ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಕಾಂತರಾಜ್ ವರದಿ ಶೀಘ್ರವೇ ಅನುಷ್ಠಾನಕ್ಕೆ ತರಲಿ: ಸಿದ್ದರಾಮಣ್ಣ

Share Below Link

ಶಿವಮೊಗ್ಗ: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾದ ಕಾಂತರಾಜ್ ವರದಿಯನ್ನು ಶೀಘ್ರವೇ ಅನುಷ್ಠಾನಕ್ಕೆ ತರಬೇಕು ಎಂದು ಹಿಂದುಳಿದ ಜತಿಗಳ ಒಕ್ಕೂಟದ ಪ್ರಧಾನ ಸಂಚಾಲಕ ಆರ್.ಕೆ. ಸಿದ್ದರಾಮಣ್ಣ ಹೇಳಿದರು.
ಅವರು ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಹಿಂದುಳಿದ ಆಯೋಗಗಳ ಸಾಮಾಜಿ, ಶೈಕ್ಷಣಿಕ ಸಮೀಕ್ಷೆ ನಡೆದು ಅದರ ವರದಯೂ ಸಿದ್ಧವಾಗಿದೆ. ಈ ವರದಿಗಾಗಿಯೇ ೧೮೦ ಕೋಟಿ ರೂ.ಖರ್ಚು ಮಾಡಲಾಗಿದೆ. ಸರ್ಕಾರದ ಅಧಿಕೃತ ಸಂಸ್ಥೆಯಿಂದಲೇ ಈ ವರದಿಯನ್ನು ಸಿದ್ಧಪಡಿಸಲಾಗಿದೆ. ಕಾಂತರಾಜ್ ನೇತೃತ್ವದಲ್ಲಿ ವರದಿ ಮಂಡನೆಯಾಗಿ ಇಷ್ಟು ವರ್ಷ ಗಳಾದರೂ ಸರ್ಕಾರಕ್ಕೆ ಅದನ್ನು ಸಲ್ಲಿಸಲಾಗಿಲ್ಲ. ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ರಾಜಕೀಯ ಪಕ್ಷಗಳು ಕೂಡ ಇದನ್ನು ಸ್ವೀಕಾರ ಮಾಡಿಲ್ಲ ಎಂದು ದೂರಿದರು.
ಇದಕ್ಕೆ ಸಂಬಂಧಿಸಿದಂತೆ ರಾಜ್ಯಸರ್ಕಾರ ಮತ್ತುಹಿಂದುಳಿದ ಆಯೋಗ ಶೀಘ್ರವೇ ಇದನ್ನು ಬಹಿರಂಗಪಡಿಸಬೇಕು. ಆಯೋಗ ತಕ್ಷಣವೇ ಸರ್ಕಾರಕ್ಕೆ ನೀಡಬೇಕು. ಸರ್ಕಾರ ಕೂಡ ಪರಿಷ್ಕರಣೆಯ ನೆಪ ಹೇಳದೆ ಅದನ್ನು ಜರಿಗೆ ತರಬೇಕು. ಆದರೆ ನಮಗೆ ಈ ಬಗ್ಗೆ ವಿಶ್ವಾಸವೇ ಇಲ್ಲದಂತಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಜರಿಗೆ ತರಲು ಆಗ್ರಹಿಸಿ ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದರು.
ಇದನ್ನು ಜರಿಗೆ ತರಲು ರಾಜಕೀಯ ಪಕ್ಷಗಳಿಗೆ ಅದೇಕೆ ಭಯವೋ ಗೊತ್ತಿಲ್ಲ. ಇದು ಜನಗಣತಿಯಲ್ಲ. ಜನಗಣತಿ ಯನ್ನು ಕೇಂದ್ರ ಸರ್ಕಾರ ಮಾತ್ರ ಮಾಡಬೇಕು. ಇದು ಮುಂದು ವರೆದ ಜತಿಗಳನ್ನೂ ಒಳಗೊಂ ಡಂತೆ ಎ ಜತಿಗಳ ಸಾಮಾಜಿಕ, ಶೈಕ್ಷಣಿಕ, ಸಮೀಕ್ಷೆಯಾಗಿದೆ. ಸರ್ವೆ ಮಾಡಿ ಸಮೀಕ್ಷೆ ಮಾಡಲಾಗಿದೆ. ಪ್ರತಿ ೧೦ ವರ್ಷಕ್ಕೊಮ್ಮೆ ಈ ರೀತಿಯ ಸಮೀಕ್ಷೆ ಅಗತ್ಯ ಎಂದು ಹೇಳಲಾಗಿದೆ. ಆದರೂ ಕೂಡ ಸರ್ಕಾರಗಳು ಅದೇಕೆ ಮೀನಾ ಮೇಷ ಎಣಿಸುತ್ತವೆಯೋ ಗೊತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ತನ್ನ ಪ್ರಣಾಣಿಕೆಯಲ್ಲಿ ಹೇಳಿದಂತೆ ಕಾಂತರಾಜ್ ವರದಿಯನ್ನು ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿದರು.
