ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಇಂದಿನ ರಾಜಕಾರಣದಲ್ಲಿ ಡಾ| ಸರ್ಜಿರಂತಹ ಪ್ರಾಮಾಣಿಕ ವ್ಯಕ್ತಿಯ ಅಗತ್ಯವಿದೆ: ವಿಜಯೇಂದ್ರ

Share Below Link

ಮಂಗಳೂರು : ಸರಳ, ಸಜ್ಜನಿಕೆಯ ಹೆಸರಾಂತ ವೈದ್ಯರಾದ ಡಾ.ಧನಂಜಯ ಸರ್ಜಿ ಅವರಂತಹ ಪ್ರಾಮಾಣಿಕ ವ್ಯಕ್ತಿಗಳ ಅವಶ್ಯಕತೆ ಈಗಿನ ರಾಜಕಾರಣಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.


ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಇಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಡಾ.ಸರ್ಜಿ ಅವರು ಹೊಟ್ಟೆಪಾಡಿಗಾಗಿ ರಾಜಕಾರಣಕ್ಕೆ ಬಂದವರಲ್ಲ, ಅವರ ಸೇವಾ ಮನೋಭಾವ ಮತ್ತು ಸಂಘಟನಾ ಶಕ್ತಿಯನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದೆ, ಪದವೀಧರರ ಎಲ್ಲ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡುಕೊಳ್ಳುವ ಶಕ್ತಿ ಅವರಿಗಿದೆ, ಅಲ್ಲದೇ ಪಕ್ಷ ಸಂಘಟನೆಯೂ ಬಲಗೊಳಿಸಲು ಅವರು ಶ್ರಮಿಸಲಿ ದ್ದಾರೆ, ಹಾಗೆಯೇ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಭೋಜೇಗೌಡ್ರು ಒಬ್ಬ ನುರಿತ ಹಿರಿಯ ರಾಜಕಾರಣಿ, ಅವರು ತಮ್ಮದೇ ಆದ ಹಿಡಿತವನ್ನು ಇಟ್ಟುಕೊಂಡಿದ್ದಾರೆ, ಶಿಕ್ಷಕರ ಸಮಸ್ಯೆಗಳಿಗೆ ಎಲ್ಲ ರೀತಿಯಲ್ಲೂ ಸ್ಪಂದಿಸಲಿದ್ದಾರೆ, ಪರಿಷತ್ ನಲ್ಲಿ ಗಟ್ಟಿ ಧ್ವನಿಯಾಗಲಿದ್ದಾರೆ, ಹಾಗಾಗಿ ಇಬ್ಬರೂ ಅಭ್ಯರ್ಥಿಗಳನ್ನು ಹೆಚ್ಚು ಮತಗಳ ಅತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.
ದಕ್ಷಿಣ ಕನ್ನಡ ಎಂದರೆ ಅದು ಪ್ರಾಮಾಣಿಕತೆಗೆ ಮತ್ತೊಂದು ಹೆಸರು. ಇತ್ತೀಚೆಗೆ ಲೋಕಸಭಾ ಚುನಾವಣೆಯನ್ನು ಜೆಡಿಎಸ್ ಮತ್ತು ಬಿಜೆಯ ಹೊಂದಾಣಿಕೆ ಯಲ್ಲಿ ಯಶಸ್ವಿಯಾಗಿ ಮುಗಿಸಿ ದ್ದೇವೆ, ಮೋದಿಜೀ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು, ಇದು ಜೆಡಿಎಸ್ ವರಿಷ್ಠರಾದ ದೇವೇಗೌಡರ ಆಶಯ ಕೂಡ. ಹಾಗೆಯೇ ವಿಕಾಸ್ ಪುತ್ತೂರ್ ಅವರು ಟಿಕೆಟ್ ಆಕಾಂಕ್ಷಿಯಾಗಿ ದ್ದರೂ ಪಕ್ಷ ಗುರುತಿಸಿ ಟಿಕೆಟ್ ನೀಡಿದ ಅಭ್ಯರ್ಥಿ ಗೆಲುವಿಗೆ ಹಗಲಿರುಳು ಶ್ರಮಿಸುತ್ತಿರು ವುದು ಅಭಿನಂದನೀಯ ಎಂದರು.
ರಾಜ್ಯದ ಆಡಳಿತ ಹಳಿ ತಪ್ಪಿದ್ದು, ಎಲ್ಲ ಕ್ಷೇತ್ರದಲ್ಲೂ ಅಭಿವೃದ್ಧಿ ಸಂಪೂರ್ಣ ಸ್ಥಗಿತಗೊಂಡಿದೆ, ಹಿಂದಿನ ಅವಧಿಯಲ್ಲಿ ಬಿಜೆಪಿ ಸರಕಾರ ಕೈಗೊಂಡ ಕಾಮಗಾರಿಗಳು ಹಾಗೂ ಯೋಜನೆಗಳನ್ನು ನಿಲ್ಲಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆಪಾದಿಸಿದರು.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಭೋಜೇಗೌಡರು ಮಾತನಾಡಿ, ಎಲ್ಲ ಕಾರ್ಯಕರ್ತರು ತಮ್ಮ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಮಾಜಿ ಸಚಿವ ವಿ. ಸುನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ಬಿಜೆಪಿ ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್ ದತ್ತಾತ್ರಿ ಇನ್ನಿತರರಿದ್ದರು.

This image has an empty alt attribute; its file name is Arya-coll.gif