ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಎಲ್ಲರೂ ತಪ್ಪದೇ ಮತದಾನ ಮಾಡಿ ರಾಷ್ಟ್ರದ ಅಭಿವೃದ್ಧಿಗೆ ಸಹಕರಿಸಿ: ಸ್ನೇಹಲ್

Share Below Link

ಶಿವಮೊಗ್ಗ: ಪತ್ರಿಕಾ ಸಂಪಾ ದಕರ ಸಂಘ, ಮಹಾನಗರ ಪಾಲಿಕೆ, ನ್ಯೂ ಹಾಟ್ ವ್ಹೀಲ್ ಸ್ಕೇಟಿಂಗ್ ಸಂಸ್ಥೆ, ಜಿಲ್ಲಾಡಳಿತ, ಜಿಪಂ ಆಶ್ರಯದಲ್ಲಿ ಇಂದು ಮತದಾರರ ಜಾಗೃತಿ ಸ್ಕೇಟಿಂಗ್ ಅಭಿಯಾನ ಕಾರ್ಯಕ್ರಮ ವನ್ನು ಮಹಾನಗರ ಪಾಲಿಕೆ ಆವರ ಣದಿಂದ ಹಮ್ಮಿಕೊಳ್ಳಲಾಗಿತ್ತು.
ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಲೋಖಂಡೆ ಸ್ನೇಹಲ್ ಸುಧಾಕರ್, ಮತದಾನ ಜಾಗೃತಿ ಇಂದು ಬಹುಮುಖ್ಯ ವಾಗಿದೆ. ಎಲ್ಲರೂ ತಪ್ಪದೆ ಮತ ದಾನ ಮಾಡಬೇಕು. ಆ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಸಹಕರಿಸ ಬೇಕು ಎಂದು ಕರೆ ನೀಡಿದರು.
ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಅವರು ಮಾತ ನಾಡಿ, ಸದೃಢ ರಾಜ್ಯ ಕಟ್ಟಲು ಮತದಾನದ ಅವಶ್ಯಕತೆ ಇದೆ. ಮೇ ೧೦ರಂದು ಚುನಾವಣೆ ನಡೆಯ ಲಿದೆ. ಆ ದಿನ ಯಾವುದೇ ಕಾರಣ ಹೇಳದೆ ಮತಗಟ್ಟೆಗೆ ಬಂದು ಪ್ರತಿಯೊಬ್ಬ ಮತದಾರನೂ ಮತ ಚಲಾಯಿಸ ಬೇಕು ಎಂದು ಕರೆ ನೀಡಿದರು.
ಸ್ವೀಪ್ ಸಮಿತಿಯ ಟಿ.ಆರ್. ಅನುಪಮಾ ಮಾತನಾಡಿ, ಮತ ದಾನ ಜಾಗೃತಿ ಮೂಡಿಸಲು ಹಲವಾರು ಕಾರ್ಯಕ್ರಮಗಳನ್ನು ನಾವು ಹಮ್ಮಿಕೊಂಡಿದ್ದೇವೆ. ವಿಕಲಚೇತನ ರಿಂದ ಕ್ಯಾಂಡಲ್ ಅಭಿಯಾನದ ಮೂಲಕ ಹಾಗೂ ಬೈಕ್ ಮತ್ತು ಸೈಕಲ್ ಜಥಾದ ಮೂಲಕವೂ ಜಾಗೃತಿ ಹಮ್ಮಿ ಕೊಳ್ಳಲಾಗುವುದು ಎಂದರು.
ಶ್ರೀನಿಧಿ ಸಂಸ್ಥೆಯ ಟಿ. ಆರ್. ಅಶ್ವತ್ಥ ನಾರಾಯಣ ಶೆಟ್ಟಿ, ಜಿಲ್ಲಾ ವಾಣಿಜ್ಯ ಸಂಘದ ಅಧ್ಯಕ್ಷ ಎನ್ ಗೋಪಿನಾಥ್, ಜಿ. ವಿಜಯ ಕುಮಾರ್ ಸೇರಿದಂತೆ ಹಲವರು ಮತದಾನದ ಜಗೃತಿ ಕುರಿತು ಮಾತನಾಡಿದರು.
