ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಈಶ್ವರಪ್ಪರ ರಾಜಕೀಯ ನಡೆಗೆ ಮೋದಿ ಪ್ರಶಂಸೆ; ಮಹತ್ವದ ಭರವಸೆ …

Share Below Link

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಂಜನೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕುಶಲೋಪಚಾರ ವಿಚಾರಿಸಿದ್ದಾರೆ.
ಈಶ್ವರಪ್ಪ ಅವರು ಚುನಾವಣಾ ರಾಜಕೀ ಯದಿಂದ ನಿವೃತ್ತಿ ತೆಗೆದು ಕೊಳ್ಳಲು ಪಕ್ಷ ಸೂಚಿಸು ತ್ತಿದ್ದಂತೆ ಪಕ್ಷದ ಆದೇಶವನ್ನು ಈಶ್ವರಪ್ಪ ಪಾಲನೆ ಮಾಡಿ, ರಾಜಕೀಯ ನಿವೃತ್ತಿ ಘೋಷಿಸಿದ್ದರು. ಈ ಬಾರಿ ಶಿವಮೊಗ್ಗ ನಗರ ಕ್ಷೇತ್ರದಿಂದ ತಮ್ಮ ಪುತ್ರ ಕಾಂತೇಶ್‌ಗೆ ಟಿಕೆಟ್ ಬಯಸಿದ್ದರು. ಆದರೆ ಪುತ್ರನಿಗೆ ಬಿಜೆಪಿ ಟಿಕೆಟ್ ಸಿಗಲಿಲ್ಲ. ಹೀಗಾಗಿ ಈಶ್ವರಪ್ಪ ಅಸಮಾಧಾನಗೊಳ್ಳಬಹುದು ಎಂಬ ಭಾವನೆ ಎಲ್ಲರಲ್ಲಿತ್ತು. ಆದರೆ ಈಶ್ವರಪ್ಪ ಇದು ಯಾವುದಕ್ಕು ತಲೆ ಕೆಡಿಸಿಕೊಳ್ಳದೇ ಪಕ್ಷ ನಿಷ್ಠೆ ಮೆರೆದಿದ್ದರು. ಇದೇ ಕಾರಣಕ್ಕೆ ಸ್ವತಃ ಪ್ರಧಾನಿ ಮೋದಿ ಅವರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ.
ಈಶ್ವರಪ್ಪ ಅವರ ಪಕ್ಷ ನಿಷ್ಠೆ ಮೆಚ್ಚಿ ಸ್ವತಃ ಪ್ರಧಾನಿ ಮೋದಿ ಅವರೇ ದೂರವಾಣಿ ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದರು. ಈ ವೇಳೆ ಶಿವಮೊಗ್ಗ ವಿಧಾನಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದು, ಈ ವೇಳೆ ಈಶ್ವರಪ್ಪ ಮಾತನಾಡಿ, ಸಾಮಾನ್ಯ ಕಾರ್ಯಕರ್ತ ರೊಂದಿಗೆ ಈ ರೀತಿ ಮಾತನಾಡುತ್ತಿರುವುದು ಸಂತೊ ಷ ತಂದಿದೆ. ಸಂಘಟನೆ ಹಾಗೂ ನಿಮ್ಮನೊಂದಿಗೆ ಸದಾ ನಾನು ಇರು ತ್ತೇನೆ ಎಂದು ತಿಳಿಸಿದರು.
ನೀವು ಮತ್ತು ಯಡಿಯೂರಪ್ಪ ಪಕ್ಷಕ್ಕಾಗಿ ಕೆಲಸ ಮಾಡಿದ್ದೀರಿ. ಪಕ್ಷ ಮತ್ತು ಸಂಘಟನೆ ನಿಮ್ಮ ಜೊತೆ ಯಾವಾಗಲೂ ಇರುತ್ತದೆ ಎಂದು ಮೋದಿ ತಿಳಿಸಿದ್ದಾರೆ, ಇದಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ನೀವು ಪೋನ್ ಮಾಡಿದ್ದು ಖುಷಿ ಆಯ್ತು. ಶಿವಮೊಗ್ಗದಲ್ಲಿ ನಾವು ಗೆಲ್ಲುತ್ತೇವೆ. ನನ್ನಂತಹ ಸಾಮಾನ್ಯ ಕಾರ್ಯಕರ್ತ ನಿಗೆ ನೀವು ಕರೆ ಮಾಡಿದ್ದು ಬಹಳ ಖುಷಿ ಆಗಿದೆ ಎಂದರು.