ಜಿಲ್ಲಾ ಸುದ್ದಿತಾಜಾ ಸುದ್ದಿ

ಶಾಸಕರೇ ಪ್ರಚೋದನೆ ನೀಡುವ ಕೆಲಸ ಮಾಡ್ತಿzರೆ…

Share Below Link

ಶಿವಮೊಗ್ಗ:ಕಾಂಗ್ರೆಸ್ ಸರ್ಕಾರ ಒಂಟಿ ಪೋಷಕರಾಗಿರುವ ಸರ್ಕಾರಿ ಪುರುಷ ನೌಕರರಿಗೂ ಶಿಶುಪಾಲನಾ ರಜೆ ಮಂಜೂರು ಮಾಡಿರುವುದು ಸ್ವಾಗತಾರ್ಹ ಎಂದು ಮಾಜಿ ಸಂಸದ ಜೆ.ಡಿಎಸ್ ಮುಖಂಡ ಆಯನೂರು ಮಂಜುನಾಥ್ ಹೇಳಿದರು.
ಅವರು ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಶಿಶುಪಾಲನೆಯ ಉದ್ದೇಶದಿಂದ ತಮ್ಮ ಇಡೀ ಸೇವಾ ಅವಧಿಯಲ್ಲಿ ಗರಿಷ್ಠ ೬ ತಿಂಗಳವರೆಗೆ ಅಂದರೆ ೧೮೦ ದಿನಗಳ ಕಾಲ ಶಿಶುಪಾಲನಾ ರಜೆಯನ್ನು ಮಂಜೂರು ಮಾಡ ಲಾಗಿತ್ತು. ಆದರೆ ಈ ಆದೇಶ ಪುರಷರಿಗೆ ಅನ್ವಯಿಸುತ್ತಿರಲಿಲ್ಲ. ಅಕಸ್ಮಾತ್ ತಾಯಿ ಮರಣ ಹೊಂದಿ ದಲ್ಲಿ ಅದರ ಜವಾಬ್ದಾರಿಯನ್ನು ತಂದೆಯೇ ಹೊರಬೇಕಿತ್ತು. ಶಿಶು ಪಾಲನಾ ರಜೆ ಎನ್ನುವುದು ಲಿಂಗ ಭೇದ ಇಲ್ಲದೆ ಇರಬೇಕು. ಇಂತಹ ಸಂದರ್ಭದಲ್ಲಿ ಪುರುಷರಿಗೂ ಸಹ ರಜೆ ಸೌಲಭ್ಯ ವಿಸ್ತರಿಸಿರುವ ಕಾಂಗ್ರೆ ಸ್ ಸರ್ಕಾರದ ಕ್ರಮ ಸರಿಯಾಗಿದೆ ಎಂದರು.
ಹಾಗೆಯೇ ಸರ್ಕಾರಿ ನೌಕರರ ಕೆಲವು ಬೇಡಿಕೆಗಳನ್ನು ಈಡೇರಿ ಸುವ ಭರವಸೆಯನ್ನು ಕಾಂಗ್ರೆಸ್ ಸರ್ಕಾರ ಹೊಂದಿದೆ. ಆದರೆ ಪಿಂಚ ಣಿಗೆ ಸಂಬಂಧಿಸಿದಂತೆ ಎನ್‌ಪಿಎಸ್ ಮತ್ತು ಒಪಿಎಸ್ ವಿಷಯಕ್ಕೆ ಸಂಬಂ ಧಿಸಿದಂತೆ ಯಾವ ಭರವಸೆಯೂ ಈಡೇರಿಲ್ಲ. ಸರ್ಕಾರವೇನೋ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದು ವರಿಸುವ ಬಗ್ಗೆ ಭರವಸೆ ನೀಡಿದೆ. ಇದು ಕೇವಲ ಭರವಸೆ ಆಗಬಾ ರದು. ಹೊಸ ಸರ್ಕಾರ ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿ ಸಬೇಕು ಎಂದರು.
ವಿದ್ಯುತ್ ದರ ಏರಿಕೆ ಮಾಡಿ ರುವುದರಿಂದ ಸಣ್ಣ ಕೈಗಾರಿಕೆಗಳಿಗೆ ತೊಂದರೆಯಾಗಲಿದೆ. ಅಲ್ಲದೆ ಉತ್ತರಕರ್ನಟಕದ ಹಲವು ಭಾಗಗ ಳಲ್ಲಿ ಕೆಲವು ಸಣ್ಣ ಕೈಗಾರಿಕಾ ಉದ್ಯ ಮಿಗಳು ಈ ರಾಜ್ಯವನ್ನೇ ಬಿಟ್ಟು ಹೋಗುವುದಾಗಿ ಹೇಳಿzರೆ. ಇದರಿಂದ ಕನ್ನಡಿಗರು ಉದ್ಯೋಗ ಕಳೆದುಕೊಳ್ಳುವ ಆತಂಕವಿದೆ. ಆದ್ದರಿಂದ ರಾಜ್ಯ ಸರ್ಕಾರ ಈಗ ಏರಿಸಿರುವ ವಿದ್ಯುತ್ ದರವನ್ನು ಮರುಪರಿಶೀಲನೆಗೆ ಒಳಪಡಿಸ ಬೇಕು.
ಕೈಗಾರಿಕಾಸ್ನೇಹಿ ದರ ಜರಿ ಗೊಳಿಸಬೇಕು ಎಂದು ಒತ್ತಾಯಿಸಿ ದರು.