ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ತಾಯಿ ಎದೆಹಾಲು ಅಮೃತಕ್ಕೆ ಸಮಾನ ..

Share Below Link

ಶಿವಮೊಗ್ಗ : ತಾಯಿ ಎದೆ ಹಾಲು ಮಗುವಿಗೆ ಅತ್ಯಂತ ಪೌಷ್ಟಿಕ ಆಹಾರವಾಗಿದ್ದು ಎದೆ ಹಾಲಿನ ಮಹತ್ವ ಮತ್ತು ಎದೆ ಹಾಲುಣಿ ಸುವುದರಿಂದ ತಾಯಿ ಮತ್ತು ಮಗುವಿಗೆ ಆಗುವ ಅನುಕೂಲದ ಕುರಿತು ಎಲ್ಲರೂ ತಿಳಿಯಬೇಕೆಂದು ಜಿ ಆರೋಗ್ಯಾಧಿಕಾರಿ ಡಾ| ರಾಜೇಶ್ ಸುರಗಿಹಳ್ಳಿ ಹೇಳಿದರು.
ಮೆಗ್ಗಾನ್ ಬೋಧನಾ ಜಿ ಆಸ್ಪತ್ರೆಯ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಆ.೧ರಿಂದ ೭ನೇ ತಾರೀಖಿನವರೆಗೆ ವಿಶ್ವದಾದ್ಯಂತ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಆಚರಿಸಲಾಗುತ್ತದೆ. ಎದೆ ಹಾಲಿನ ಮಹತ್ವ ಮತ್ತು ಎದೆ ಹಾಲುಣಿಸುವುದರಿಂದ ತಾಯಿ ಮತ್ತು ಮಗುವಿಗೆ ಆಗುವ ಅನುಕೂಲಗಳು ಮತ್ತು ಮಗುವಿನ ಬೆಳವಣಿಗೆಯಲ್ಲಿ ಎದೆ ಹಾಲಿನ ಮಹತ್ವದ ಕುರಿತು ಸವಿವರವಾದ ಮಾಹಿತಿಯನ್ನು ಅವರು ನೀಡಿದರು.
ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ತe ಡಾ.ಸುನೀತ ಮಾತನಾಡಿ, ಎದೆ ಹಾಲುಣಿಸುವಲ್ಲಿ ತಾಯಂದಿ ರಿಗೆ ಇರುವ ಮಾಹಿತಿಯ ಕೊರತೆ ಮತ್ತು ಸಮಾಜದಲ್ಲಿರುವ ಮೌಢ್ಯತೆ ಹಾಗೂ ಉದಾಸೀನ ಮನೋ ಭಾವ, ರೂಡಿ ಸಂಪ್ರದಾಯಗಳು ಅಡ್ಡಿಯಾಗಿವೆ. ಎ ತಾಯಂದಿರು ಮತ್ತು ಸಮಾಜದ ಎಲಾ ಜವಾಬ್ದಾರಿಯುತ ನಾಗರಿಕರು, ಅಂಧ ಶ್ರದ್ಧೆಗಳನ್ನು ತೊಡೆದು ಹಾಕಬೇಕು. ವೈeನಿಕ ಮನೋಭಾವ ಬೆಳೆಸಿಕೊಂಡು ಹುಟ್ಟಿದ ಒಂದು