ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಾಂಗ್ರೆಸ್ ಸರ್ಕಾರ ನಮಗೆ ರಕ್ಷಣೆ ಕೊಡುತ್ತದೆಂಬ ಧೈರ್ಯ ಮುಸ್ಲಿಂ ಗೂಂಡಾಗಳಿಗಿದೆ: ಈಶ್ವರಪ್ಪ

Share Below Link

ಶಿವಮೊಗ್ಗ: ನಾವೇನೇ ಕೊಲೆ ಮಾಡಿದರೂ, ಯಾರಿಗೆ ಚಾಕು ಹಾಕಿದರೂ ಕಾಂಗ್ರೆಸ್ ಸರ್ಕಾರ ನಮಗೆ ರಕ್ಷಣೆ ಕೊಡುತ್ತದೆ ಎಂಬ ಧೈರ್ಯ ಹಲವು ಮುಸ್ಲಿಂ ಗೂಂಡಾಗಳಿಗೆ ಬಂದಿದೆ. ಇದರಿಂದ ಅವರು ಅಟ್ಟಹಾಸ ಮೆರೆಯುತ್ತಿದ್ದಾರೆ. ಆದರೆ, ಹಿಂದು ಸಮಾಜ ಜಗೃತಿ ಆದರೆ ಈ ಸರ್ಕಾರ ಉಳಿಯಲ್ಲ ಎಂದು ಲೋಕಸಭಾ ಚುನಾವಣೆ ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದುಗಳ ರಕ್ಷಣೆ ಇಲ್ಲದಂತಾಗಿದೆ. ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ಮೇಲೆ ಹಾಡಜು ಹಗಲೇ ಅದೂ ಕಾಲೇಜ್ ಕ್ಯಾಂಪಸ್‌ನಲ್ಲೇ ಮುಸ್ಲಿಂ ಗೂಂಡಾ ಚಾಕುನಿಂದ ಅಮಾನುಷವಾಗಿ ಇರಿದು ಕೊಲೆ ಮಾಡಿದ್ದಾನೆ. ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯದ ಉತ್ತರ ನೀಡುತ್ತಿದೆ. ಕಾಲೇಜು ಆವರಣಕ್ಕೆ ಹೋಗಿ ಹಿಂದು ಯುವತಿ ಕೊಲೆ ಮಾಡಿರುವ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು. ಸರ್ಕಾರ ಕೊಲೆಗಾರನನ್ನು ನೇಣಿಗೆ ಹಾಕಬೇಕು, ಇಲ್ಲ ಗುಂಡಿಟ್ಟು ಕೊಲ್ಲಬೇಕು. ಹಾಗೆ ಮಾಡಿದರೆ ಮಾತ್ರ ಹಿಂದುಗಳಿಗೆ ಸ್ವಲ್ಪ ಸಮಾಧಾನ ಆಗುತ್ತದೆಂದು ಆಗ್ರಹಿಸಿದರು.
ರಾಜ್ಯದಲ್ಲಿ ಈ ರೀತಿಯ ದುರ್ಘಟನೆಗಳು ನಡೆಯುತ್ತಿರುವ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದು ವಿರೋಧಿ ಎಂಬಂತೆ ವರ್ತಿಸುತ್ತಿದೆ. ಇಂತಹ ಸಂದರ್ಭದಲ್ಲಿ ಹಿಂದುಗಳ ಪರವಾಗಿ ನಿಂತು ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಈಗ ಸರ್ಕಾರ ನಿಮ್ಮ ರಕ್ಷಣೆಗೆ ಇದ್ದೇವೆ ಎಂದು ಧೈರ್ಯ ಕೊಡದಿದ್ದರೆ ಕಷ್ಟ ಆಗುತ್ತದೆ. ಹಿಂದು ಸಮಾಜದವರು ಹರಿಸುವ ಒಂದು ಹನಿ ರಕ್ತವೂ ನಿಮ್ಮ ಅಧಿಕಾರವನ್ನೇ ಕಿತ್ತುಕೊಳ್ಳಬಹುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ನಾವು ರಾಜಕೀಯ ಮಾಡಲ್ಲ: ಹುಬ್ಬಳ್ಳಿಯಲ್ಲಿ ನೇಹ ಕೊಲೆಯಿಂದ ಯಾರಿಗೆ ಹಿನ್ನಡೆಯಾಗುತ್ತದೆ. ಯಾರಿಗೆ ಮುನ್ನಡೆಯಾಗುತ್ತದೆ ಎಂಬ ರಾಜಕಾರಣವನ್ನು ನಾನು ಮಾಡಲ್ಲ. ನಮ್ಮ ಹೆಣ್ಣು ಮಗಳ ಜೀವ ಹೋಗಿದೆ. ಇದರಲ್ಲಿ ರಾಜಕೀಯ ಮಾಡಲ್ಲ. ಕಾಂಗ್ರೆಸ್ ಇದರ ಬಗ್ಗೆ ರಾಜಕೀಯ ಮಾಡುತ್ತಿದೆ. ಗೃಹ ಸಚಿವ ಜಿ.ಪರಮೇಶ್ವರ್ ಅವರು ತನಿಖೆಗೂ ಮುನ್ನವೇ ಲವ್ ಜಿಹಾದ್ ಅಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆ. ಎಂ.ಬಿ. ಪಾಟೀಲ್ ಹುಬ್ಬಳ್ಳಿ ಪ್ರಕರಣವನ್ನ ಧರ್ಮದ ಲೇಪನ ಮಾಡಬೇಡಿ ಎಂದು ಹೇಳಿದ್ದಾರೆ. ಅವರ ಮಗಳಿಗೆ ಈ ರೀತಿ ಚಾಕು ಹಾಕಿದ್ದರೆ ಅವರು ಸುಮ್ಮನೆ ಇರ್ತಿದ್ದರಾ? ಇಬ್ಬರೂ ಬೇಜವಾಬ್ದಾರಿ ಸಚಿವರು ಎಂದು ಹರಿಹಾಯ್ದರು.
ಇನ್ನು ಕಾಂಗ್ರೆಸ್ ನಾಯಕ ಸುರ್ಜೆವಾಲ ಅವರು ಕೊಲೆಗಾರರನ್ನು ತಕ್ಷಣವೇ ಬಂಧಿಸಿದ್ದೇವೆ ಎಂದಿದ್ದಾರೆ. ಇದು ಸಮಜಯಿಸಿ ಕೊಡುವ ರೀತಿಯೇ? ಎಂದು ಪ್ರಶ್ನಿಸಿದರು.