ಜಿಲ್ಲಾ ಸುದ್ದಿರಾಜಕೀಯ

ಸಂತೋಷ್‌ಜಿ ಬಗ್ಗೆ ಅವಹೇಳನ ಸಲ್ಲದು: ಶಾಸಕ ಚನ್ನಬಸಪ್ಪ ಎಚ್ಚರಿಕೆ

Share Below Link

ಶಿವಮೊಗ್ಗ: ಶಾಸಕ ಎಂಬ ಹೆಸರು ನಿಮಿತ್ತ ಮಾತ್ರ. ಸೇವಕ ಎಂಬುದೇ ನಿಜವಾದ ಅರ್ಥ. ನಾನು ಜನಸೇವಕನಾಗಿ ಮತದಾರರ ಋಣ ತೀರಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡು ತ್ತೇನೆ ಎಂದ ನೂತನ ಶಾಸಕ ಎಸ್. ಎನ್. ಚನ್ನಬಸಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನನ್ನು ಆಯ್ಕೆ ಮಾಡಿದ ಕ್ಷೇತ್ರದ ಮತದಾರರಿಗೆ, ಹಗಲಿರುಳು ಕೆಲಸ ಮಾಡಿದ ಕಾರ್ಯಕರ್ತರಿಗೆ, ನನಗೆ ಮಾರ್ಗದರ್ಶನ ಮಾಡಿದ ಪಕ್ಷದ ಹಿರಿಯರಿಗೆ, ಸಂಘ ಪರಿವಾರದ ವರಿಗೆ, ರಾಜ್ಯ, ರಾಷ್ಟ್ರದ ನಾಯಕ ರಿಗೆ ಅಭಿನಂದನೆಗಳು ಎಂದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಿಲ್ಲ ನಿಜ. ಬಿಜೆಪಿಗೆ ಸೋಲು ಇದೇ ಮೊದಲಲ್ಲ. ಸೋಲನ್ನು ಸವಾಲಾಗಿ ಸ್ವೀಕರಿಸಿ ನಮ್ಮ ನಾಯಕರು ಈಗ ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುತ್ತಾರೆ. ಕಾರ್ಯಕರ್ತರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದರು.
ಈಗಾಗಲೇ ಶಿವಮೊಗ್ಗ ನಗರದ ಅಭಿವೃದ್ಧಿ ಆಗಿದೆ. ಇನ್ನೂ ಆಗಬೇಕಾದದ್ದಿದೆ. ಮುಂದಿನ ದಿನಗಳಲ್ಲಿ ನಗರದ ಅಭಿವೃದ್ಧಿಯ ಕಡೆ ಗಮನಹರಿಸುತ್ತೇನೆ. ಹಿಂದುತ್ವ ಮತ್ತು ಅಭಿವೃದ್ಧಿ ಎರಡನ್ನೂ ಒಟ್ಟಿಗೇ ತೆಗೆದುಕೊಂಡು ಹೋಗುವೆ. ಶಿವಮೊಗ್ಗಕ್ಕೆ ಶಾಂತಿಬೇಕು ಎಂಬುದು ನಿಜ. ಆದರೆ ಅದು ಎ ಸಮುದಾಯದ ಕಡೆಯಿಂದ ಬರಬೇಕು. ನಾವು ಯಾವತ್ತೂ ಶಾಂತಿಯನ್ನು ಕದಡಲು ಹೋಗಲ್ಲ. ಹೋಗುವುದೂ ಇಲ್ಲ. ಒಟ್ಟಾರೆ ಮತದರರ ಋಣ ತೀರಿಸುವಂತಹ ಕೆಲಸ ಮಾಡುತ್ತೇನೆ. ಅವರು ನನಗೆ ಮತದಾನ ಮಾಡಿzರೆ. ಆ ನಂಬಿಕೆ ಯನ್ನು ಉಳಿಸಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜಿ. ಅವರ ಬಗ್ಗೆ ಸಾಮಾಜಿಕ ಜಲತಾಣಗಳಲಿ ಅತ್ಯಂತ ಕೀಳಾಗಿ ಕಾಣಲಾಗುತ್ತಿದೆ. ಸಂತೋಷ್ ಜಿ. ಅವರು ಪಕ್ಷವನ್ನು ಕಟ್ಟಿ ಬೆಳೆಸಿದ ವರು. ಸಂಘಟನೆಯ ಹರಿಕಾರರು, ರಾಷ್ಟ್ರ ಭಕ್ತರು. ಇಂತಹವರಿಗೆ ಅವಹೇಳನ ಮಾಡುತ್ತಿರುವುದು ಸರಿಯಲ್ಲ. ಬಿಜೆಪಿ ನಾಯಕರೂ ಕೂಡ ಅವರ ಬಗ್ಗೆ ಮಾತನಾಡಿದರೆ ಅದೂ ತಪ್ಪಾಗುತ್ತದೆ. ಸಂತೋಷ್ ಜಿ. ಅವರನ್ನು ಪ್ರಶ್ನೆ ಮಾಡುವವರು ಬಿಜೆಪಿಯಲ್ಲಿ ಇರಬಾರದು ಎಂದ ಅವರು, ಟೀಕೆ ಮಾಡುವವರು ಇಲ್ಲಿಗೆ ನಿಲ್ಲಿಸಬೇಕು. ಇಲ್ಲದೆ ಹೋದಲ್ಲಿ ಅವರ ಬಗ್ಗೆ ಪಕ್ಷ ಶಿಸ್ತಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ನಗರಾಧ್ಯಕ್ಷ ಜಗದೀಶ್, ಪ್ರಮುಖ ರಾದ ನಾಗರಾಜ್, ಚಂದ್ರಶೇಖರ್, ಕೆ.ವಿ. ಅಣ್ಣಪ್ಪ,. ಬಾಲು, ಮೋಹನ್ ರೆಡ್ಡಿ, ಮಂಜುನಾಥ್ ಉಪಸ್ಥಿತರಿದ್ದರು.