ಜಿಲ್ಲಾ ಸುದ್ದಿತಾಜಾ ಸುದ್ದಿ

ಮೆಗ್ಗಾನ್ ಶ್ರೀ ಆರೋಗ್ಯ ಗಣಪತಿ ಪ್ರತಿಷ್ಠಾಪನೆ ರಕ್ತದಾನದ ಮೂಲಕ ಆರೋಗ್ಯ ಜಾಗೃತಿ ಮೂಡಿಸಿದ ಸಿಬ್ಬಂದಿಗಳು…

Share Below Link

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ನರ್ಸ್ ಕ್ವಾಟ್ರರ್ಸ್‌ಲ್ಲಿ ಈ ಬಾರಿ ವಿಶಿಷ್ಟವಾಗಿ ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಮೆಗ್ಗಾನ್ ಶ್ರೀ ಆರೋಗ್ಯ ಗಣಪತಿ ಪ್ರತಿಷ್ಠಾಪಿಸಲಾಗಿದೆ.
ಕಳೆದ ಹತ್ತು ವರ್ಷಗಳಿಂದ ಇಲ್ಲಿ ಗಣಪತಿ ಪ್ರತಿಷ್ಠಾಪಿಸಲಾಗುತ್ತಿದೆ. ಪ್ರತಿ ವರ್ಷ ಕೇವಲ ಅನ್ನ ಸಂತರ್ಪಣೆ ಮಾಡಲಾಗುತ್ತಿತ್ತು. ಮೂರು ವರ್ಷ ಗಳಿಂದ ಕ್ವಾಟ್ರರ್ಸ್‌ನ ಮಹಿಳೆಯರು, ಮಕ್ಕಳಿಗೆ ವಿಶೇಷ ಕ್ರೀಡಾಕೂಟ, ಪ್ರತಿಭಾವಂತ ಮಕ್ಕಳಿಗೆ ಸನ್ಮಾನ ಮಾಡಲಾಗುತ್ತಿದೆ.
ಆದರೆ, ಈ ಬಾರಿ ಮೆಗ್ಗಾನ್ ಆಸ್ಪತ್ರೆಯ ಸಿಬ್ಬಂದಿ ಗಳು ರಕ್ತದಾನ ಮಾಡುವ ಮೂಲಕ ವೈಶಿಷ್ಟಯವನ್ನು ಮೆರೆದಿದ್ದು, ಗಣೇಶೋತ್ಸವದಲ್ಲಿ ನಿಜವಾದ ಆರೋ ಗ್ಯೋತ್ಸವ ಮೆರೆದಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷ ಡಾ. ಟಿ.ಡಿ. ತಿಪ್ಪಮ್ಮ, ಗಣೇಶೋ ತ್ಸವ ಎಂದರೆ ಕೇವಲ ಹಾಡು, ಕುಣಿತ ಎಂಬ ಭಾವನೆ ಇದೆ. ಆದರೆ, ಇಂದು ನಮ್ಮ ಸಿಬ್ಬಂದಿಗಳು ರಕ್ತದಾನ ಮಾಡುವ ಮೂಲಕ ಜನರಲ್ಲಿ ಜಗೃತಿ ಮೂಡಿಸು ತ್ತಿದ್ದಾರೆ. ಆ ಮೂಲಕ ಮಾನವೀಯತೆ ಮೆರೆದಿದ್ದಾರೆ ಎಂದರು.ಸಿಮ್ಸ್ ನಿರ್ದೇಶಕ ವಿರೂಪಾಕ್ಷಪ್ಪ ಅವರ ಮಾರ್ಗ ದರ್ಶನದಲ್ಲಿ ನಡೆದ ರಕ್ತದಾನ ಕಾರ್ಯಕ್ರಮ ದಲ್ಲಿ ಜಿಲ್ಲಾ ಸರ್ಜನ್ ಡಾ. ಸಿದ್ದನಗೌಡ ಪಾಟೀಲ್, ಶುಶ್ರೂಷಕ ಅಧೀಕ್ಷಕಿ ಅನ್ನಪೂರ್ಣ ಹೆಚ್.ಟಿ. ಉಪಸ್ಥಿತರಿದ್ದರು.ಎಂ.ಆರ್. ಸಂತೋಷ್, ದಕ್ಷಣಿ ಮೂರ್ತಿ, ಅಶೋಕ್, ಸಂತೋಷ, ಕುಮಾರ, ಹನುಮಂತಪ್ಪ, ಗೀತೇಶ್, ಶ್ರೀನಿವಾಸನಾಯ್ಡು, ಜಯಂತ್, ರಘು, ಸೇರಿದಂತೆ ಹಲವರು ರಕ್ತದಾನ ಮಾಡಿದರು. ಸೆ.೨೪ರ ಭಾನುವಾರ ಗಣಹೋಮ, ಅನ್ನಸಂತರ್ಪಣೆಯ ನಂತರ ಸಂಜೆ ೫.೩೦ಕ್ಕೆ ರಾಜಬೀದಿ ಉತ್ಸವ ನಡೆಸಿ ಮೆಗ್ಗಾನ್ ಶ್ರೀ ಆರೋಗ್ಯ ಗಣಪತಿ ವಿಸರ್ಜನೆ ಮಾಡ ಲಾಗುವುದು. ಸಮಸ್ತ ಭಕ್ತಾದಿಗಳು ಅಧಿಕ ಸಂಖ್ಯೆ ಯಲ್ಲಿ ಪಾಲ್ಗೊಂಡು ಪ್ರೋತ್ಸಾಹಿಸುವ ಮೂಲಕ ದೇವರ ಕೃಪೆಗೆ ಪಾತ್ರರಾಗುವಂತೆ ಗಣೇಶೋತ್ಸವ ಸಮಿತಿ ಕೋರಿದೆ.