ಮತದಾನ ಪ್ರಜಪ್ರಭುತ್ವದ ಹಬ್ಬ: ಜಿಲ್ಲಾಧಿಕಾರಿ
ಮತದಾನ ಜಗೃತಿ ಬಗ್ಗೆ ಆಯೋಜಿಸಿದ್ದ ಸ್ಕೇಟಿಂಗ್ ಜಾಥಾವನ್ನು ಡಿಸಿ ಕಚೇರಿ ಎದುರು ಸ್ವಾಗತಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ| ಸೆಲ್ವಮಣಿ, ಮತದಾನ ಎಂಬುದು ಪ್ರಜಪ್ರಭುತ್ವದ ಹಬ್ಬವಾಗಿದೆ. ಮತದಾನ ಬಹಳ ಮುಖ್ಯ. ಎಲ್ಲರೂ ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳಬೇಕು. ಈಗಾಗಲೇ ಸುಮಾರು ೬೪ ಸಾವಿರ ಹೊಸ ಮತದಾರರ ಚೀಟಿಗಳು ಬಂದಿವೆ. ೫೦ ಸಾವಿರ ಮತಚೀಟಿಗಳನ್ನು ಅಂಚೆ ಮೂಲಕ ಕಳಿಸಲಾಗಿದೆ. ಉಳಿದವನ್ನು ಇಂದು ಮತ್ತು ನಾಳೆ ಕಳಿಸಲಾಗುವುದು. ಹೊಸದಾಗಿ ಮತದಾರರ ಪಟ್ಟಿಯಲ್ಲಿ ಸೇರುವವರು ಇಂದು ಮತ್ತು ನಾಳೆ ಅವಕಾಶವಿದ್ದು, ಅದನ್ನು ಉಪಯೋಗಿಸಿಕೊಳ್ಳಿ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ನ್ಯೂ ಹಾಟ್ ವ್ಹೀಲ್ ಸ್ಕೇಟಿಂಗ್ ಸಂಸ್ಥೆಯ ಅಧ್ಯಕ್ಷ ಶಿ.ಜು. ಪಾಷಾ, ಸಂಪಾದಕರ ಸಂಘದ ಅಧ್ಯಕ್ಷ ಜಿ. ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಗಜೇಂದ್ರ ಸ್ವಾಮಿ, ಪತ್ರಕರ್ತರಾದ ರಘುರಾಜ್, ಜಿ.ಪದ್ಮನಾಭ್, ಹಾಲೇಶ್, ಕೃಷ್ಣ ಬನಾರಿ, ಸಹ್ಯಾದ್ರಿ ಮಂಜುನಾಥ್, ಕಣ್ಣಪ್ಪ, ನಾಗೇಶ್ ನಾಯ್ಕ, ಆನಂದ್, ಪಿ. ಆಕಾಶ್, ಭರತೇಶ್, ನಾಗರಾಜ ಕಲ್ಲುಕೊಪ್ಪ, ಗೋಪಾಲ ಯಡಗೆರೆ, ಸ್ಕೇಟಿಂಗ್ ಸಂಸ್ಥೆ ಪ್ರಧಾನ ಕಾರ್ಯದರ್ಶಿ, ರವಿಕುಮಾರ್ ಸ್ವೀಪ್ ಸಮಿತಿಯ ನವೀದ್ ಅಹಮದ್ ಪರ್ವೀಜ್, ಪ್ರಮುಖರಾದ ಲೋಕೇಶ್, ರತ್ನಾಕರ್, ಎಂ ರವಿ, ಪ್ರವೀಣ್, ಉಮಾ ಟಿ. ಸೇರಿದಂತೆ ಹಲವರು ಇದ್ದರು.