ಜಿಲ್ಲಾ ಸುದ್ದಿತಾಜಾ ಸುದ್ದಿ

ಸಾಹಿತ್ಯವು ಸಹೃದಯತೆ ರೂಪಿಸುತ್ತದೆ : ಸುರೇಶ್

Share Below Link

ಶಿವಮೊಗ್ಗ : ನಗರದ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಕನ್ನಡ ವಿಭಾಗದ ಸಾಹಿತ್ಯ ಸಹೃದಯ ವೇದಿಕೆಯಿಂದ ‘ಪುಸ್ತಕ ಓದು’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಅಕ್ಷರ ಪಪೂ ಕಾಲೇಜಿನ ಕನ್ನಡ ಉಪನ್ಯಾಸಕ ಸುರೇಶ್ ಅವರು ಮಾತನಾಡಿ, ಸಾಹಿತ್ಯ ಆಸಕ್ತಿಯು ನಮ್ಮನ್ನು ಸಹೃದಯರನ್ನಾಗಿಸುತ್ತದೆ, ಒಳ್ಳೆಯ ಕಥೆ, ಕಾದಂಬರಿ, ಕವನಗಳ ಓದಿನಲ್ಲಿ ತಲ್ಲಿನರಾದಾಗ ನಮ್ಮ ಹೃದಯವು ಹಲವು ವಿಚಾರಗಳನ್ನು ಸ್ವೀಕರಿಸಿ ಹೃದಯವಂತಿಕೆಯನ್ನು ಬೆಳೆಸಿಕೊಳ್ಳುವಂತೆ ಮಾಡುತ್ತದೆ. ಜನಪದ ಸಾಹಿತ್ಯ, ಹಳೆಗನ್ನಡ ಹಾಗೂ ಈಗಿನ ನವ್ಯ ಸಾಹಿತ್ಯ ಎಲ್ಲವೂ ಉಪಯುಕ್ತ. ಎ ಶಾಸ್ತ್ರ, ವಿeನ, ತತ್ವಗಳೂ ಸಾಹಿತ್ಯದಲ್ಲಿ ಅಡಕವಾಗಿದೆ ಎಂದು ಹೇಳಿದರು.
ಜೆ.ಪಿ.ಎನ್ ಪಪೂ ಕಾಲೇಜಿನ ಉಪನ್ಯಾಸಕ ಅಭಿಷೇಕ್ ಮಾತನಾಡಿ, ಸಾಹಿತ್ಯದ ಆಸಕ್ತಿ ಇಲ್ಲವಾದಲ್ಲಿ ನಾವು ಯಂತ್ರಗಳ ದಾಸರಾಗುವ ಅಪಾಯವಿದೆ ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಡಾ.ಸಂಧ್ಯಾ ಕಾವೇರಿ ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಸಂತೋಷ್ ಕುಮಾರ್ ಎಸ್.ಜಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ವೈಷ್ಣವಿ ಸಾರಾ ಅಬೂಬಕ್ಕರ್ ರವರ ‘ಚಂದ್ರಗಿರಿಯ ತೀರದಲ್ಲಿ’ ಕಾದಂಬರಿಯ ಕುರಿತು ವಿಷಯ ಮಂಡಿಸಿದರು. ರಾಧಿಕಾ ಅವರು ಯು.ಆರ್.ಅನಂತಮೂರ್ತಿಯವರ ‘ಅವಸ್ಥೆ’ ಕಾದಂಬರಿಯನ್ನು ತಾನು ಓದಿದ ಅನುಭವದೊಂದಿಗೆ ಹಂಚಿಕೊಂಡರು. ಸಿಂಚನ ಕುವೆಂಪುರವರ ‘ಹೋಗುವೆನು ನಾ’ ಕವನವನ್ನು ವಾಚಿಸಿದರು. ಪ್ರeದೀಪ್ತಿ ‘ಕರುನಾಳು ಬಾ ಬೆಳಕೆ’ ಕವನ ಗಾಯನ ಮಾಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಗಳಾದ ಹರ್ಷವರ್ಧನ್, ಸಿಹಾನ್, ಸಂಧ್ಯಾ, ನಿಸರ್ಗ ಹಾಗೂ ದೀಪ್ತಿ ಜನಪದ ಗೀತೆಗಳನ್ನು ಹಾಡಿದರು. ಪ್ರೀತಿ ಕಾರ್ಯಕ್ರಮ ನಿರೂಪಿಸಿ, ಭಾರ್ಗವಿ ಪ್ರಾರ್ಧಿ ಸಿದರು. ಅನುಷಾ ಸ್ವಾಗತಿಸಿ, ಚೈತ್ರ ಸರ್ವರನ್ನೂ ವಂದಿಸಿದರು.