ಜಿಲ್ಲಾ ಸುದ್ದಿತಾಜಾ ಸುದ್ದಿ

ಜೈಲ್ ವೃತ್ತದಲ್ಲಿ ಕನ್ನಡಮಯವಾದ ನೂತನ ಆಟೋ ಶೆಲ್ಟರ್‌ಉದ್ಘಾಟನೆ

Share Below Link

ಶಿವಮೊಗ್ಗ: ಮಹಾನಗರ ಪಾಲಿಕೆ ವತಿಯಿಂದ ನಗರದ ಹೊಸಮನೆ ಬಡಾವಣೆಯ ಡಾ. ಅಂಬೇಡ್ಕರ್ ವೃತ್ತ (ಜೈಲು ವೃತ್ತ)ದ ಬಳಿ ಗೆಳೆಯರ ಬಳಗ ಆಟೋ ನಿಲ್ದಾಣಕ್ಕೆ ಪಾಲಿಕೆ ಸದಸ್ಯರ ಅನುದಾನದಲ್ಲಿ ಆಟೋ ಶೆಲ್ಟರ್ ನಿರ್ಮಿಸಿದ್ದು ಇಂದು ಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್ ಉದ್ಘಾಟನೆ ನೆರವೇರಿಸಿದರು.
ಅಲ್ಲದೆ ಹೊಸಮನೆ ೧ನೇ ಮುಖ್ಯ ರಸ್ತೆಯ ಡಾ. ಪುನೀತ್ ರಾಜ್‌ಕುಮಾರ್ ರಸ್ತೆಯ ಬನಶಂಕರಿ ಆಟೋ ನಿಲ್ದಾಣಕ್ಕೆ ನೂತನ ಆಟೋ ಶೆಲ್ಟರ್ ನಿರ್ಮಿಸಿದ್ದು ಇದೇ ಸಂದರ್ಭದಲ್ಲಿ ಉದ್ಘಾಟಿಸಲಾಯಿತು.
ಈ ಆಟೋ ನಿಲ್ದಾಣ ಸಂಪೂರ್ಣ ಕನ್ನಡಮಯವಾಗಿದ್ದು, ಸಾಹಿತಿಗಳ, ಚಿತ್ರನಟರ, ಸಾಧಕರಾದ ನಾಲ್ವಡಿ ಕೃಷ್ಣರಾಜ ಒಡೆಯರ್, ವಿಶ್ವೇಶ್ವರಯ್ಯ, ಕುವೆಂಪು, ದ.ರಾ. ಬೇಂದ್ರೆ, ಶಿವರಾಮ ಕಾರಂತರು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ವಿ.ಕೃ. ಗೋಕಾಕ್, ಯು.ಆರ್. ಅನಂತ ಮೂರ್ತಿ, ಗಿರೀಶ್ ಕಾರ್ನಾಡ್, ಚಂದ್ರಶೇಖರ್ ಕಂಬಾರ, ಡಾ. ರಾಜ್‌ಕುಮಾರ್, ಶಂಕರನಾಗ್, ಡಾ. ವಿಷ್ಣುವರ್ಧನ್, ಅಂಬರೀಷ್, ಪುನೀತ್ ರಾಜ್‌ಕುಮಾರ್, ಸಾಲುಮರದ ತಿಮ್ಮಕ್ಕ, ಮಂಜಮ್ಮ ಜೋಗತಿ ಇವರ ಭಾವಚಿತ್ರಗಳನ್ನು ಅನಾವರಣ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಪಾಲಿಕೆ ಸದಸ್ಯ ಹೆಚ್.ಸಿ. ಯೋಗೇಶ್, ಆಟೋ ಚಾಲಕರಿಗೆ ಅನುಕೂಲವಾಗಲಿ ಎಂದು ಈ ನಿಲ್ದಾಣ ಸ್ಥಾಪಿಸಿದೆ ಎಂದರು. ವಿಧಾನ ಪರಿಷತ್ ಮಾಜಿ ಸದಸ್ಯ ಆರ್. ಪ್ರಸನ್ನಕುಮಾರ್ ಮಾತನಾಡಿದರು. ಕೆ.ರಂಗನಾಥ್, ಆಟೋ ಚಾಲಕರು, ಮಾಲೀಕರು ಉಪಸ್ಥಿತರಿದ್ದರು.