ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕೋಮುಗಲಭೆಗೆ ಕಡಿವಾಣ – ದ್ವೇಷ ರಾಜಕಾರಣಕ್ಕೆ ಬ್ರೇಕ್ ಹಾಕಿ ಕಾಂಗ್ರೆಸ್ ಗೆಲ್ಲಿಸುವುದೇ ನಮ್ಮ ಗುರಿ….

Share Below Link

ಶಿವಮೊಗ್ಗ: ಈ ಬಾರಿ ಚುನಾವಣೆಯಲ್ಲಿ ಇಬ್ಬರೂ ಒಟ್ಟಾಗಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುತ್ತೇವೆ ಎಂದು ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಹಾಗೂ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ ಗೌಡ ಇಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜಿ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಇಬ್ಬರೂ ಒಟ್ಟಾಗಿದ್ದೇವೆ. ನಮ್ಮ ನಡುವೆ ಭಿನ್ನಾಭಿಪ್ರಾಯಗಳು ಇದ್ದದ್ದು ನಿಜ ಆದರೆ ಈಗ ಬಿಜೆಪಿಯನ್ನು ಸೋಲಿಸಲೇಬೇಕಾಗಿದೆ. ಮತ್ತು ತೀರ್ಥ ಹಳ್ಳಿ ಕ್ಷೇತ್ರದಲ್ಲಿ ನಾವಿಬ್ಬರೂ ಒಟ್ಟಾಗುವ ಜನರ ಬಯಕೆಯನ್ನು ಗೌರವಿಸಿದ್ದೇವೆ. ಇಬ್ಬರೂ ಒಟ್ಟಾಗ ಬೇಕೆಂಬುದೇ ಕ್ಷೇತ್ರದ ಮತದಾರನ ಅಪೇಕ್ಷೆ. ಹಾಗಾಗಿ ನಾವಿಬ್ಬರೂ ಒಂದಾಗಿ ಬಿಜೆಪಿಯ ಅಭ್ಯರ್ಥಿ ಯನ್ನು ಅತ್ಯಂತ ಹೆಚ್ಚಿನ ಅಂತರದ ಮತಗಳಿಂದ ಸೋಲಿಸುತ್ತೇವೆ ಎಂದರು.
ಕಿಮ್ಮನೆ ರತ್ನಾಕರ್ ಮಾತನಾಡಿ, ತೀರ್ಥಹಳ್ಳಿಯಲ್ಲಿ ಆರಗ eನೇಂದ್ರ ಅವರು ದ್ವೇಷದ ರಾಜಕಾರಣ ಮಾಡುತ್ತಿzರೆ. ಕೋಮು ಗಲಭೆಗಳನ್ನು ಸೃಷ್ಟಿಸುವ ಹುನ್ನಾರ ಮಾಡುತ್ತಿzರೆ. ನಂದಿತಾ ಪ್ರಕರಣದಲ್ಲಿ ಸೋಲು ಕಂಡ ಅವರು ಪುನಃ ಅಂತಹುದೇ ಕೋಮುಗಲಭೆಯನ್ನು ಸೃಷ್ಟಿಸಲು ಹೊರಟಿದ್ದರು. ಆದರೆ ಅದು ಸಾಧ್ಯವಾಗಿಲ್ಲ ಎಂದರು.


ಆರಗ ಒಬ್ಬ ಅಸಮರ್ಥ ಗೃಹಮಂತ್ರಿಯಾಗಿzರೆ. ಯಾವ ಅಭಿವೃದ್ಧಿ ಕೆಲಸವನ್ನೂ ತೀರ್ಥಹಳ್ಳಿ ಯಲ್ಲಿ ಮಾಡಿಲ್ಲ. ಇತ್ತೀಚೆಗೆ ಅವರ ಅನುದಾನದಲ್ಲಿ ಆದ ಡಾಂಬರ್ ರಸ್ತೆಗಳು ಹಪ್ಪಳದಂತೆ ಎದ್ದು ಬರುತ್ತವೆ. ಅವರ ದರ್ಪ ಭ್ರಷ್ಟಾ ಚಾರ ಇವೆಲ್ಲವೂ ಕೊನೆಗೊಳ್ಳಬೇ ಕಾಗಿದೆ. ನನ್ನ ಜೊತೆಗೆ ಆರ್‌ಎಂ. ಮಂಜುನಾಥ ಗೌಡರು ಇzರೆ. ಅವರಿಗೆ ಚುನಾವಣೆಯ ಎ ಮೇಲ್ವಿಚಾರಣೆಯನ್ನು ನೀಡು ತ್ತೇನೆ. ಅವರ ನೇತೃತ್ವದಲ್ಲಿಯೇ ಸಮಿತಿಯೊಂದು ರಚನೆಯಾಗಿದೆ. ಒಟ್ಟಾರೆ ಬಿಜೆಪಿ ಆಡಳಿತಕ್ಕೆ ಕೊನೆ ಹಾಡುತ್ತೇವೆ. ಜೊತೆಗೆ ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿದರು.
ಗೃಹ ಮಂತ್ರಿ ಆರಗ eನೇಂದ್ರ ಅವರ ಮಗನ ಬಗ್ಗೆ ಕೆಲವು ದೂರುಗಳಿವೆ. ಆತ ರಿಯಲ್ ಎಸ್ಟೇಟ್ ದಂಧೆ ನಡೆಸು ತ್ತಿzನೆ. ಆತ ನಿರ್ಮಿಸಿದ ಬಡಾ ವಣೆಗೆ ರಸ್ತೆ ಕೂಡ ಮಾಡಿzರೆ. ಸ್ಯಾಂಟ್ರೋ ರವಿ ಮತ್ತು eನೇಂದ್ರ ಅವರ ಮಗನ ಫೋಟೋಗಳು ಕಾಣಿಸಿಕೊಳ್ಳು ತ್ತಿವೆ. ಯಾರ ಸಂಬಂಧ ಯಾರ ಜೊತೆ ಇದೆ ಎಂಬುದು ಈಗಾಗಲೇ ಬಹಿರಂಗವಾಗಿದೆ ಎಂದರು.
ಗೃಹ ಸಚಿವರೇ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸಿದ ಆ ಘಟನೆ ಯಾವುದು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನು ಬಹಿರಂಗವಾಗಿ ಹೇಳುವುದಿಲ್ಲ. ಬೇಕಾದರೆ ಪ್ರತ್ಯೇಕವಾಗಿ ನಿಮಗೆ ನೀಡುತ್ತೇನೆ. ನೀವು ಪತ್ತೆಹಚ್ಚಿ ಆ ಸತ್ಯವನ್ನು ಹೊರತನ್ನಿ ಎಂದರು.
ಈಗಾಗಲೇ ಗ್ರಾ, ಪಂ,ಮಟ್ಟದಲ್ಲಿ ಹಣ ಸಂಗ್ರಹಣೆ ಆಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಹಿಂದೆ ಸುಮಾರು ೫ಸಾವಿರ ಮಹಿಳೆಯರಿಗೆ ಬೆಳ್ಳಿ ನಾಣ್ಯ ಕೊಟ್ಟ ಸುದ್ದಿ ಇತ್ತು. ಈಗ ಚಿನ್ನದ ನಾಣ್ಯವನ್ನೇ ಕೊಡಬ ಹುದೇನೋ ಎಂದು ವ್ಯಂಗ್ಯ ವಾಡಿದ (೩ನೇ ಪುಟಕ್ಕೆ)