ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮತದಾನ ಪ್ರಮಾಣ ಕುಸಿಯಲು ವಿದ್ಯಾವಂತರೇ ಪ್ರಮುಖ ಕಾರಣ; ವಾಸುದೇವ್

Share Below Link

ಶಿವಮೊಗ್ಗ: ಚುನಾವಣೆಯಲ್ಲಿ ಮತದಾನ ಪ್ರಮಾಣ ಕಡಿಮೆ ಆಗು ವಲ್ಲಿ ವಿದ್ಯಾವಂತರು ಪ್ರಮುಖ ಕಾರಣ ಆಗಿರುತ್ತಾರೆ. ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಾರೆ. ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ ಆಗಿದೆ ಎಂದು ಜಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ವಾಸುದೇವ್ ಹೇಳಿದರು.
ನಗರದಲ್ಲಿ ಚಾಯ್ ಪೇ ಚರ್ಚಾ, ಮತದಾನ ಜಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮತದಾನ ಮಾಡಲು ಯಾವುದೇ ಆಮಿಷಕ್ಕೆ ಒಳಗಾಗಬಾರದು. ಮಲ್ಯರಹಿತ ರಾಜಕಾರಣಿಗಳನ್ನು ಆಯ್ಕೆ ಮಾಡಬಾರದು. ಉತ್ತಮ ಪ್ರತಿನಿಧಿಗಳ ಆಯ್ಕೆಗೆ ಹೆಚ್ಚು ಮತದಾನ ಆಗಬೇಕು. ಮತದಾನದ ಹಕ್ಕನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.
ವೈದ್ಯ ಶ್ರೀಧರ್ ಮಾತನಾಡಿ, ಕಾರ್ಯನಿಮಿತ ಬೆಂಗಳೂರು ಸೇರಿದಂತೆ ವಿವಿಧೆಡೆ ಕೆಲಸ ಮಾಡುತ್ತಿರುವವರನ್ನು ಕರೆಸಬೇಕು. ಮತದಾನದ ಹಕ್ಕು ಚಲಾಯಿಸ ಬೇಕು. ಜನರಿಂದ ಜನರಿಗಾಗಿ ಪ್ರತಿ ನಿಧಿಗಳ ಆಯ್ಕೆ ಮಾಡುವುದ ರಿಂದ ಸದೃಡ ಕರ್ನಾಟಕ ಮತ್ತು ಸಶಕ್ತ ಭಾರತ ನಿರ್ಮಾಣ ಸಾಧ್ಯ ಎಂದರು.
ಶಿವಮೊಗ್ಗ ಜಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯ ದರ್ಶಿ ವಸಂತ ಹೋಬಳಿದಾರ್ ಮಾತನಾಡಿ, ಎಲ್ಲರೂ ಮತದಾನ ಮಾಡಿ, ಉತ್ತಮರನ್ನು ಆಯ್ಕೆ ಮಾಡೋಣ. ಮತದಾನ ರಾಜ್ಯದ ವಿಕಾಸಕ್ಕೆ ವರದಾನ. ಮತದಾನ ಪ್ರಬಲ ಅಸ್ತ್ರ ಎಂದು ಹೇಳಿದರು.
ವಿಜಯ್‌ಕುಮಾರ್ ಜೈನ್ ಮಾತನಾಡಿ, ಮತದಾನವೇ ಪ್ರಜಪ್ರಭುತ್ವದ ಆಧಾರ ಎಂದರು. ಶಿವಮೊಗ್ಗ ಜಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಮಾತನಾಡಿ, ಮತದಾನ ನಮ್ಮ ಹಕ್ಕು, ಅದನ್ನು ಕಡ್ಡಾಯವಾಗಿ ಚಲಾಯಿಸೋಣ, ಪ್ರಜಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸೋಣ ಎಂದರು.
ಜಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ ಕುಮಾರ್, ಎಸ್.ಎಸ್.ವಾಗೇಶ್, ಶಿವಾನಂದರಾವ್ ಸಾನು, ದಿಲೀಪ್ ನಾಡಿಗ್, ಎ.ಮಂಜುನಾಥ್, ನಟರಾಜ್, ಚಂದ್ರಹಾಸ ರಾಯ್ಕರ್, ಮಂಜುನಾಥ್ ಕದಂ ಮುಂತಾದವರು ಭಾಗವಹಿಸಿದ್ದರು.