ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Share Below Link

ಶಿವಮೊಗ್ಗ :ಅ.೧೫ ರಂದು ಶಿವಮೊಗ್ಗ ಶಾಖಾ ಮಠದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿ ಮತ್ತು ಶೀ ಕಾಳಿಕಾಂಬ ದೇವಿಯ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವವು ಯುಗ ಯೋಗಿ ಪದ್ಮಭೂಷಣ ಪುರಸ್ಕೃತ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ದಿವ್ಯಾ ಶೀರ್ವಾದಗಳೊಂದಿಗೆ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನ ನಾಥ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಅ.೧೫ ರಿಂದ ಅ.೨೪ ರವರೆಗೆ ಕಾರ್ಯಕ್ರಮ ನಡೆಯ ಲಿದ್ದು, ಒಂಬತ್ತು ದಿನಗಳವರೆಗೆ ಶ್ರೀದೇವಿಗೆ ವಿವಿಧ ಅಲಂಕಾರಗ ಳಿಂದ ಪೂಜ ಕೈಂಕರ್ಯಗಳು ಜರುಗಲಿವೆ.ಸಂಜೆ ದುರ್ಗಾ ಹೋಮ ನಡೆಸಲಾಗುವುದು, ಪ್ರತಿದಿನ ಸಂಜೆ ೬.೧೫ ರಿಂದ ೭.೨೦ ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ಗಳು ಜರುಗುವವು.
ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ದಿವ್ಯಸಾನಿಧ್ಯ ದಲ್ಲಿ ಅ.೨೧ ರಂದು ಬೆಳಿಗ್ಗೆ ೭ ರಿಂದ ಚಂಡಿಕಾ ಹೋಮ, ಮಹಾಮಂಗ ಳಾರತಿ, ವಿಶೇಷ ಪೂಜ ಕಾರ್ಯ ಕ್ರಮಗಳು ಜರುಗಲಿವೆ. ನಂತರ ಪ್ರಸಾದ ವಿನಿಯೋಗ ವಿರುತ್ತದೆ. ಅ.೨೪ರ ಸಂಜೆ ೫ ಗಂಟೆಗೆ ಪಲ್ಲಕ್ಕಿ ಉತ್ಸವ ಹಾಗೂ ಬನ್ನಿ ಮುಡಿ ಯುವ ಕಾರ್ಯಕ್ರಮವಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಕಾಳಿಕಾಂಬ ದೇವಿಯ ಕೃಪೆಗೆ ಪಾತ್ರರಾಗ ಬೇಕಾಗಿ ಶಿಮೊಗ್ಗ ಶಾಖಾಮಠದ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿzರೆ.