ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಿಎಸ್‌ವೈ ನೆರವಿನಿಂದಲೇ ಅಕ್ರಮ ಮರಳು ಗಣಿಗಾರಿಕೆ: ಕೆ.ಎಸ್. ಈಶ್ವರಪ್ಪ

Share Below Link

ತೀರ್ಥಹಳ್ಳಿ: ಈಗಲೂ ನನ್ನ ಮೈಯಲ್ಲಿ ಬಿಜೆಪಿ ರಕ್ತವೇ ಹರಿಯುತ್ತಿದ್ದು, ಸಂಸದ ಬಿ.ವೈ. ರಾಘವೇಂದ್ರರನ್ನು ಸೋಲಿಸಿ ಅಪ್ಪ- ಮಕ್ಕಳ ಕಪಿಮುಷ್ಠಿಯಿಂದ ಪಕ್ಷವನ್ನು ಮುಕ್ತಗೊಳಿಸಲು ಅನಿವಾರ್ಯ ವಾಗಿ ನಾನು ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದರು.


ದೇವಳಗಳ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೀರ್ಥಹಳ್ಳಿ ತಾಲೂಕಿನಾ ದ್ಯಂತ ಸಂಸದ ಬಿ.ವೈ. ರಾಘವೇಂದ್ರ ನೆರವಿನಿಂದಲೇ ಅಕ್ರಮ ಮರಳು ಗಣಿಗಾರಿಕೆ ಮುಂತಾದ ಅಕ್ರಮ ಚಟುವಟಿಕೆಗಳು ನಿರಾತಂಕವಾಗಿ ನಡೆಯುತ್ತಿದೆ. ಇದಕ್ಕೆ ಮಾಜಿ ಗೃಹ ಸಚಿವ ಹಾಗೂ ಸ್ಥಳೀಯ ಶಾಸಕ ಆರಗ eನೇಂದ್ರ ಬೆಂಬಲ ಇದೆಯೇ ಎಂಬ ಅನುಮಾನವೂ ಇದೆ ಎಂದು ಗಂಭೀರ ಆರೋಪ ಮಾಡಿದರು.
ರಾಜ್ಯದಲ್ಲಿ ಬಿಜೆಪಿ ಪಕ್ಷ ಅಪ್ಪ-ಮಕ್ಕಳ ಕೈಯಲ್ಲಿದೆ. ಈ ಬಗ್ಗೆ ರಾಜ್ಯವ್ಯಾಪಿ ವಿರೋಧ ವ್ಯಕ್ತವಾಗು ತ್ತಿದೆ. ಕುಟುಂಬ ರಾಜಕಾರಣ ಮಾಡುವ ಕಾಂಗ್ರೆಸ್ ಸಂಸ್ಕೃತಿಯನ್ನು ಬಿಜೆಪಿ ನಾಯಕರು ಟೀಕಿಸುತ್ತಾ ಬಂದಿದ್ದೇವೆ. ಆದರೆ, ಈಗ ಆ ಸಂಸ್ಕೃತಿ ರಾಜ್ಯ ಬಿಜೆಪಿಯಲ್ಲಿ ಮುಂದುವರೆಯುತ್ತಿದೆ. ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಮಾಡುತ್ತಿರುವ ಅಪ್ಪ-ಮಕ್ಕಳ ರಾಜಕಾರಣವನ್ನು ಕೊನೆಗೊಳಿಸು ವುದು. ಚುನಾವಣೆಯಲ್ಲಿ ಗೆದ್ದು ಪ್ರಧಾನಿಯಾಗಲು ಮೋದಿ ಯವರಿಗೆ ಕೈ ಎತ್ತುವುದೇ ನನ್ನ ಉದ್ದೇಶ ಎಂದರು.
ಪಕ್ಷದ ಶಿಸ್ತಿನ ಸಿಪಾಯಿಯಾ ಗಿರುವ ನಾನು ಈವರೆಗೆ ಪಕ್ಷದ ಆದೇಶವನ್ನು ಎಂದೂ ಮೀರಿಲ್ಲ. ಅಪ್ಪ-ಮಕ್ಕಳು ಸೇರಿ ಕೆಜೆಪಿ ಕಟ್ಟಿದಾಗ ಮಂತ್ರಿ ಸ್ಥಾನ ಬಿಟ್ಟು ಪಕ್ಷ ಸಂಘಟನೆ ಮಾಡಿ ೪೬ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಂಡು ಬಂದಿz. ಆದರೆ, ಈಗ ಯಡಿಯೂರಪ್ಪ ಕುಟುಂಬದಿಂದ ಮಾತ್ರ ರಾಜ್ಯದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂಬಂತೆ ದೆಹಲಿ ನಾಯಕರನ್ನು ಮೋಡಿ ಮಾಡಿzರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೊಂದಾಣಿಕೆ ರಾಜಕಾರಣ ಮಾಡುವುದಲ್ಲಿ ಅಪ್ಪ-ಮಕ್ಕಳು ನಿಸ್ಸೀಮರು. ತಮ್ಮ ಸ್ವಾರ್ಥಕ್ಕಾಗಿ ಸಿ.ಟಿ.ರವಿ, ಪ್ರತಾಪ್ ಸಿಂಹ, ಅನಂತಕುಮಾರ್ ಹೆಗಡೆ, ಬಸವನ ಗೌಡ ಪಾಟೀಲ್ ಯತ್ನಾಳ್ ಮುಂತಾದ ಹಿಂದುತ್ವವಾದಿಗಳನ್ನು ತುಳಿದಿzರೆ. ಈ ಬಗ್ಗೆಯೂ ರಾಜ್ಯದಾದ್ಯಂತ ತೀವ್ರ ಅಸಮಾಧಾನ ವ್ಯಕ್ತವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಹಿಂದುಳಿದವರ ಮತ್ತು ದಲಿತರನ್ನು ಒಗ್ಗೂಡಿಸುವ ಸಲುವಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆಗೆ ಮಾಡಿದಾಗ ಯಡಿಯೂರಪ್ಪ ಕೇಂದ್ರ ನಾಯಕರಿಗೆ ಹೇಳಿ ಅದನ್ನು ಕೈ ಬಿಡುವಂತೆ ಮಾಡಿದರು ಎಂದು ಆರೋಪಿಸಿದ ಈಶ್ವರಪ್ಪ, ಪ್ರಪಂಚದ ಯಾವುದೇ ಶಕ್ತಿ ಅಡ್ಡಿ ಮಾಡಿದರೂ ಮೋದಿಯವರು ಪ್ರಧಾನಿಯಾಗುವುದನ್ನು ತಪ್ಪಿಸಲು ಸಾಧ್ಯವಿಲ್ಲ. ರಾಜ್ಯದಲ್ಲಿ ೨೭ ಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕು. ಶಿವಮೊಗ್ಗದಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿ ಬಿವೈಆರ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ತಾವು ಗೆದ್ದು, ಮೋದಿ ಪ್ರಧಾನಿಯಾಗುವುದಕ್ಕೆ ಕೈ ಎತ್ತಬೇಕು ಎಂದರು.
ಹಿಂದಿನ ಬಾರಿ ಯಡಿಯೂರಪ್ಪನವರನ್ನು ಅಧಿಕಾರದಿಂದ ಇಳಿಸಿದ ಕಾರಣ ದಿಂದಲೇ ಇಷ್ಟಾದರು ಶಾಸಕ ಸ್ಥಾನ ಬಂದಿದೆ. ಶಿಕಾರಿಪುರದಲ್ಲಿ ೬೦ ಸಾವಿರ ಅಂತರದಲ್ಲಿ ಗೆಲ್ಲುತ್ತಿದ್ದವರು. ಕಳೆದ ಬಾರಿ ಕೊಟ್ಯಾಂತರ ವೆಚ್ಚ ಮಾಡಿಯೂ ಕೇವಲ ೧೦ ಸಾವಿರ ಅಂತರದಲ್ಲಿ ಗೆದ್ದಿರೋದು. ನನ್ನ ಮೇಲೆ ಯಾವುದೇ ರೀತಿಯ ಬಲ ಪ್ರಯೋಗ ಮಾಡುವ ಶಕ್ತಿ ಯಾರಿಗೂ ಇಲ್ಲ. ಅಂತಹ ಅವಕಾಶವೂ ಇಲ್ಲ ಎಂದರು.