ವಂಚನೆ ಪ್ರಕರಣ:ಆರೋಪಿ ಬಂಧನ
ಶಿವಮೊಗ್ಗ: ಹೆಂಡತಿಗೆ ಅನಾರೋಗ್ಯವಿದೆ ಎಂದು ಹೇಳಿ ಕಾರನ್ನು ಸ್ನೇಹಿನಿಂದ ಪಡೆದು ಕೊಂಡು ವಾಪಾಸ್ ಕೊಡದೆ ಮೋಸ ಮಾಡಿದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿ ದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ೮ ಕಾರು ವಶಕ್ಕೆ ಪಡೆದುಕೊಂಡಿzರೆ.
ಆರ್.ಎಂ.ಎಲ್ ನಗರದ ನಿವಾಸಿ ಸೈಯದ್ ಸಾದಿಕ್ರವರ ಟಾಟಾ ಇನ್ನೋವಾ ಕಾರನ್ನು ಆತನ ಪರಿಚ ಯಸ್ಥನಾದ ಕಿರಣ್ ಕುಮಾರ್ ಅಲಿಯಾಸ್ ಗುಂಡನು ತೆಗೆದು ಕೊಂಡು ಹೋಗಿ ಕಾರನ್ನು ವಾಪಾ ಸ್ ಕೊಡದೇ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಮೋಸ ಮಾಡಿರುತ್ತಾನೆಂದು, ಸೈಯ್ಯದ್ ಸಾದಿಕ್ ದೂರುನೀಡಿದ್ದರು.
ಪ್ರರಕಣದಲ್ಲಿ ಆರೋಪಿ ಹಾಗೂ ಕಾರಿನ ಪತ್ತೆಗಾಗಿ ಎಸ್.ಪಿ ಮಿಥುನ್ಕುಮಾರ್ ಮಾರ್ಗ ದರ್ಶನದಲ್ಲಿ ಹಿರಿಯ ಅಧಿಕಾರಿ ಗಳ ವಿಶೇಷ ತಂಡ ರಚಿಸಲಾಗಿತ್ತು. ತಂಡವು ಸೋಮವಾರ ಪ್ರಕರಣದ ಆರೋಪಿ ಕಿರಣ್ (೩೫), ಕಾರು ಚಾಲಕನಾಗಿzನೆ. ಈತನನ್ನು ಬಂಧಿಸಿ ಅಂದಾಜು ೧೦,೦೦, ೦೦೦ರೂ.ಗಳ ೨ ಟೊಯೋಟಾ ಇನ್ನೋವಾ ಕಾರು, ೩ ಸ್ವಿಫ್ಟ್ ಡಿಸೈರ್ ಕಾರು ಮತ್ತು ೩ ಮಾರುತಿ ಸುಜುಕಿ ಎರ್ಟಿಗಾ ಕಾರು ಸೇರಿದಂತೆ ಒಟ್ಟು ೮ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.
ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಜಿ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿ ಅಭಿನಂದಿಸಿzರೆ.