ಜಿಲ್ಲಾ ಸುದ್ದಿತಾಜಾ ಸುದ್ದಿ

ಜ.12 : ಶಿವಮೊಗ್ಗದಲ್ಲಿ ಯುವನಿಧಿಗೆ ಚಾಲನೆ…

Share Below Link

ಶಿವಮೊಗ್ಗ : ಡಿಪ್ರೋ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ ೫ನೇ ಗ್ಯಾರಂಟಿ ಯುವನಿಽ ಯೋಜನೆಗೆ ಜ.೧೨ರಂದು ನಗರದ ಫ್ರೀಡಂಪಾರ್ಕ್‌ನ ಭವ್ಯ ವೇದಿಕೆ ಯಲ್ಲಿ ಚಾಲನೆ ನೀಡಲಾಗುವುದು. ಅದಕ್ಕಾಗಿ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವೈದ್ಯ ಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಆರ್. ಪಾಟೀಲ್ ಅವರು ಹೇಳಿದರು.
ಅವರು ಇಂದು ಜಿಡಳಿತ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮ ಗಳೂರು, ಹಾವೇರಿ ಮತ್ತು ಉಡುಪಿ ಜಿಗಳ ಜಿಧಿಕಾರಿ ಗಳು, ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಶಿವಮೊಗ್ಗ ಜಿಯ ವಿವಿಧ ಇಲಾ ಖೆಗಳ ಹಿರಿಯ ಅಧಿಕಾರಿಗಳಿಗಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಡಿಪ್ರೋ ಮತ್ತು ಪದವೀಧರ ನಿರುದ್ಯೋಗಿ ಯುವ ಕರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು, ಬರುವವರಿಗಾಗಿ ವೇದಿಕೆಯ ಸಿದ್ಧತೆ, ಆಸನ ವ್ಯವಸ್ಥೆ, ವಾಹನ ನಿಲುಗಡೆ, ಊಟೋಪ ಹಾರ ಹಾಗೂ ಮೂಲಭೂತ ವ್ಯವಸ್ಥೆ ಒದಗಿಸಲು ಅಗತ್ಯವಿರುವ ಎ ಕ್ರಮಗಳನ್ನು ಕೈಗೊಳ್ಳಲಾ ಗುವುದು ಎಂದರು.
ಶಿವಮೊಗ್ಗ ಹಾಗೂ ನೆರೆಯ ಜಿಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಯುವ ವಿದ್ಯಾರ್ಥಿ ಗಳನ್ನು ಸಮಾರಂಭ ಸ್ಥಳಕ್ಕೆ ಕರೆತರಲು ರಸ್ತೆ ಸಾರಿಗೆ ನಿಗಮ ಮತ್ತ ಖಾಸಗಿ ಒಡೆತನದ ಸುಮಾರು ೮೦೦- ೧೦೦ಬಸ್ಸುಗಳ ಅಗತ್ಯವಿರುವುದನ್ನು ಅಂದಾಜಿಸಲಾಗಿದೆ. ಕಾರ್ಯಕ್ರಮ ದಲ್ಲಿ ಅರ್ಹ ಫಲಾನುಭವಿಗಳಾ ಗುವವರು ಹಾಗೂ ಅಂತಿಮ ವರ್ಷದ ಸೆಮಿಸ್ಟರ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನು ದಾನಿತ ಮತ್ತು ಖಾಸಗಿ ಡಿಪ್ರೋ ಪದವಿ ಕಾಲೇಜುಗಳ ಪ್ರಶಿಕ್ಷಣಾರ್ಥಿ ಗಳನ್ನು ನಿರೀಕ್ಷಿಸಲಾಗುತ್ತಿದೆ. ನಂತರ ಜಿಯ ಗಡಿಭಾಗಕ್ಕೆ ಹೊಂದಿ ಕೊಂಡಂತಿರುವ ಹತ್ತಿರದ ತಾಲೂಕು ಗಳ ವಿದ್ಯಾರ್ಥಿಗಳನ್ನು ಕರೆತರಲು ವಾಹನ ಸೌಲಭ್ಯ ಒದಗಿಸಲಾಗು ವುದು. ವಿಶೇಷವಾಗಿ ಶಿವಮೊಗ್ಗ ಜಿಯಿಂದಲೇ ಬಹುಸಂಖ್ಯೆಯ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಹೊಂದ ಲಾಗಿದೆ ಎಂದರು.
ಈಗಾಗಲೇ ಯುವನಿಧಿ ಯೋಜನೆಯ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ರುವ ರಾಜ್ಯದ ಎ ಫಲಾನುಭವಿ ಗಳಿಗೂ ಕಾರ್ಯಕ್ರಮಕ್ಕೆ ಆಗಮಿಸು ವಂತೆ ಮೊಬೈಲ್ ಸಂದೇಶ ಕಳುಹಿ ಸಲು ಉದ್ದೇಶಿಸಲಾಗಿದೆ. ವಿವಿಧ ಸ್ಥಳಗಳಿಂದ ಕಾರ್ಯಕ್ರಮಕ್ಕೆ ಹೊರ ಡುವ ವಿದ್ಯಾರ್ಥಿಗಳನ್ನು ನೋಡಿ ಕೊಳ್ಳಲು ಪ್ರತಿ ಬಸ್ ಒಂದಕ್ಕೆ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು. ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳ ಯೋಗಕ್ಷೇಮ ಮತ್ತು ಜವಾಬ್ದಾರಿ ತೆಗೆದುಕೊಳ್ಳು ವಂತೆ ಅವರು ಸೂಚಿಸಿದರು.
ಪೂರ್ವಸಿದ್ಧತಾ ಸಭೆಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷ ರತಾ ಹಾಗೂ ಜಿ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ ಪಾಯ ಇಲಾಖೆ ಮತ್ತು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಶ್ರೀಮತಿ ಉಮಾ ಮಹದೇವನ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯು ಕ್ತಾಲಯದ ಆಯುಕ್ತೆ ಡಾ. ರಾಗಪ್ರಿಯಾ ಆರ್., ಜಿಧಿಕಾರಿ ಡಾ|| ಆರ್.ಸೆಲ್ವಮಣಿ, ಜಿ ಪೊಲೀಸ್ ಅಽಕ್ಷಕ ಮಿಥುನ್ ಕುಮಾರ್ ಜಿ.ಕೆ., ಜಿ ಪಂಚಾ ಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಸೇರಿದಂತೆ ಚಿಕ್ಕಮ ಗಳೂರು, ಉಡುಪಿ, ಚಿತ್ರದುರ್ಗ ಮತ್ತು ಹಾವೇರಿ ಜಿಗಳ ಜಿಧಿಕಾರಿಗಳು ಹಾಗೂ ಜಿ. ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.