ಆರೋಗ್ಯಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಕೇಂದ್ರದ ಹೊಸ ಕಾರ್ಮಿಕ ಸಂಹಿತೆ ವಿರೋಧಿಸಿ ಔಷಧ ಪ್ರತಿನಿಧಿಗಳ ಒಕೂಟದಿಂದ ಪ್ರತಿಭಟನೆ

Share Below Link

ಶಿವಮೊಗ್ಗ: ಔಷಧ ಮತ್ತು ಮಾರಾಟ ಪ್ರತಿನಿಧಿಗಳ ರಕ್ಷಣೆಗೆ ಇದ್ದಂತಹ ಕಾರ್ಮಿಕ ಸಂಹಿತೆಗಳನ್ನು ಬಿಟ್ಟು ಮಾರಕವಾ ಗುವ ಹೊಸ ಕಾರ್ಮಿಕ ಸಂಹಿತೆ ಗಳನ್ನು ಕೇಂದ್ರ ಸರ್ಕಾರವು ಜರಿಗೆ ತರಲು ಹೊರಟಿರುವುದನ್ನು ವಿರೋಧಿಸಿ ಇಂದು ಭಾರತ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘಗಳ ಒಕ್ಕೂಟದ ಜಿ ಶಾಖೆಯಿಂದ ಡಿಸಿ ಕಛೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.


ಕೇಂದ್ರ ಸರ್ಕಾರ ದೇಶದ ಲಕ್ಷಾಂತರ ಕಾರ್ಮಿಕರ ವ್ಯಾಪಕ ವಿರೋಧವಿದ್ದರೂ ಕೂಡ ನ.೨೧ ರಿಂದ ಏಕಪಕ್ಷೀಯವಾಗಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜರಿಗೆ ತಂದಿದೆ. ಈ ಕಾರ್ಮಿಕ ವಿರೋಧಿ ನಡೆಯನ್ನು ನಮ್ಮ ಒಕ್ಕೂಟ ವಿರೋಧಿಸಿದೆ. ಈಗಾಗಲೇ ಕಾರ್ಮಿಕ ಸಂಹಿತೆಗಳ ಪ್ರತಿಗಳನ್ನು ಕೂಡ ದೇಶಾದ್ಯಂತ ಸುಟ್ಟುಹಾಕುವ ಮೂಲಕ ಪ್ರತಿಭಟನೆ ಮಾಡಿದ್ದರೂ ಕೂಡ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಕಾರ್ಪೋರೇಟ್ ಕಂಪನಿಗಳ ಋಣ ತೀರಿಸುವ ಸಲುವಾಗಿ ಇದೂವರೆಗೂ ಕಾರ್ಮಿಕ ವಿರೋಧಿ ಕಾರ್ಮಿಕ ಸಂಹಿತೆಗಳನ್ನು ವಾಪಾಸ್ಸು ಪಡೆದಿಲ್ಲ. ಔಷಧ ಮತ್ತು ಮಾರಾಟ ಪ್ರತಿನಿಧಿಗಳಿಗೆ ಇದರಿಂದ ತೊಂದರೆ ಯಾಗಿದೆ. ಪ್ರತಿನಿಧಿಗಳ ರಕ್ಷಣೆಗೆ ಇದ್ದ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿದೆ. ಉzಶಪೂರ್ವಕ ವಾಗಿ ಹೊಸ ಕಾರ್ಮಿಕ ಸಂಹಿತೆ ಗಳನ್ನು ಜರಿಗೆ ತರಲು ಹೊರಟಿದೆ. ಇದು ಖಂಡನೀಯ. ಕಾರ್ಮಿಕರ ಆಕ್ರೋಶ ಇಡೀ ದೇಶದಲ್ಲಿ ಇದೆ. ಕರ್ನಾಟಕ ಸರ್ಕಾರ ಇದನ್ನು ನೋಡುತ್ತಿದ್ದರೂ ಕೂಡ ಇಂತಹ ವಿರೋಧಿ ಸಂಹಿತೆಗಳನ್ನು ಜರಿಗೆ ತರುವುದಿಲ್ಲವೆಂದು ಕಾರ್ಮಿಕರಿಗೆ ಭರವಸೆ ನೀಡಿಲ್ಲ. ಹಾಗಾಗಿ ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರವೂ ಕೂಡ ಕಾರ್ಪೋರೇಟ್ ಕಂಪನಿಗಳ ಪರವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.


ಆದ್ದರಿಂದ ಕೇಂದ್ರ ಸರ್ಕಾರ ಕೂಡಲೇ ಕಾರ್ಪೋರೇಟ್ ಕಂಪನಿ ಗಳ ಪರವಾಗಿರುವ ಈ ನಾಲ್ಕೂ ಸಂಹಿತೆಗಳನ್ನು ವಾಪಾಸ್ಸು ಪಡೆಯ ಬೇಕು. ರಾಜ್ಯ ಸರ್ಕಾರ ಕೂಡ ರಾಜ್ಯದಲ್ಲಿ ಇದನ್ನು ಜರಿಮಾಡು ವುದಿಲ್ಲ ಎಂದು ಭರವಸೆ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಪ್ರತಿಭಟನೆಯಲ್ಲಿ ಜಿಧ್ಯಕ್ಷ ಅಶೋಕ್ ಎಸ್.ಜಿ., ಕಾರ್ಯದರ್ಶಿ ಮಂಜುನಾಥ್ ಹೆಬ್ಬಾರ್, ರಾಷ್ಟೀಯ ಕಾರ್ಯಕಾರಿಣಿ ಸಿ.ಬಿ. ಕುಲಕರ್ಣಿ ಸೇರಿದಂತೆ ಮತ್ತಿತರರಿದ್ದರು.