ನಾಡಿನೆಲ್ಲೆಡೆ ಶಾಂತಿ-ಸೌಹಾರ್ದತೆ ನೆಲೆಸಲಿ: ಮುಕ್ತಿಯಾರ್
ಶಿವಮೊಗ್ಗ : ಎಲ್ಲರಲ್ಲೂ ಮನುಷ್ಯತ್ವ , ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ ಎಂದು ಮುಸ್ಲಿಂ ಸಮಾಜದ ಮುಖಂಡರೂ, ನಗರಸಭೆ ಮಾಜಿ ಸದಸ್ಯರೂ ಹಾಗೂ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರೂ ಆದ ಮುಕ್ತಿಯಾರ್ ಅಹಮದ್ ಅವರು ನಾಡಿನ ಸಮಸ್ತ ಜನತೆಗೆ ಬಕ್ರೀದ್ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಅವರು ಇಂದು ಬಕ್ರೀದ್ ಹಬ್ಬದ ನಿಮಿತ್ತ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ನಂತರ ಹೊಸನಾವಿಕದೊಂದಿಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಎ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಶುಭಾಶಯಗಳನ್ನು ತಿಳಿಸಿದ ಅವರು, ಎಲ್ಲರೂ ಇಂದು ಭಕ್ತಿಯಿಂದ ಪ್ರಾರ್ಥನೆ ಯಲ್ಲಿ ಭಾಗವಹಿಸಿ ಮನುಕುಲಕ್ಕೆ ಒಳಿತಾಗಲಿ ಎಂದು ಪ್ರಾರ್ಥಿಸಿದ್ದೇವೆ. ಎಲ್ಲರೂ ಸಾಮೂಹಿಕ ಪ್ರಾರ್ಥನೆ ಮಾಡಿದ್ದು, ಸಮಾಜದಲ್ಲಿ ನಾವೆಲ್ಲರೂ ಅಣ್ಣ ತಮ್ಮಂದಿರ ಹಾಗೆ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳೋಣ ಎಂದರು.
ಪ್ರತಿಯೊಬ್ಬರೂ ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಭಾರತ ಬಹುತ್ವದ ದೇಶ. ಎ ಧರ್ಮ, ಜತಿ, ಭಾಷೆ, ಪ್ರಾಂತ್ರ್ಯದವರು ಒಟ್ಟಾಗಿ ಬಾಳಬೇಕು. ಮನುಷ್ಯತ್ವ ಬಹಳ ದೊಡ್ಡದು. ಎಲ್ಲರೂ ಪರಸ್ಪರ ಪ್ರೀತಿಸಿ ಗೌರವಿಸಬೇಕು. ಹಾಗೆ ಬೆಳೆದಾಗ ಮಾತ್ರ ರಾಷ್ಟ್ರ ಸಮಾಜ ಹಾಗೂ ಎ ಧರ್ಮಗಳೂ ಏಳಿಗೆಯಾಗುತ್ತದೆ ಎಂದು ಹೇಳಿದರು.
ಅದೇ ರೀತಿ ಕರುನಾಡಿನ ಎಲ್ಲ ಸಮಾಜದ ಜನತೆ ಪರಸ್ಪರ ಪ್ರೀತಿ, ಸೌಹಾರ್ದತೆಯಿಂದ ಜೀವನ ನಡೆಸಲು ಬೇಕಾದಂತಹ ಕೃಪಾಶೀರ್ವಾದವನ್ನು ದೇವರು ದಯಪಾಲಿಸಲಿ ಎಂದು ಹಾರೈಸಿದ ಮುಕ್ತಿಯಾರ್, ಬಕ್ರೀದ್ ಹಬ್ಬದ ಶುಭ ಸಂದರ್ಭದಲ್ಲಿ ನಾಡಿನಾದ್ಯಂತ ಶಾಂತಿ – ಸೌಹಾರ್ದತೆ ನೆಲೆಸಲಿ, ಈ ಬಾರಿ ಉತ್ತಮ ಮಳೆಯಾಗುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ ದೊರೆತು, ಅನ್ನದಾತರ ಮೊಗದಲ್ಲಿ ಸಂತಸ ಮನೆಮಾಡಲಿ ಎಂದಿದ್ದಾರೆ.