ಗಂಟೆಯೊಳಗೆ ತಾಯಿ ಎದೆಹಾಲನ್ನು ನೀಡಬೇಕು. ಇದು ಮಗುವಿನ ಸರ್ವಾಂಗೀಣ ಬೆಳವಣಿಗೆಗೆ ತುಂಬಾ ಮುಖ್ಯ ವಾಗಿದೆ. ಎದೆ ಹಾಲುಣಿಸುವುದು ತಾಯಿಯ ಹಕ್ಕು. ಸರ್ಕಾರ ಈ ನಿಟ್ಟಿನಲ್ಲಿ ಹಲವಾರು ಸೌಲಭ್ಯಗಳನ್ನು ನೀಡಿದೆ ಮತ್ತು ನ್ಯಾಯಾಲಯ ಗಳಲ್ಲಿ ಕೂಡ ಕಾನೂನಿನಡಿಯಲ್ಲಿ ಎದೆ ಹಾಲುಣಿಸುವ ಮಹಿಳೆಗೆ ವಿಶೇಷ ಹಕ್ಕುಗಳನ್ನು ನೀಡಿದೆ ಮತ್ತು ಪ್ರತಿ ಕಛೇರಿ, ಆಸ್ಪತ್ರೆ ಮತ್ತು ಎ ಇಲಾಖೆಗಳಲ್ಲಿ ಕಾರ್ಯನಿರತ ಮಹಿಳೆಯರಿಗೆ ಎದೆ ಹಾಲುಣಿ ಸಲು ಪ್ರತ್ಯೇಕ ಸ್ಥಳಗಳನ್ನು ಮೀಸಲಿ ರಿಸಲಾಗಿದೆ. ಕಾರ್ಯನಿರತ ತಾಯಂದಿರು ಇದರ ಸದುಪ ಯೋಗ ಪಡೆದು ಕೊಂಡು ಮಗು ವಿಗೆ ಸಂಪೂರ್ಣ ವಾಗಿ ಕನಿಷ್ಟ ೬ ತಿಂಗಳವರೆಗೆ ಕೇವಲ ಎದೆ ಹಾಲು ಮಾತ್ರ ಉಣಿಸ ಬೇಕು ನಂತರದಲ್ಲಿ ಮೆದುವಾದ ಪೂರಕ ಆಹಾರವನ್ನು ಪ್ರಾರಂಭಿಸ ಬೇಕು ಮತ್ತು ಎದೆ ಹಾಲುಣಿಸು ವಲ್ಲಿ ವಹಿಸಬೇಕಾದ ಕ್ರಮಗಳು ಮತ್ತು ಎದೆ ಹಾಲಿನಿಂದ ಮಗುವಿಗೆ ಸಿಗುವ ರಕ್ಷಣೆ, ಪೋಷಕಾಂಶದ ಬಗ್ಗೆ ವಿವರವಾದ ಮಾಹಿತಿ ನೀಡಿದರು.
ಜಿ ಶಸ್ತ್ರ ಚಿಕಿತ್ಸಕ ಡಾ| ಸಿದ್ಧನಗೌಡ ಪಾಟೀಲ್ ಮಾತನಾಡಿ, ಪ್ರಸಕ್ತ ದಿನಗಳಲ್ಲಿ ಎದೆಹಾಲಿಗೆ ಸರಿಸಮವಾದ ವಸ್ತು ಯಾವುದೂ ಇಲ್ಲ. ಇದಕ್ಕೆ ಬೆಲೆ ಕಟ್ಟಲಾಗುವುದಿಲ್ಲ. ಎದೆಹಾಲುಂಡ ಮಗು ಆರೋಗ್ಯವಾಗಿರುತ್ತದೆ ಮತ್ತು ಮಾನಸಿಕವಾಗಿ ಸದೃಢವಾಗಿರುತ್ತದೆ. ಆದ್ದರಿಂದ ತಾಯಂದಿರು ಮಗುವಿಗೆ ಯಾವುದೇ ಉದಾಸೀನ ಮಾಡದೇ ದಿನಕ್ಕೆ ೮ ಬಾರಿ ಎದೆ ಹಾಲುಣಿಸಿ ಬೆಳೆಸುವ ಮೂಲಕ ದೇಶದ ಸದೃಢ ಪ್ರಜೆಯನ್ನಾಗಿ ಮಾಡಬೇಕೆಂದರು.
