ಜಿಲ್ಲಾ ಸುದ್ದಿತಾಜಾ ಸುದ್ದಿ

ಶರಾವತಿ ಸಂತ್ರಸ್ಥರು, ಬಗರ್‌ಹುಕುಂ ಸಾಗುವಳಿದಾರರ ನೆರವಿಗೆ ಸರ್ಕಾರ ಬದ್ಧ …

Share Below Link

ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರು ಹಾಗೂ ಜಿಯ ಬಗರ್‌ಹುಕುಂ ಸಾಗುವಳಿದಾರರ ಹಲವು ದಶಕಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಜಿಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿವಿಧ ಇಲಾಖಾ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಕಾರ್ಯಕ್ರಮದ ಅನುಷ್ಠಾನದಲ್ಲಿ ಸಮಸ್ಯೆಗಳು, ಕಾನೂನಿನ ತೊಡಕು ಎದುರಾಗ ಬಹುದಾಗಿದ್ದಲ್ಲಿ ಮಾಹಿತಿ ಒದಗಿಸಿ ದ್ದಲ್ಲಿ ಅಗತ್ಯ ಕ್ರಮ ವಹಿಸಲಾಗುವುದು ಎಂದರಲ್ಲದೇ, ಎ ಇಲಾಖೆಗಳ ಅಧಿಕಾರಿಗಳು ಸರ್ಕಾರದ ನಿಯಮವನ್ನು ಕಡ್ಡಾಯ ವಾಗಿ ಪಾಲಿಸಿ. ಮಾಡುವ ಯಾವುದೇ ಕಾರ್ಯ ಕಾಲಮಿತಿ ಯಲ್ಲಿ ಪೂರ್ಣಗೊಳಿಸಿ. ಸಂತ್ರಸ್ಥರಿಗೆ ನೆರವು ನೀಡುವ ವಿಷಯದಲ್ಲಿ ಮುಖ್ಯಮಂತ್ರಿಗಳು ಉತ್ಸುಕರಾಗಿ zರೆ. ಜನರಿಗೆ ಅನುಕೂಲವಾಗು ವಂತಿದ್ದಲ್ಲಿ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಸಹಕರಿಸಿ ಎಂದವರು ನುಡಿದರು.


