ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸಬೇಕೆಂಬ ಅಭಿಪ್ರಾಯ ನನ್ನದಾಗಿದೆ…
ಶಿವಮೊಗ್ಗ : ಕುರುಬ ಸಮಾಜವನ್ನು ಎಸ್ಟಿ ವರ್ಗಕ್ಕೆ ಸೇರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಸ್ಪಷ್ಟ ಅಭಿಪ್ರಾಯ ತಿಳಿಸಬೇಕು ಎಂದು ಈಶ್ವರಪ್ಪ ಸುದ್ದಿಗೋಷ್ಟಿಯಲ್ಲಿ ಆಗ್ರಹಿಸಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸ ಬೇಕೆಂದು ಹೇಳುತ್ತಿzರೆ ವಿನಃ ಯಾರದೋ ಹೆದರಿಕೆಗೆ ಅದನ್ನು ಅವರು ಸ್ಪಷ್ಟಪಡಿಸುತ್ತಿಲ್ಲ. ವಾಲ್ಮೀಕಿ ಜಯಂತಿಯ ಸಂದರ್ಭದಲ್ಲಿ ಉಗ್ರಪ್ಪ ಮತ್ತು ಮುಖ್ಯಮಂತ್ರಿಗಳ ನಡುವೆ ಒಂದು ರೀತಿಯ ವಾಕ್ ಸಮರವೇ ಆಗಿದೆ. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಗಳು ಉಗ್ರಪ್ಪ ಅವರಿಗೆ ಸ್ಪಷ್ಟವಾಗಿ ಹೇಳುವುದನ್ನು ಬಿಟ್ಟು ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸುವ ವಿಚಾರದ ಬಗ್ಗೆ ನಾನು ಹೋರಾಟ ಮಾಡಿದ್ದಲ್ಲ, ಅದು ಈಶ್ವರಪ್ಪ ಅವರು ಮಾಡಿದ್ದರು ಎಂದಿzರೆ ಎಂದರು.
ಮುಖ್ಯಮಂತ್ರಿಯ ಈ ಹೇಳಿಕೆಗೆ ನಾನು ಬದ್ಧನಿzನೆ. ನಾನು ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸುವ ಬಗ್ಗೆ ಹೋರಾಟ ವನ್ನು ಆರಂಭಿಸಿz. ಕಾಗಿನೆಲೆ ಶ್ರೀಗಳಾದ ನಿರಂಜನಾನಂದಪುರಿ ನೇತೃತ್ವದಲ್ಲಿ ದೆಹಲಿಗೂ ನಿಯೋಗವನ್ನು ಕರೆದುಕೊಂಡು ಹೋಗಿzವು. ಆ ಸಂದರ್ಭದಲ್ಲಿ ಒಂದು ಸಮಿತಿಯನ್ನೂ ರಚಿಸಲಾ ಗಿತ್ತು. ಆ ಸಮಿತಿಗೆ ಜಿಪಂ ಮಾಜಿ ಸದಸ್ಯ ಕಾಂತೇಶ್ ಖಜಂಚಿಯಾಗಿ ಕಾರ್ಯನಿರ್ವಹಿಸಿದ್ದರು. ಈ ಸಮಿತಿಯಲ್ಲಿ ಹೆಚ್.ಎಂ. ರೇವಣ್ಣ, ಭಂಡ್ಯಪ್ಪ ಕಾಶಂಪುರ್ ಸೇರಿದಂತೆ ಕುರುಬ ಸಮಾಜದ ಸಂಘಟನೆಗಳು ಕಾಗಿನೆಲೆಯಿಂದ ಬೆಂಗಳೂರುವರೆಗೆ ೩೫೦ ಕಿ.ಮೀ. ಪಾದಯಾತ್ರೆ ಮಾಡಿzವು. ಈ ಸಮಾವೇಶಕ್ಕೆ ಸಿದ್ಧರಾಮಯ್ಯ ಬಂದಿರಲಿಲ್ಲ. ಆಗಿನ ಮುಖ್ಯಮಂತ್ರಿ ಬೊಮ್ಮಾಯಿ ಅವರು ಸಂಪುಟ ಸಭೆಯಲ್ಲಿ ಇದನ್ನು ಅಂಗೀಕರಿಸಿ, ಆದೇಶ ಹೊರಡಿಸಿದ್ದರು. ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸಬೇಕೆಂಬುದು ಈಗಲೂ ನನ್ನ ಅಭಿಪ್ರಾಯವಾಗಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಪ್ರಮುಖರಾದ ಈ .ವಿಶ್ವಾಸ್, ಮಹಾಲಿಂಗಯ್ಯ, ಉಮೇಶ್ ಆರಾಧ್ಯಾ ಇದ್ದರು.
