ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸಂಶೋಧನಾ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ಅಗತ್ಯ:ಡಾ. ಸಿ.ಎಂ.ಮಂಜುನಾಥ

Share Below Link

ಶಿವಮೊಗ್ಗ: ವಿeನ ಮತ್ತು ತಂತ್ರeನ ಕ್ಷೇತ್ರ ಮುಂದುವರೆ ದಿದ್ದು, ವಿeನ ಅಧ್ಯಯನದ ವಿದ್ಯಾರ್ಥಿಗಳು ಸಂಶೋಧನಾ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ವಹಿಸ ಬೇಕು ಎಂದು ಬೆಂಗಳೂರಿನ ರಾಷ್ಟ್ರೀ ಯ ಅಂತರಿಕ್ಷಯಾನ ಪ್ರಯೋಗಾ ಲಯದ ಹಿರಿಯ ವಿeನಿ ಡಾ. ಸಿ.ಎಂ.ಮಂಜುನಾಥ ಹೇಳಿದರು.
ಶಿವಮೊಗ್ಗ ನಗರದ ಡಿವಿಎಸ್ ಕಲಾ, ವಿeನ ಮತ್ತು ವಾಣಿಜ್ಯ ಕಾಲೇಜಿನ ಭೌತಶಾಸ್ತ್ರ ವಿಭಾಗದ ವತಿಯಿಂದ ವಿಮಾನಯಾನ ಎಷ್ಟು ಸುರಕ್ಷಿತ ವಿಷಯ ಕುರಿತು ಆಯೋ ಜಿಸಿದ್ದ ವಿಶೇಷ ಕಾರ್‍ಯಕ್ರಮದಲ್ಲಿ ಭಾ ಗವಹಿಸಿ ಉಪನ್ಯಾಸ ನೀಡಿದರು.
ಅಂತರಿಕ್ಷ ಕ್ಷೇತ್ರದಲ್ಲಿ ಹೆಚ್ಚಿನ ವಿಷಯ ಕಲಿಕೆಯ ಜತೆಯಲ್ಲಿ ಉನ್ನತ ಸಾಧನೆ ಮಾಡಲು ಅವ ಕಾಶ ಇರುತ್ತದೆ. ವಿಮಾನಯಾನ ಕುರಿತು ಹೆಚ್ಚಿನ ಸಂಶೋಧನಾ ಮನೋಭಾವ ಬೆಳೆಸಿಕೊಳ್ಳಬೇಕು. ವಿeನ ಮತ್ತು ತಂತ್ರeನ ಕ್ಷೇತ್ರ ದಲ್ಲಿ ಆಗುತ್ತಿರುವ ಅಭಿವೃದ್ಧಿಗಳ ಬಗ್ಗೆ ನಿರಂತರವಾಗಿ ತಿಳಿದುಕೊಳ್ಳ ಬೇಕು ಎಂದು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ದೇಶಿಯ ವಿದ್ಯಾಶಾಲಾ ಸಮಿತಿ ಕಾರ್‍ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ವಿeನ ವಿದ್ಯಾರ್ಥಿ ಗಳು ತಂತ್ರeನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ದೃಷ್ಠಿಯಿಂದ ಶೈಕ್ಷಣಿಕ ಹಂತದಲ್ಲಿ ಹೆಚ್ಚಿನ ಗಮನ ವಹಿಸಿ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಶಿವಮೊಗ್ಗದಲ್ಲಿಯೂ ವಿಮಾನಯಾನ ಹಾರಾಟ ಆರಂಭ ಗೊಳ್ಳಲಿದೆ. ಆಸಕ್ತಿಕರ ವಿಷಯಗಳ ಬಗ್ಗೆ ವಿeನಿಗಳಿಂದ ತಿಳಿದು ಕೊಳ್ಳಬೇಕು ಎಂದರು.
ದೇಶಿಯ ವಿದ್ಯಾಶಾಲಾ ಸಮಿತಿ ಜಂಟಿ ಕಾರ್ಯದರ್ಶಿ ಡಾ. ಎ. ಸತೀಶ್ ಕುಮಾರ್ ಶೆಟ್ಟಿ ಮಾತ ನಾಡಿ, ವಿದ್ಯಾರ್ಥಿಗಳು ಭವಿಷ್ಯ ಹಾಗೂ ಉನ್ನತ ಶಿಕ್ಷಣದ ಬಗ್ಗೆ ಈಗಿನಿಂದಲೇ ಸಿದ್ಧತೆ ಆರಂಭಿಸ ಬೇಕು. ವಿಮಾನಯಾನ ಕ್ಷೇತ್ರದಲ್ಲಿ ಇರುವ ಅವಕಾಶಗಳ ಬಗ್ಗೆ ಅರಿತು ಕೊಂಡು ಕೌಶಲ್ಯಗಳನ್ನು ಬೆಳೆಸಿಕೊ ಳ್ಳಬೇಕು ಎಂದು ಸಲಹೆ ನೀಡಿ ದರು.
ವಿದ್ಯಾರ್ಥಿಗಳಲ್ಲಿ ಸಂಶೋ ಧನಾ ಕ್ಷೇತ್ರಗಳಲ್ಲಿ ಆಸಕ್ತಿ ಹೆಚ್ಚಿಸುವ ಆಶಯದಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ದೃಷ್ಠಿಯಿಂದ ಉಪನ್ಯಾಸ ಹಾಗೂ ತರಬೇತಿ ಕಾರ್ಯಾಗಾರಗಳನ್ನು ನಿರಂತ ರವಾಗಿ ಆಯೋಜಿಸಲಾಗುವುದು ಎಂದು ಹೇಳಿದರು.
ದೇಶಿಯ ವಿದ್ಯಾಶಾಲಾ ಸಮತಿಯ ಕಲಾ, ವಿeನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ದೇಶಿಯ ವಿದ್ಯಾ ಶಾಲಾ ಸಮಿತಿ ಖಜಂಚಿ ಬಿ.ಗೋ ಪಿನಾಥ್, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎ.ಎಸ್.ಜಗ ದೀಶ್ ಉಪಸ್ಥಿತರಿದ್ದರು.