ಜಿ ಆರ್.ಸಿ.ಹೆಚ್ ಅಧಿಕಾರಿ ಡಾ. ನಾಗರಾಜ್ ನಾಯ್ಕ್ ಮಾತನಾಡಿ, ಪ್ರಸಕ್ತ ದಿನಗಳಲ್ಲಿ ಸಂಭವಿಸುವ ಮಕ್ಕಳ ಮರಣಕ್ಕೆ ಸಂಬಂಧಿಸಿದ ಕಾರಣಗಳಲ್ಲಿ ಸರಿಯಾದ ಕ್ರಮದಲ್ಲಿ ಮಗುವಿಗೆ ಎದೆ ಹಾಲು ನೀಡದಿರುವುದು, ಹಾಲುಣಿಸುವಾಗ ಮತ್ತು ನಂತರ ದಲ್ಲಿ ವಹಿಸಬೇಕಾದ ಕ್ರಮಗಳ ಬಗ್ಗೆ ಜಗೃತಿ ವಹಿಸದಿರುವುದು ಕೂಡಾ ಒಂದಾಗಿದೆ. ಹೊಂದಾಣಿಕೆ ಮತ್ತು ಪರಿಣಾಮಕಾರಿಯಾಗಿ ಮಗು ಎದೆಹಾಲು ಸೇವಿಸುವ ಬಗ್ಗೆ ಹೆಚ್ಚು ಗಮನಹರಿಸಬೇಕು. ಎದೆ ಹಾಲು ನಿಸರ್ಗದ ಅಮೃತವಿದ್ದಂತೆ. ಯಾವುದೇ ಖರ್ಚಿಲ್ಲದೆ, ಪರಿಶುದ್ಧ ವಾದ ಮತ್ತು ಮಗುವಿಗೆ ಕಾಲಕ್ಕನು ಗುಣವಾಗಿ ಬೇಕಾದ ಉಷ್ಣಾಂಶ, ತಾಜತನ ಮತ್ತು ಮಾರಕ ರೋಗಗಳ ವಿರುದ್ಧ ಹೋರಾಡುವ ರೋಗನಿರೋಧಕ ಶಕ್ತಿ ನೀಡುವ ಏಕೈಕ ವಸ್ತುವೆಂದರೆ ಅದು ಎದೆ ಹಾಲು ಮಾತ್ರ. ಹಾಗಾಗಿ ಎ ತಾಯಂದಿರು ಸರಿಯಾದ ಕ್ರಮದಲ್ಲಿ ಎದೆ ಹಾಲುಣಿಸ ಬೇಕೆಂದು ಸಲಹೆ ನೀಡಿದರು.
ವೈದ್ಯಕೀಯ ಅಧೀಕ್ಷಕ ಡಾ. ತಿಮ್ಮಪ್ಪ ಮಾತಾನಾಡಿದರು. ಕಾರ್ಯಕ್ರಮದಲ್ಲಿ ಪಿಡಿಯಾಟ್ರಿಕ್ ವಿಭಾಗದ ಹೆಚ್.ಓ.ಡಿ ಡಾ| ರವೀಂದ್ರ.ಬಿ.ಪಾಟೀಲ್, ಓ.ಬಿ.ಜಿ ವಿಭಾಗದ ಹೆಚ್.ಓ.ಡಿ ಡಾ| ಲೇಪಾಕ್ಷಿ, ಮಕ್ಕಳ ತಜ್ಷ ಡಾ| ಮನೋಜ್, ಐ.ಎ.ಪಿ ಅಧ್ಯಕ್ಷ ಡಾ| ವಿರೇಶ್, ಐಎಪಿ ಯ ಡಾ| ವಿನಾಯಕ್, ಓ.ಬಿ.ಜಿ ವಿಭಾಗದ ಸಹ ಪ್ರಾಧ್ಯಾಪಕ ಡಾ| ಚಂದ್ರಶೇಖರ್, ನವಜತ ಶಿಶು ತಜ್ಞ ಡಾ| ವೇಣುಗೋಪಾಲ್, ನರ್ಸಿಂಗ್ ಅಧೀಕ್ಷಕಿ ಅನ್ನಪೂರ್ಣ, ಶುಶ್ರೂಷಾಧಿಕಾರಿ ಜಯಲಕ್ಷ್ಮಿ, ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಮತ್ತು ಇತರೆ ಸಿಬ್ಬಂದಿಗಳು ಹಾಜರಿದ್ದರು.