ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಎನ್‌ಡಿಎ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಕಡಿದಾಳ್

Share Below Link

ಶಿವಮೊಗ್ಗ : ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಗಳಾದ ಎಸ್.ಎಲ್. ಭೋಜೇಗೌಡ ಹಾಗೂ ಡಾ.ಧನಂಜಯ ಸರ್ಜಿ ಯವರು ಗೆಲ್ಲುತ್ತಾರೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದರು.
ಸುಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಎಲ್. ಬೋಜೇ ಗೌಡರು ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಈ ಹಿಂದೆ ಹಾಲಿ ಪರಿಷತ್ ಸದಸ್ಯರು ಅವರೇ ಆಗಿದ್ದರು. ಹಾಗಾಗಿ ಶಿಕ್ಷಕರ ಸಂಪರ್ಕ ಅವರಿಗೆ ನಿರಂತರ ವಾಗಿದೆ. ಒಳ್ಳೆಯ ಕೆಲಸಗಳನ್ನು ಕೂಡ ಮಾಡಿದ್ದಾರೆ. ಅವರ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಅವರ ಗೆಲ್ಲುವು ಅತ್ಯಂತ ಸುಲಭ ಎಂದರು. ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿಯವರು ಕೂಡ ಒಳ್ಳೆಯ ಕೆಲಸ ಮಾಡಿದ್ದಾರೆ. ಸಮಾಜ ಸೇವೆ ಮಾಡಿದ್ದಾರೆ. ಪದವೀಧರರ ಸಮಸ್ಯೆಗಳನ್ನು ಒಬ್ಬ ವೈದ್ಯರಾಗಿ ಅರಿತುಕೊಂಡಿದ್ದಾರೆ. ಇವರು ಕೂಡ ಗೆಲ್ಲುತ್ತಾರೆ ಎಂದರು.
ಈಗಾಗಲೇ ಶೇ. ೮೦ರಷ್ಟು ಪ್ರಚಾರ ಮಾಡಿದ್ದೇವೆ. ಈಗ ತಾನೇ ಶಾಲೆಗಳು ಆರಂಭವಾಗಿವೆ. ನಮ್ಮ ಅಭ್ಯರ್ಥಿಗಳು ಶಾಲೆಗಳಿಗೆ ಹೋಗಿ ಮತಯಾಚನೆ ಮಾಡಲಿದ್ದಾರೆ. ಒಟ್ಟಾರೆ ಇಬ್ಬರು ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದರು.
ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ. ಅಧಿಕಾರಿಗಳು ಆತ್ಮಹತ್ಯೆಯ ದಾರಿ ತುಳಿಯುತ್ತಿದ್ದಾರೆ. ಪೊಲೀಸ್ ಇಲಾಖೆಯ ಮೇಲೆಯೇ ದಾಳಿಗಳು ನಡೆಯುತ್ತಿವೆ. ಸರ್ಕಾರದ ಖಜನೆ ಬರಿದಾಗಿದೆ. ಇವೆಲ್ಲವೂ ನಮಗೆ ಅನುಕೂಲಕರವಾದ ವಾತಾವರಣ ಕಲ್ಪಿಸಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದರು.
ಜೆಡಿಎಸ್ ಜಿಲ್ಲಾ ಕಾರ್‍ಯಾಧ್ಯರಾದ ದಾದಾಪೀರ್, ರಾಮಕೃಷ್ಣ, ಪ್ರಧಾನ ಕಾರ್ಯದರ್ಶಿ ತ್ಯಾಗ ರಾಜ್, ನಗರಾಧ್ಯಕ್ಷ ದೀಪಕ್ ಸಿಂಗ್, ಜಿಲ್ಲಾ ವಕ್ತಾರ ನರಸಿಂಹ ಗಂಧದಮನೆ, ಪ್ರಮುಖರಾದ ಅಬ್ದುಲ್ ವಾಜೀದ್, ಸಿದ್ದಪ್ಪ, ವಿನಯ್, ಗೋಪಿ ಮುಂತಾದವರು ಉಪಸ್ಥಿತರಿದ್ದರು.

This image has an empty alt attribute; its file name is Arya-coll.gif