ಒಕ್ಕೂಟದ ಪ್ರೊ. ರಾಚಪ್ಪ ಮಾತನಾಡಿ, ಕಾಂತರಾಜ್ ವರದಿಯ ಅನುಷ್ಠಾನಕ್ಕೆ ಆಗ್ರಹಿಸಿ ಮೂರು ಹಂತದ ಕಾರ್ಯ ಕ್ರಮಗಳನ್ನು ನಾವು ಹಿಂದುಳಿದ ಜನಜಗೃತಿ ವೇದಿಕೆ ಹಾಗೂ ಹಿಂದುಳಿದ ಜತಿಗಳ ಒಕ್ಕೂಟದ ವತಿಯಿಂದ ಬರುವ ಸೋಮವಾರ ಮುಖ್ಯಮಂತ್ರಿ ಹಾಗೂ ಹಿಂದು ಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯ ವರನ್ನು ಭೇಟಿ ಮಾಡುತ್ತೇವೆ. ನಂತರ ೨ನೇ ಹಂತವಾಗಿ ಧರಣಿ ಸತ್ಯಾಗ್ರಹ ಹಾಗೂ ಪಂಜಿನ ಮೆರವಣಿಗೆ ಮಾಡುತ್ತೇವೆ. ಮೂರನೇ ಹಂತದಲ್ಲಿ ಹಿಂದುಳಿದ ವರ್ಗಗಳ ಎ ಸ್ವಾಮೀಜಿಗಳನ್ನು ಒಳಗೊಂಡಂತೆ ಮಹಾ ಪಂಚಾ ಯತ್ ಹೆಸರಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುತ್ತೇವೆ. ಸರ್ಕಾರಕ್ಕೆ ಇದು ಕೊನೆಯ ಎಚ್ಚರಿಕೆಯಾಗಿದೆ ಎಂದರು.
ಕೇಂದ್ರ ಸರ್ಕಾರ ಕೂಡ ಹಿಂದುಳಿದ ವರ್ಗಗಳ ರೋಹಿಣಿ ಆಯೋಗವನ್ನು ಜರಿಗೆ ತರದ ನಿರ್ಲಕ್ಷ್ಯ ವಹಿಸುತ್ತಿದೆ. ಕಾಂತರಾಜ್ ವರದಿ ವೈeನಿಕವಾಗಿದೆ. ಆದರೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಿಂದುಳಿದ ವರ್ಗಗಳ ಬಗ್ಗೆ ಅದೇಕೆ ನಿರ್ಲಕ್ಷ್ಯ ವಹಿಸುತ್ತಿವೆಯೋ ಗೊತ್ತಿಲ್ಲ ಎಂದರು.
ವಿ. ರಾಜುಮಾತನಾಡಿ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಾದ ವೈeನಿಕವಾಗಿ ರುವ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಕಾರಣವಾಗುವ ಈ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಸ್ವೀಕರಿಸಿ ಅನುಷ್ಠಾನಕ್ಕೆ ತರಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎನ್. ಉಮಾಪತಿ, ಡಿ.ಆರ್.ಉಮೇಶ್ ಯಾದವ್, ರಾಜೇಶ್, ಮನೋಹರ್, ಜನಮೇಜಿ ರಾವ್, ನಟರಾಜ್, ಲೋಕೇಶ್, ಚನ್ನವೀರಪ್ಪ ಗಾಮನಕಟ್ಟೆ ಮುಂತಾದವರಿದ್ದರು.