ಜಿಲ್ಲಾ ಸುದ್ದಿತಾಜಾ ಸುದ್ದಿ

ರಾಜೀ ಸಂಧಾನ ಮೂಲಕ ವ್ಯಾಜ್ಯಗಳ ಪರಿಹಾರ ಕಂಡುಕೊಳ್ಳಿ : ನ್ಯಾ|ದೇವದಾಸ್

Share Below Link

ಶಿವಮೊಗ್ಗ: ರಾಜೀ ಸಂಧಾನ ದಿಂದ ವ್ಯಾಜ್ಯಗಳನ್ನು ಇತ್ಯರ್ಥ ಪಡಿಸಿಕೊಳ್ಳುವ ಮೂಲಕ ಸಂಬಂಧ ಮತ್ತು ಸಮಯವನ್ನು ಕಕ್ಷಿದಾರರು ಉಳಿಸಿಕೊಳ್ಳಬಹುದು ಎಂದು ಕರ್ನಾಟಕ ಉಚ್ಛ ನ್ಯಾಯಾ ಲಯದ ನ್ಯಾಯಾಧೀಶರು ಹಾಗೂ ಆಡಳಿತಾತ್ಮಕ ನ್ಯಾಯ ಮೂರ್ತಿಗಳಾದ ಆರ್. ದೇವ ದಾಸ್ ಹೇಳಿದರು.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ಸಹಯೋಗ ದೊಂದಿಗೆ ಇಂದು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಲೋಕ್ ಅದಾಲಯ್‌ನ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎಲ್ಲಿಯವರೆಗೆ ಮನುಷ್ಯ ಇರುತ್ತಾನೋ ಅಲ್ಲಿಯವರೆಗೆ ವ್ಯಾಜ್ಯ ಗಳಿರುತ್ತವೆ. ಆದರೆ ಕಕ್ಷಿದಾ ರರು ಆದಷ್ಟು ಕೋರ್ಟಿಗೆ ಬರುವುದನ್ನು ಕಡಿಮೆ ಮಾಡ ಬೇಕು. ಬಹಳಷ್ಟು ವ್ಯಾಜ್ಯಗಳನ್ನು ನಮ್ಮಲ್ಲೇ ಇತ್ಯರ್ಥ ಪಡಿಸಿಕೊಳ್ಳ ಬಹುದು. ಮಧ್ಯಸ್ಥಿಕೆ ವಹಿಸುವ ಮೂಲಕ, ರಾಜೀ ಮಾಡುವ ಮೂಲಕ ಅನೇಕ ಸಮಸ್ಯೆಗಳು, ವ್ಯಾಜ್ಯಗಳನ್ನು ಇತ್ಯರ್ಥಪಡಿಸಬ ಹುದು. ಈ ಉದ್ದೇಶದಿಂದಲೇ ಲೋಕ್ ಅದಾಲತ್‌ನ್ನು ನಡೆಸಲಾ ಗುತ್ತಿದೆ. ಕಕ್ಷಿದಾರರಿಗೆ ಶೀಘ್ರ ನ್ಯಾಯ ಒದಗಿಸಲು ಮತ್ತು ಅವರ ಸಮಯ, ಸಂಬಂಧ, ಹಣ ಉಳಿ ಸಲು ಲೋಕ್ ಅದಾಲತ್‌ನಲ್ಲಿ ರಾಜೀ ಸೂತ್ರದ ಮೂಲಕ ಪ್ರಕರ ಣಗಳನ್ನು ಇತ್ಯರ್ಥ ಪಡಿಸಲಾ ಗುತ್ತಿದೆ. ವ್ಯಾಜ್ಯಗಳು, ಭಿನ್ನಾಭಿ ಪ್ರಾಯಗಳು ಕಡಿಮೆಯಾದಷ್ಟು ಸಂತೋಷವಾಗಿರ್ತೀವಿ. ಆದ್ದರಿ ಂದ ಕಕ್ಷಿದಾರರು ತಮ್ಮ ಭಿನ್ನಾಭಿ ಪ್ರಾಯವನ್ನು ಸೂಕ್ತ ರೀತಿಯಲ್ಲಿ ನಿವಾರಿಸಿಕೊಳ್ಳಲು ಮನಸ್ಸು ಮಾಡಬೇಕು. ಲೋಕ್ ಅದಾ ಲತ್‌ನ ಸದುಪಯೋಗ ಪಡೆಯ ಬೇಕೆಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಮಂಜು ನಾಥ್ ನಾಯಕ್ ಅವರು ಪ್ರಾಸ್ತಾ ವಿಕವಾಗಿ ಮಾತನಾಡಿ, ಪ್ರಸಕ್ತ ಸಾಲಿನ ೩ನೇ ಲೋಕ್ ಅದಾಲತ್ ನ್ನು ಇಂದು ನಡೆಸಲಾಗುತ್ತಿದೆ. ಜಿಲ್ಲೆಯ ೧೨ ಪೀಠಗಳು ಇಂದು ಲೋಕ್ ಅದಾಲತ್‌ನ್ನು ನಿರ್ವ ಹಣೆ ಮಾಡುತ್ತಿವೆ. ೧೨ ಸಾವಿರ ನ್ಯಾಯಾಲಯದ ಪ್ರಕರಣಗಳು ಮತ್ತು ೮೫ ಸಾವಿರ ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿ ಸುವ ಉದ್ದೇಶ ಹೊಂದಲಾಗಿದೆ ಎಂದರು.
ಇದೇ ವೇಳೆ ಸಾಂಕೇತಿಕವಾಗಿ ಪ್ರಕರಣಗಳ ರಾಜೀ ಪತ್ರವನ್ನು ವಿತರಿಸಿದರು. ಮುಖ್ಯ ಅತಿಥಿಗ ಳಾಗಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ಜಿ. ಶಿವಮೂರ್ತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎನ್. ಚಂದನ್ ಪಾಲ್ಗೊಂದ್ದರು. ಕಾರ್ಯಕ್ರಮದಲ್ಲಿ ನ್ಯಾಯಾ ಧೀಶರು, ಅಭಿಯೋಜಕರು, ನ್ಯಾಯವಾದಿಗಳು, ವಿಮಾ ಕಂಪನಿಯ ಅಧಿಕಾರಿಗಳು, ಕಕ್ಷಿದಾರರು ಹಾಜರಿದ್ದರು.