ಸಂತ್ರಸ್ಥರ ಸಮಸ್ಯೆಯನ್ನು ಸರಳವಾಗಿ ಸುಲಭವಾಗಿ ಇತ್ಯರ್ಥ ಗೊಳಿಸಲು ಅಧಿಕಾರಿಗಳು ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಬೇಕು. ಅಲ್ಲದೇ ರೈತರಿಗೆ ಹಲವು ದಶಕಗಳ ಹಿಂದೆ ನಿಮಾನು ಸಾರ ಭೂಮಿಯ ಮಂಜೂರಾತಿ ಯಾಗಿದ್ದರೂ ಅರಣ್ಯ ಇಲಾಖೆಯ ದಾಖಲೆಗಳಲ್ಲಿ ಬದಲಾವಣೆ ಯಾಗದೆ ರೈತರಿಗೆ ಅಭದ್ರತೆ ಕಾಡುತ್ತಿದೆ. ಸಾಗುವಳಿದಾರರ ನೆಮ್ಮದಿಯ ಬದುಕಿಗೆ ಸಹಕಾರಿ ಯಾಗಬೇಕು ಎಂದ ಅವರು, ಕಾನೂನು ತೊಡಕಿಲ್ಲದೇ ಸ್ಥಳೀಯ ವಾಗಿ ಬಗೆಹರಿಸಬಹುದಾದ ಹಾಗೂ ಈಗಲೂ ವಿಲೇವಾರಿ ಯಾಗದೇ ಉಳಿದಿರುವ ಅರ್ಜಿಗಳ ಬಗ್ಗೆ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅರಣ್ಯದಂಚಿನ ಹೊಲಗಳಲ್ಲಿ ಮಂಗನ ಹಾವಳಿಯಿಂದಾಗಿ ರೈತರು ತಮ್ಮ ಬೆಳೆಯನ್ನು ಸಂರಕ್ಷಿಸಿ ಕೊಳ್ಳುವುದೇ ಸವಾಲಿನ ಕೆಲಸ ವಾಗಿದೆ. ಮಂಗಗಳ ನಿಯಂತ್ರಣ ಕ್ಕಾಗಿ ಅತ್ಯಾಧುನಿಕ ತಂತ್ರeನವನ್ನು ಅಳವಡಿಸಿಕೊಳ್ಳಲು ಅರಣ್ಯ ಇಲಾಖೆಯಿಂದ ಕಾನೂನು ತೊಡಕು ಎದುರಾಗುತ್ತಿದೆ. ಇದಕ್ಕೆ ಸೂಕ್ತ ಪರಿಹಾರ ಕ್ರಮ ಕೈಗೊಳ್ಳು ವಂತೆ ಸಚಿವರು ಅರಣ್ಯಾಧಿಕಾರಿ ಗಳಿಗೆ ಸೂಚಿಸಿದರು.
ಕಂದಾಯ ಇಲಾಖೆಯು ಈ ಹಿಂದೆ ಕೆಲವು ರೈತರಿಗೆ ಮಂಜೂರಾತಿ ನೀಡಿರುವ ಭೂಮಿ ಹಕ್ಕು ಪ್ರಮಾಣ ಪತ್ರದಲ್ಲಿ ಹಂಗಾಮಿ ಎಂಬ ಪದ ಬಳಕೆ ಯಿಂದಾಗಿ ಸರ್ಕಾರದ ಸೌಲತ್ತು ಗಳನ್ನು ಪಡೆಯಲು ಅಡಚಣೆ ಉಂಟಾಗುತ್ತಿದೆ. ಈ ಹಂಗಾಮಿ ಎಂಬ ಪದ ಕೈಬಿಟ್ಟು, ದಾಖಲೆ ಮಾಡಿಕೊಡಲು ಸರ್ಕಾರಕ್ಕೆ ಮಾರ್ಗದರ್ಶನ ನೀಡುವಂತೆ ಅರಣ್ಯಾಧಿಕಾರಿಗಳು ಕ್ರಮವಹಿಸಲು ಸೂಚಿಸಿದರು.
ಈಗಾಗಲೇ ರಾಜ್ಯದೆಡೆ ಸರ್ಕಾರಿ ಒಡೆತನ ಜಗಗಳಲ್ಲಿರುವ ಅರ್ಹ ಫಲಾನುಭವಿಗಳು ೯೪ಸಿ ಮತ್ತು ೯೪ಸಿಸಿ ಅಡಿ ಅರ್ಜಿ ಸಲ್ಲಿಸಿರು ವವರನ್ನು ಒಕ್ಕಲೆಬ್ಬಿಸುವ ಅಥವಾ ಮನೆಯನ್ನು ತೆರವುಗೊಳಿಸುವ ಸಾಹಸಕ್ಕೆ ಅಧಿಕಾರಿಗಳು ಮುಂದಾಗ ದಂತೆ ಸೂಚಿಸಿದ ಅವರು, ಅರಣ್ಯ ಮತ್ತು ಕಂದಾಯ ಇಲಾಖೆಗಳ ನಡುವಿನ ಹಲವು ಸಮಸ್ಯೆಗಳ ಇತ್ಯರ್ಥಕ್ಕಾಗಿ ಮಂಗಳವಾರ ಬೆಂಗಳೂರಿನಲ್ಲಿ ಸಭೆ ಕರೆದು ಸೂಕ್ತ ನಿರ್ಣಯನ ಕೈಗೊಳ್ಳಲಾಗುವುದು ಎಂದವರು ನುಡಿದರು.
ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಕೈಗೊಳ್ಳಲಾದ ಕೆಲವು ಕಾಮಗಾರಿಗಳು ಅಪೂರ್ಣ ವಾಗಿದ್ದು, ಮಳೆಗಾಲದಲ್ಲಿ ಜನಸಾಮಾನ್ಯರಿಗೆ ಸಾಮಾನ್ಯದಿಂದ ತೀವ್ರ ಸ್ವರೂಪದ ಸಮಸ್ಯೆ ಉಂಟಾ ಗಲಿದೆ. ನಗರದಲ್ಲಿ ಕೈಗೊಳ್ಳಬಹು ದಾದ ಇನ್ನಷ್ಟು ರಚನಾತ್ಮಕ ಕಾರ್ಯಗಳಿಗಾಗಿ ಪ್ರಸ್ತಾವನೆಯನ್ನು ತಯಾರಿಸಿ, ಸರ್ಕಾರಕ್ಕೆ ಸಲ್ಲಿಸುವಂತೆ ಸಚಿವರು ಮಹಾನಗರಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ಸೊರಬ ಮತ್ತು ಆನವಟ್ಟಿಯಲ್ಲಿ ಯುಜಿಡಿ ಕಾಮಗಾರಿಯನ್ನು ಆರಂಭಿಸಲು ಕ್ರಿಯಾಯೋಜನೆ ಯನ್ನು ತಯಾರಿಸಿ ಕೂಡಲೆ ಸಲ್ಲಿಸ ಬೇಕು. ಅಲ್ಲದೇ ಇಲ್ಲಿನ ಕುಡಿಯುವ ನೀರಿನ ಸಮಸ್ಯೆಯ ಪರಿಹಾರಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಜೆ.ಜೆ.ಎಂ. ಯೋಜನೆಯಡಿ ಲಿಂಗನಮಕ್ಕಿಯಿಂದ ನೀರು ತರುವ ಯೋಜನೆ ಕಾಮಗಾರಿಗೆ ಪ್ರಸ್ತಾವನೆ ಸಲ್ಲಿಸುವಂತೆಯೂ ಸೂಚಿಸಿದ ಅವರು, ಈ ಸಂಬಂಧ ಶೀಘ್ರದಲ್ಲಿ ಬೆಂಗಳೂರಿನಲ್ಲಿ ಸಭೆ ಕರೆದು ನಿರ್ಣಯ ಕೈಗೊಳ್ಳಲಾಗುವುದು ಎಂದರು.


ಸೊರಬದಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ನಿರ್ಮಾಣ, ಜಿಯ ಕೊಳಚೆ ಪ್ರದೇಶಗಳ ಅಭಿವೃದ್ಧಿ, ಪಂಚಾಯತ್ ಅಭಿವೃದ್ದಿ ಯೋಜನಯಡಿ ಗ್ರಾಮೀಣ ರಸ್ತೆಗಳ ದುರಸ್ತಿಗೆ ಪ್ರಸ್ತಾವನೆ ತಯಾರಿಸಿ ಸಲ್ಲಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಹಿಂದಿನ ಸರ್ಕಾರಗಳ ಅವಧಿಯಲ್ಲಿ ಕೈಗೊಂಡ ಕೆಲವು ನಿರ್ಣಯ ಗಳಿಂದಾಗಿ ಅರಣ್ಯ ಭೂಮಿಯಲ್ಲಿ ಹಲವು ದಶಕಗಳಿಂದ ವಾಸವಾಗಿ ರುವ ವನವಾಸಿಗಳಿಗೆ, ಮನೆ ನಿರ್ಮಿಸಿಕೊಂಡು ವಾಸವಾಗಿರುವ ವಸತಿಗರಿಗೆ ಭೂಮಿಯಹಕ್ಕು ನೀಡುವಲ್ಲಿ ತೀವ್ರತರಹದ ಅಡಚಣೆ ಉಂಟಾಗುತ್ತಿದೆ. ಇರುವ ಕಾನೂನು ತೊಡಕನ್ನು ತೆರವುಗೊಳಿಸಲು ಹಾಗೂ ಶರಾವತಿ ಸಂತ್ರಸ್ಥರ ದೀರ್ಘ ಕಾಲದ ಸಮಸ್ಯೆಯ ಪರಿಹಾರಕ್ಕಾಗಿ ತಜ್ಞರನ್ನೊಳಗೊಂಡ ಸಮಿತಿಯನ್ನು ರಚಿಸಲು ರಾಜ್ಯ ಅರಣ್ಯ ಸಚಿವ ರೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರಸ್ತಾವನೆಯ ಅನುಮೋದನೆಯ ನಂತರ ಶೀಘ್ರದಲ್ಲಿ ಸಭೆ ಕರೆದು ಸಮಸ್ಯೆಗಳ ಪರಿಹಾರ ಕಾರ್ಯದ ಬಗ್ಗೆ ತಜ್ಞರ ಸಲಹೆ ಪಡೆದು, ಕ್ರಮಕ್ಕಾಗಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಉದ್ದೇಶಿಸಲಾಗಿದೆ ಎಂದು ಸಿಸಿಎಫ್ ಹನುಮಂತಪ್ಪ ಅವರು ಹೇಳಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕಿಷ್‌ಬಾನು, ಜಿಧಿಕಾರಿ ಗುರುದತ್ತ ಹೆಗಡೆ, ಜಿ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಸಿಸಿಎಫ್ ಹನುಮಂತಪ್ಪ, ಜಿಪಂ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್, ಅಪರ ಜಿಧಿಕಾರಿ ಸಿದ್ಧಲಿಂಗರೆಡ್ಡಿ, ಮಹಾನಗರಪಾಲಿಕೆ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್, ಕೃಷಿ ಜಂಟಿ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ, ಜಿ ಆರೋಗ್ಯಾಧಿಕಾರಿ ಡಾ| ನಟರಾಜ್ ಸೇರಿದಂತೆ ವಿವಿಧ ಇಲಾಖೆಗಳ ಜಿ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *