ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ರೈಲ್ವೆ ಟರ್ಮಿನಲ್ ಗುತ್ತಿಗೆದಾರನ ಬೇಜವಾಬ್ದಾರಿ ಬಾಲಕಿ ಸಾವು

Share Below Link

ಶಿವಮೊಗ್ಗ : ತರಕಾರಿ ಬೆಳೆದು ಬದುಕುತ್ತಿದ್ದ ಸುಂದರ ಸಂಸಾರದ ಮುದ್ದು ಮಗಳು ರೈಲ್ವೆ ಕಾಮ ಗಾರಿಯ ಅಸಮರ್ಪಕ ಕಾರ್ಯಕ್ಕೆ ಬಲಿಯಾಗಿರುವ ಘಟನೆ ನಿನ್ನೆ ಸಂಜೆ ಶಿವಮೊಗ್ಗ ತಾಲೂಕಿನ ಕೋಟೆಗಂಗೂರಿನಲ್ಲಿ ನಡೆದಿದೆ.
ರೈಲ್ವೆ ಟರ್ಮಿನಲ್ ನಿರ್ಮಾ ಣದ ಹಿನ್ನೆಲೆಯಲ್ಲಿ ರೈತರಿಂದ ಭೂಮಿ ಪಡೆದು ನಡೆಯುತ್ತಿರುವ ಕಾಮಗಾರಿಯಲ್ಲಿ ಕೋಟೆ ಗಂಗೂರು ಹಾಗೂ ಅಲ್ಲಿಂದ ಅನ್ಯ ಊರಿನ ಸಂಪರ್ಕ ಹಾಗೂ ತೋಟ ಹೊಲಕ್ಕೆ ಹೋಗುವ ಮಾರ್ಗ ಮದ್ಯದಲ್ಲಿ ಆಳವಾದ ಗುಂಡಿ ಯನ್ನು ತಗೆದಿದ್ದರು. ಅಲ್ಲಿ ಓಡಾಡುವ ಜನರ ರಕ್ಷಣೆಗೆ ಅಗತ್ಯ ವ್ಯವಸ್ಥೆ ಮಾಡಿರಲಿಲ್ಲ.


ನಿನ್ನೆ ಇದೇ ಕೋಟೆಂಗೂರಿನಲ್ಲಿ ಐದನೇ ತರಗತಿ ಓದುತ್ತಿದ್ದ ಚೈತ್ರಾ ಶಾಲೆಯಿಂದ ಮನೆಗೆ ಬಂದು ಮನೆಯ ಕೀ ತಗೆದುಕೊಂಡು ಬರಲು ತಮ್ಮ ತಂದೆ ತಾಯಿ ಕೆಲಸಮಾಡುತ್ತಿದ್ದ ಹೊಲದ ಕಡೆ ಹೋಗಿzಳೆ . ಬೀಗ ಪಡೆದು ವಾಪಾಸಾಗುತ್ತಿzಗ ಮೊನ್ನೆ ಸುರಿದ ಬಾರೀ ಮಳೆಗೆ ಗುಂಡಿಯ ಕಲ್ಲು ಕಳಚಿದ್ದು, ಮಣ್ಣು ಕುಸಿದಿತ್ತು. ಅಲ್ಲಿ ಬರುತ್ತಿದ್ದ ಚೈತ್ರಾ ಗುಂಡಿ ಪಾಲಾಗಿzಳೆ.
ಅಂತೆಯೇ ಸಂಜೆ ಚೈತ್ರಾ ತಂದೆ ಶ್ರೀನಿವಾಸ್ ಹಾಗೂ ಅವರ ಪತ್ನಿ ಮನೆಗೆ ಬಂದು ನೋಡಿದರೆ ಚೈತ್ರಾ ಬಂದಿಲ್ಲ ಎಂಬುದು ಗೊತ್ತಾಗಿ ಗಾಬರಿಗೊಂಡಿzರೆ. ಎಡೆ ಅವರು ಹಾಗೂ ಗ್ರಾಮಸ್ಥರು ಹುಡುಕಿzರೆ. ರಾತ್ರಿ ಗುಂಡಿ ಯಲ್ಲಿ ಸಾವು ಕಂಡಿರುವ ಚೈತ್ರಾ ಪತ್ತೆಯಾಗಿzಳೆ.
ಈ ಸಂಬಂಧ ಶ್ರೀನಿವಾಸ್ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿzರೆ.
ಕ್ರಮಕ್ಕೆ ಆಗ್ರಹ
ಐದು ವರುಷ ಬಾಲಕಿ ಚೈತ್ರಾ ಸಾವಿಗೆ ಇಡೀ ಕೋಟೆಗಂಗೂರು ಗ್ರಾಮಸ್ಥರು ತೀವ್ರ ಕಂಬನಿ ಮಿಡಿ ದಿದ್ದು, ಜನರ ರಕ್ಷಣೆ ನೋಡಿ ಕೊಳ್ಳದ ರೈಲ್ವೆ ಇಲಾಖೆಯ ಕ್ರಮ ವನ್ನು ತೀವ್ರವಾಗಿ ಖಂಡಿಸಿzರೆ.
ಕೋಟೆಗಂಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಬಿ.ವಿಜಯ್‌ಕುಮಾರ್ ಅವರು ರೈಲ್ವೆ ಇಲಾಖೆ ಜನರ ಹಾಗೂ ಮಕ್ಕಳ ರಕ್ಷಣೆ ಆದ್ಯತೆ ನೀಡದ ಬೇಜಬ್ದಾರಿ ಗುತ್ತಿಗೆದಾರರಿಗೆ ಕೆಲಸ ನೀಡಿದ್ದು, ಅವರ ವಿರುದ್ಧ ಪೊಲೀಸರು ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಹಾಗೂ ಮೃತ ಬಾಲಕಿ ಪೋಷಕರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿzರೆ.