ಜಿಲ್ಲಾ ಸುದ್ದಿತಾಜಾ ಸುದ್ದಿ

ಮಹಿಳೆಯರು ಆರ್ಥಿಕವಾಗಿ ಸದೃಢರಾಗಿ ಸ್ವಾವಲಂಭಿಗಳಾಗಲು ಕರಭೀಮಣ್ಣನವರ್ ಕರೆ

Share Below Link

ಶಿವಮೊಗ್ಗ: ಮಹಿಳೆಯರ ಸ್ವಾವಲಂಬಿ ಬದುಕಿಗೆ ಕೌಶಲ್ಯ ಅಭಿವೃದ್ಧಿ ಇಲಾಖೆಯು ಊರು ಗೋಲು ಆಗಿದ್ದು, ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಸದುಪಯೋಗ ಪಡಿಸಿಕೊಳ್ಳುವಲ್ಲಿ ಶಿವಮೊಗ್ಗ ಜಿಯ ಜನರು ಹೆಚ್ಚಿನ ಸಂಖ್ಯೆ ಯಲ್ಲಿ ಅನುಕೂಲ ಪಡೆದುಕೊಂ ಡಿದ್ದು, ರಾಜ್ಯದಲ್ಲಿ ಶಿವಮೊಗ್ಗ ಜಿಯು ಉತ್ತಮ ಸ್ಥಾನದಲ್ಲಿದೆ ಎಂದು ಶಿವಮೊಗ್ಗ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮೂಕಪ್ಪ ಕರಭೀಮಣ್ಣನವರ್ ಹೇಳಿದರು.
ನಗರದ ಸರ್ಕಾರಿ ನೌಕರರ ಭವನದಲ್ಲಿ ಜಿಡಳಿತ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ನಗರ ಜೀವನೋಪಾಯ ಯೋಜನೆ, ಜಿ ಕೌಶಲ್ಯ ಮಿಷನ್ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್‍ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮುಂದಿನ ವರ್ಷಗಳಲ್ಲಿಯೂ ಶಿವಮೊಗ್ಗ ಜನರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಯೋಜನೆ ಗಳ ಆರ್ಥಿಕ ಸೌಲಭ್ಯಗಳನ್ನು ಎಲ್ಲರೂ ಪಡೆದುಕೊಳ್ಳಬೇಕು. ಆರ್ಥಿಕ ಸೌಲಭ್ಯಗಳ ಪರಿಣಾಮ ಕಾರಿ ಬಳಕೆಯಿಂದ ಉತ್ತಮ ಜೀವನ ರೂಪಿಸಿಕೊಳ್ಳಲು ಮುಂದಾಗಬೇಕು. ಉದ್ಯಮ ಕ್ಷೇತ್ರ ದಲ್ಲಿಯೂ ಮಹಿಳೆಯರು ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಅಧಿಕಾರಿ ಎಚ್.ಎಂ. ಸುರೇಶ್ ಮಾತನಾಡಿ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಉದ್ಯಮ ಕ್ಷೇತ್ರದಲ್ಲಿ ಮಹಿಳೆ ಯರು ಯಶಸ್ಸು ಸಾಧಿಸುತ್ತಿದ್ದು, ಸೂಕ್ತ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡಿದರೆ ಇನ್ನಷ್ಟು ಜನರಿಗೆ ಸ್ಫೂರ್ತಿ ಸಿಗುತ್ತದೆ. ಮಹಿಳೆ ಯರು ಸಾಧಕರ ಜೀವನಗಾಥೆ ಅರಿತುಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು ಎಂದು ಹೇಳಿದರು.
ಮಹಿಳೆಯರಿಗೆ ಕಾನೂನು ಸಮಾನ ಅವಕಾಶ ನೀಡುತ್ತಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಹ ವಿವಿಧ ಯೋಜನೆಗಳ ಮೂಲಕ ಆರ್ಥಿಕ ಸಹಕಾರ ಒದಗಿಸುವ ಕೆಲಸ ಮಾಡುತ್ತಿವೆ. ಮಹಿಳೆಯರು ಸ್ವಸಹಾಯ ಸಂಘಗಳನ್ನು ರಚಿಸಿಕೊಂಡು ಹೊಸ ಆಲೋಚನೆಗಳ ಮೂಲಕ ಉದ್ಯ ಮಗಳನ್ನು ಆರಂಭಿಸಿ ಯಶಸ್ಸು ಸಾಧಿಸಬೇಕು ಎಂದು ತಿಳಿಸಿದರು.
ಮಹಿಳೆಯರು ಆರ್ಥಿಕವಾಗಿ ಸದೃಢರಾಗಿ ಸ್ವಾವಲಂಬಿಯಾದರೆ ಕುಟುಂಬವು ಆರ್ಥಿಕವಾಗಿ ಶಕ್ತವಾ ಗುತ್ತದೆ. ಇದರಿಂದ ಗ್ರಾಮ, ಪಟ್ಟಣ, ನಗರ, ಜಿ, ರಾಜ್ಯದ ಅಭಿವೃದ್ಧಿ ಆಗುತ್ತದೆ. ಮಹಿಳೆ ಯರು ಇಲಾಖೆ ವತಿಯಿಂದ ಸಿಗುವ ಎಲ್ಲ ಯೋಜನೆಗಳ ಸೌಲ ಭ್ಯಗಳನ್ನು ಸದುಪಯೋಗಪಡಿಸಿ ಕೊಳ್ಳಬೇಕು ಎಂದರು.
ಶಿವಮೊಗ್ಗ ಜಿಪಂ, ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಮಾತನಾಡಿದರು. ಹಾಸ್ಯ ಭಾಷಣಗಾರ್ತಿ ಇಂದುಮತಿ ಸಾಲಿಮಠ ಅವರು ಹಾಸ್ಯ ಭಾಷಣ ನಡೆಸಿಕೊಟ್ಟರು. ಲಕ್ಷ್ಮಣ್ ಮತ್ತು ತಂಡದವರು ಗಾಯನ ಕಾರ್‍ಯಕ್ರಮ ನಡೆಸಿಕೊಟ್ಟರು. ಡೊಳ್ಳು ಕುಣಿತ ಸೇರಿದಂತೆ ವೈವಿಧ್ಯಮಯ ಸಾಂಸ್ಕೃ ತಿಕ ಕಾರ್ಯಕ್ರಮ ನಡೆಯಿತು.
ಲೀಡ್ ಬ್ಯಾಂಕ್ ಮ್ಯಾನೇಜರ್ ಯತೀಶ್, ಕಲಾವಿದೆ ವಿಜಯ ಲಕ್ಷ್ಮೀ, ಮಹಿಳಾ ಉದ್ಯಮಿ ಸರೋಜ, ಸಹಾಯಕ ನಿರ್ದೇಶಕ ಟೀಕ್ಯಾನಾಯ್ಕ, ಇಲಾಖೆಯ ಸಮನ್ವಯ ಕಾಶಿ, ಡಾ. ದೇವೆಂದ್ರನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.