ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮೇ 16:ಡಾ. ಸರ್ಜಿ ನಾಮಪತ್ರ ಸಲ್ಲಿಕೆ…

Share Below Link

ಶಿವಮೊಗ್ಗ: ನೈಋತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾಗಿರುವ ಡಾ. ಧನಂಜಯ ಸರ್ಜಿ ಅವರು ಮೇ ೧೬ರಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಸುದ್ದಿಗೋಷ್ಟಿಯಲ್ಲಿ ಹೇಳಿದರು.
ಡಾ.ಧನಂಜಯ ಸರ್ಜಿ ಅವರು, ಸಾಮಾಜಿಕ ಕ್ಷೇತ್ರದಲ್ಲಿ ಹೆಸರು ಮಾಡಿದವರು, ಉತ್ತಮ ವೈದ್ಯರು ಆಗಿದ್ದಾರೆ. ಆರ್.ಎಸ್.ಎಸ್ ಮೂಲದಿಂದ ಬಂದವರು. ಬಿಜೆಪಿ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿ ಕೊಂಡಿದ್ದಾರೆ. ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ವರಿಷ್ಠರು ಇವರಿಗೆ ಟಿಕೆಟ್ ನೀಡಿರುವುದು ಸ್ವಾಗತಾರ್ಹ ಎಂದರು.
ಮೇ ೧೬ರಂದು ಮೈಸೂರಿನ ಪ್ರಾದೇಶಿಕ ಕಚೇರಿಯಲ್ಲಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಅವರ ಜೊತೆಗೆ ಪಕ್ಷದ ಹಿರಿಯರು ಗಣ್ಯರು ಇರುತ್ತಾರೆ. ಬಿಜೆಪಿಯ ಎಲ್ಲಾ ಮುಖಂಡರು ಅವರ ಗೆಲುವಿಗಾಗಿ ಪ್ರಚಾರ ಕೈಗೊಳ್ಳಲಿದ್ದಾರೆ. ಇನ್ನೂ ಕೇವಲ ೧೮ ದಿನಗಳಲ್ಲಿ ಪ್ರಚಾರ ಮಾಡಬೇಕಾಗಿರುವುದರಿಂದ ಹಲವು ಸಭೆಗಳ ಮೂಲಕ ಮತದಾರರನ್ನು ಒಂದು ಕಡೆ ಸೇರಿಸಿ ಪ್ರಚಾರ ಮಾಡಲಿದ್ದೇವೆ ಎಂದರು.
೧೯೮೮ರಿಂದಲೂ ನೈಋತ್ಯ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಸಂಚಲನವೇ ಮೂಡಿದೆ. ಒಮ್ಮೆ ಶಿಕ್ಷಕgರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಗೆದ್ದಿದ್ದು ಬಿಟ್ಟರೆ ಉಳಿದೆಲ್ಲ ಸಂದರ್ಭಗಳಲ್ಲಿ ಬಿಜೆಪಿಯೇ ಇಲ್ಲಿ ಕ್ಷೇತ್ರವನ್ನು ಉಳಿಸಿಕೊಳ್ಳುತ್ತ ಬಂದಿದೆ ಎಂದ ಅವರು, ನೈಋತ್ಯ ವಿಧಾನಪರಿಷತ್ ಕ್ಷೇತ್ರವು ಸುಮಾರು ೩೦ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದೆ. ಈ ಬಾರಿ ಮತದಾರರ ಸಂಖ್ಯೆಯು ಹೆಚ್ಚಿದೆ. ಬಿಜೆಪಿಯೇ ಹೆಚ್ಚು ನೊಂದಣಿ ಯನ್ನು ಈ ಬಾರಿ ಮಾಡಿದೆ. ಸುಮಾರು ೮೧೭೫೦ ಮತಗಳಿವೆ. ಅದರಲ್ಲಿ ಶಿವಮೊಗ್ಗಲ್ಲಿಯೇ ಮತಗಳ ಸಂಖ್ಯೆ ಹೆಚ್ಚಿದೆ ಎಂದ ಅವರು, ಎಲ್ಲಾ ಕಡೆ ಪಕ್ಷದ ಸಂಘಟನೆ ಇರುವುದರಿಂದ ಧನಂಜಯ ಸರ್ಜಿ ಮತ್ತು ಜೆಡಿಎಸ್‌ನ ಭೋಜೇಗೌಡ ಅವರು ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ಪ್ರಥಮ ಸುತ್ತಿನಲ್ಲೇ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿಧಾನ ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಬಿಜೆಪಿ ಮೈತ್ರಿ ಮುಂದುವರೆಯುವುದರಿಂದ ನಮಗೆ ಅನುಕೂಲವಾಗಲಿದೆ ಎಂದರು.
ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಎಸ್. ರುದ್ರೇಗೌಡ ಸೇರಿದಂತೆ ಇನ್ನಿತರರಿದ್ದರು.

This image has an empty alt attribute; its file name is Arya-coll.gif