ಜಿಲ್ಲಾ ಸುದ್ದಿತಾಜಾ ಸುದ್ದಿ

ಲೋಕಾಯುಕ್ತ ಪೊಲೀಸರಿಂದ ಸ್ಮಾರ್ಟ್‌ಸಿಟಿ ಕಾಮಗಾರಿ ಪರಿಶೀಲನೆ…

Share Below Link

ಶಿವಮೊಗ್ಗ : ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಂಜುನಾಥ ಚೌಧರಿ ಎಂ.ಹೆಚ್ ಇವರು ಜೂ. ೨೦ ರಂದು ತಮ್ಮ ತಂಡ ದೊಂದಿಗೆ ನಗರದ ವಿವಿಧೆಡೆ ಸ್ಮಾರ್ಟ್ ಸಿಟಿ ಯಿಂದ ಕೈಗೊಂಡಿರುವ ಕಾಮಗಾರಿ ಗಳನ್ನು ಪರಿಶೀಲಿಸಿದರು.
ಲೋಕಾಯುಕ್ತ ಠಾಣೆಯ ಡಿಎಸ್‌ಪಿ ಉಮೇಶ್ ಈಶ್ವರ್ ನಾಯ್ಕ, ಪೊಲೀಸ್ ನಿರೀಕ್ಷಕರಾದ ಪ್ರಕಾಶ್, ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿಗ ಳೊಂದಿಗೆ ಗುರುವಾರ ಬೆಳಿಗ್ಗೆ ನಗರದ ಆಯನೂರು ಗೇಟ್, ದ್ವಾರಕ ಕನ್ವೆನ್ಷನ್ ಹಾಲ್ ಹತ್ತಿರ, ಆಲ್ಕೊಳ ಸರ್ಕಲ್, ವಿನೋಬ ನಗರದ ೧೦೦ ಅಡಿ ಮುಖ್ಯ ರಸ್ತೆ, ಫ್ರೀಡಂ ಪಾರ್ಕ್, ಗಾಂಧಿನಗರ, ತಿಲಕ್‌ನಗರ, ತುಂಗಾ ನದಿ ಬಳಿ ಮತ್ತು ಇತರೆ ಪ್ರದೇಶಗಳಲ್ಲಿ ಸಂಚರಿಸಿ ಸ್ಮಾರ್ಟ್ ಸಿಟಿ ಯೋಜನೆ ಯಡಿ ಕೈಗೊಂಡಿರುವ ಕಾಮಗಾರಿ ಗಳಾದ ಡ್ರೈನೇಜ್, ರಸ್ತೆ, ಚರಂಡಿ, ಫುಟ್‌ಪಾತ್ ಇತರೆ ಕಾಮಗಾರಿ ಗಳನ್ನು ಪರಿಶೀಲಿಸಿದರು.
ಈ ಸಮಯದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯಕುಮಾರ್ ಮತ್ತು ಅವರ ಸಿಬ್ಬಂದಿಗಳನ್ನು ಬರ ಮಾಡಿಕೊಂಡು ಸ್ಥಳಗಳನ್ನು ಪರಿಶೀಲನೆ ಮಾಡಿ, ಅವೈeನಿಕ ಮತ್ತು ಕಳಪೆ ಡ್ರೈನೇಜ್, ಚರಂಡಿ, ರಸ್ತೆ, ಫುಟ್‌ಪಾತ್ ಕಾಮಗಾರಿ ಗಳನ್ನು ಗುರುತಿಸಿ ಪರಿಶೀಲಿಸಿದರು.
ಫುಟ್‌ಪಾತ್, ರಸ್ತೆಯ ಕಾಮಗಾರಿಳು ಅಪೂರ್ಣಗೊಂಡಿ ರುವುದು ಹಾಗೂ ಈಗಾಗಲೇ ದುರಸ್ತಿಯಲ್ಲಿದ್ದು ಸರಿಯಾದ ನಿರ್ವಹಣೆ ಮಾಡದೇ ಇರುವು ದನ್ನು ಗಮನಿಸಿದರು. ಸದರಿ ಅವೈeನಿಕ ಮತ್ತು ಕಳಪೆ ಕಾಮಗಾರಿಗಳಿಂದ ಮಳೆ ಸಂದರ್ಭ ದಲ್ಲಿ ನೀರು ನಿಂತು ಹಲವಾರು ಬಡಾವಣೆಗಳಿಗೆ ನೀರು ನುಗ್ಗಿ ಸಾರ್ವಜನಿಕರಿಗೆ ತೊಂದರೆ ಯಾಗುತ್ತಿರುವುದು ಕಂಡು ಬಂದಿದ್ದು, ಸ್ಮಾರ್ಟ್‌ಸಿಟಿ ಯೋಜನೆ ಇಂಜಿನಿಯರ್‌ರವರಿಗೆ ಈ ಕಾಮಗಾರಿಗಳನ್ನು ಪುನರ್ ಪರಿಶೀಲಿಸಿ ಕಾಮಗಾರಿಗಳ ಪೂರ್ಣ ಮಾಹಿತಿಯನ್ನು ನೀಡುವಂತೆ ಪೊಲೀಸ್ ಅಧೀಕ್ಷಕರು ಸೂಚನೆ ನೀಡಿರುತ್ತಾರೆ.

Leave a Reply

Your email address will not be published. Required fields are marked *