ಇತರೆಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿದೇಶರಾಜಕೀಯ

ವಿಐಎಸ್‌ಎಲ್ ಪುನರಾರಂಭಕ್ಕೆ ಗ್ರೀನ್ ಸಿಗ್ನಲ್…

Share Below Link

ಶಿವಮೊಗ್ಗ: ತೀವ್ರ ನಷ್ಠದ ಹಿನ್ನಲೆಯಲ್ಲಿ ಕೇಂದ್ರದ ಕಂಗೆಣ್ಣಿಗೆ ಗುರಿಯಾಗಿದ್ದ ಭದ್ರಾವತಿಯ ಪ್ರತಿಷ್ಠಿತ ಕಾರ್ಖಾನೆಯಾಗಿದ್ದ ವಿಐಎಸ್‌ಎಲ್‌ಗೆ ಅಂತಿಮ ಮೊಳೆ ಹೊಡೆಯಲು ಸೈಲ್ ಸಿದ್ದತೆ ನಡೆಸಿತ್ತು. ಕಾರ್ಖಾನೆ ಉಳಿವಿಗಾಗಿ ಕಾರ್ಮಿಕರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ನಿರಂತರ ಹೋರಾಟ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ.
ಕಾರ್ಖಾನೆ ಉಳಿವಿಗಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರು ಕೂಡ ನಿರಂತರ ಪ್ರಯತ್ನ ನಡೆಸುತ್ತಾ ಬಂದಿದ್ದು, ಇಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಸಂಪರ್ಕಿಸಿ ನಡೆಸಿದ ಮಾತುಕತೆ ಫಲಪ್ರದವಾಗಿದೆ.
ಸೈಲ್ ಆಡಳಿತ ಮಂಡಳಿಯು ಭದ್ರಾವತಿ ವಿಎಸ್‌ಐಎಲ್‌ನಲ್ಲಿ ಉತ್ಪಾದನಾ ಚಟುವಟಿಕೆಗಳನ್ನು ಪುನರಾರಂಭಿಸಲು ಅಂತಿಮವಾಗಿ ಒಪ್ಪಿಕೊಂಡಿದೆ ಎಂದು ಸಂಸದ ಬಿವೈಆರ್ ಹೊಸನಾವಿಕ ಪತ್ರಿಕೆಗೆ ತಿಳಿಸಿದ್ದಾರೆ.
ಆ.೧೦ರಿಂದ ವಿಐಎಸ್‌ಎಲ್‌ನ ಬಾರ್‌ಮಿಲ್ ಕಾರ್ಯಾಚರಣೆಗಳು ಪ್ರಾರಂಭವಾಗಲಿದ್ದು, ಮುಂದಿನ ದಿನಗಳಲ್ಲಿ ಪ್ರಾಥಮಿಕ ಗಿರಣಿ ಪುನರಾರಂಭವಾಗಲಿದೆ ಎಂದಿರುವ ಬಿ.ವೈಆರ್, ವಿಐಎಸ್‌ಎಲ್‌ನ್ನು ನಂಬಿಕೊಂಡಿರುವ ಉದ್ಯೋಗಿ ಸಮುದಾಯಕ್ಕೆ ಮತ್ತು ಭದ್ರಾವತಿಯ ಜನ ಸಾಮಾನ್ಯರಿಗೆ ಈ ಒಂದು ನಿರ್ಧಾರ ಮಹತ್ವದ ಕ್ಷಣವಾಗಿದೆ ಎಂಬುದಾಗಿ ಭಾವಿಸಿದ್ದೇನೆ ಎಂದಿದ್ದಾರೆ.
ಕೇಂದ್ರ ಸರ್ಕಾರದ ಸಂಬಂಧಿಸಿದ ಮಂತ್ರಿಗಳೊಂದಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಡೆಸಲಾದ ನಿರಂತರ ಪ್ರಯತ್ನದ ಫಲವಾಗಿ ಇಂತಹ ಒಂದು ಮಹತ್ತರವಾದ ನಿರ್ಣಯವನ್ನು ಸೈಲ್ ಕೈಗೊಳ್ಳಲು ಸಹಕಾರವಾಗಿದ್ದು, ಈ ಮಹತ್ವದ ಮೈಲಿಗಲ್ಲನ್ನು ಪಡೆಯಲು ದಣಿವರಿಯಿಲ್ಲದೆ ಕೆಲಸ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ವಿಐಎಸ್‌ಎಲ್‌ನ ಪುನರುಜ್ಜೀವನಕ್ಕೆ ಕೇಂದ್ರ ಸರ್ಕಾರ ನೀಡಿದಂತಹ ಭರವಸೆಗಳನ್ನು ಈಡೇರಿಸಿದ ಅವರ ಅಚಲ ಬದ್ಧತೆ ಗಾಗಿ ಕೇಂದ್ರ ಸರ್ಕಾರಕ್ಕೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ವಿಐಎಸ್‌ಎಲ್ ಶೀಘ್ರದಲ್ಲಿಯೇ ಉನ್ನತ ಯಶಸ್ಸು ಮತ್ತು ಸಮೃದ್ದಿಯ ಹಾದಿಯಲ್ಲಿ ಸಾಗಿ ತನ್ನ ಗತವೈಭವವನ್ನು ಮರಳಿ ಪಡೆಯುತ್ತದೆ ಎಂಬ ವಿಶ್ವಾಸವಿದೆ. ಇಂತಹ ಒಂದು ಮಹತ್ತರವಾದ ತೀರ್ಮಾನ ಬರುವಲ್ಲಿ ತಾಳ್ಮೆಯಿಂದ ಸಹಕರಿಸಿದ ವಿಐಎಸ್‌ಎಲ್‌ನ ಎಲ್ಲಾ ನೌಕರರ ಬಾಂಧ ವರಿಗೆ, ಕಾರ್ಮಿಕ ಸಂಘಟನೆ ಮುಖಂಡ ರಿಗೆ, ಜನಪ್ರತಿನಿಧಿಗಳಿಗೆ ಬಿವೈಆರ್ ಅವರು ಧನ್ಯವಾದ ಅರ್ಪಿಸಿದ್ದಾರೆ.