ ಆಗಬೇಕಿರುವ ಕೆಲಸಗಳಿಗೆ ಆದ್ಯತೆ ನೀಡಲಾಗು ವುದು ಎಂದು ಹೇಳಿದರು.
ಶಿವಮೊಗ್ಗ ಜಿ ವಾಣಿಜ್ಯ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಮಾತನಾಡಿ, ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನೇಕ ನಾಯಕರು ಶಿವಮೊಗ್ಗ ಜಿಯ ಅಭಿವೃದ್ಧಿಗೆ ಶ್ರಮಿಸಿzರೆ. ಪ್ರತಿ ಕ್ಷೇತ್ರದ ಶಾಸಕರು ಜಿಯ ಸಮಗ್ರ ದೃಷ್ಠಿಕೋನ ಗಮನದಲ್ಲಿಸಿಕೊಡು ಕೆಲಸ ಮಾಡುವುದರಿಂದ ಜಿಯ ಅಭಿವೃದ್ಧಿ ವೇಗ ಪಡೆದು ಕೊಳ್ಳುತ್ತದೆ ಎಂದು ತಿಳಿಸಿದರು.


ಶಿವಮೊಗ್ಗ ಜಿಯಲ್ಲಿ ಉದ್ಯಮ, ಕೈಗಾರಿಕೆ, ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಉತ್ತಮ ಅವಕಾಶಗಳಿದ್ದು, ಎಲ್ಲ ಶಾಸಕರು ಒಟ್ಟಾಗಿ ರಾಜ್ಯ ಸರ್ಕಾರಕ್ಕೆ ಶಿವಮೊಗ್ಗ ಜಿಯ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಡ ಹಾಕಬೇಕು. ಎಲ್ಲರು ಒಟ್ಟಾಗಿ ಕೆಲಸ ಮಾಡುವುದರಿಂದ ಶಿವಮೊಗ್ಗ ಜಿಯು ರಾಜ್ಯದಲ್ಲಿಯೇ ಅತ್ಯಂತ ವೇಗಗವಾಗಿ ಅಭಿವೃದ್ಧಿಯಾಗುವ ಜಿ ಯಾಗಲಿದೆ ಎಂದರು. ಶಿವ ಮೊಗ್ಗದ ಬೇರೆ ಬೇರೆ ವಿಧಾನಸಭಾ ಕ್ಷೇತ್ರದಲ್ಲಿ ಬೇರೆ ಬೇರೆ ಪಕ್ಷಗಳಿಂದ ಬೇರೆ ಬೇರೆ ರೀತಿಯ ತತ್ವ- ಸಿದ್ಧಾಂ ತಗಳನ್ನು ಇಟ್ಟುಕೊಂಡು ಚುನಾ ವಣೆಯಲ್ಲಿ ವಿಜಯಗಳಾಗಿzರೆ. ಅವರವರ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸಿ ಜನತೆಯ ಆಶೋತ್ತರ ಗಳಿಗೆ ಸ್ಪಂದಿ ಸುವ ಜವಾಬ್ದಾರಿ ಆಯಾ ಕ್ಷೇತ್ರದ ವಿಧಾನಸಭಾ ಸದಸ್ಯರದ್ದಾಗಿರು ತ್ತದೆ. ಆದರೆ ಜಿಯ ಸರ್ವಾಂಗಿ ಣ ಅಭಿವೃದ್ಧಿ ಪ್ರಶ್ನೆ ಬಂದಾಗ ಎ ಶಾಸಕರು ಒಂದಾಗಿ ಕೆಲಸ ಮಾಡಿ ಯಶಸ್ಸು ಗಳಿಸಬೇಕಾ ಗುತ್ತದೆ ಎಂದರು.


ಜಿ ವಾಣಿಜ್ಯ ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ ಹೋಬಳಿ ದಾರ್, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಮಾಜಿ ಅಧ್ಯಕ್ಷ ಡಿ.ಎಂ.ಶಂಕರಪ್ಪ, ಟಿ.ಆರ್.ಅಶ್ವತ್ಥ ನಾರಾಯಣಶೆಟ್ಟಿ, ಜೆ.ಆರ್.ವಾಸುದೇವ, ರಮೇಶ್ ಹೆಗಡೆ, ಬಿ.ಆರ್.ಸಂತೋಷ್, ಗಣೇಶ್ ಎಂ.ಅಂಗಡಿ, ಪ್ರದೀಪ್ ಯಲಿ, ಮಧುಸೂದನ್ ಐತಾಳ್, ಉದಯ್‌ಕುಮಾರ್, ಮರಿ ಸ್ವಾಮಿ, ಇ.ಪರಮೇಶ್ವರ್, ಸುಕುಮಾರ್, ಸಂಯೋಜಿತ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.