ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಪೈಪ್ ಕಳವು : ಆರೋಪಿ ಬಂಧನ

Share Below Link

ಶಿವಮೊಗ್ಗ: ಶಾಲೆಯ ಬಹು ಗ್ರಾಮ ಕುಡಿಯುವ ನೀರಿಗಾಗಿ ಸಂಗ್ರಹಿಸಿ ಇಟ್ಟಿದ್ದ ಪೈಪ್‌ಗಳನ್ನ ಕಳವು ಮಾಡಿದ ಪ್ರಕರಣವನ್ನು ಸಾಗರ ಗ್ರಾಮಾಂತರ ಪೊಲೀಸರು ಬೇಧಿಸಿ ಓರ್ವನನ್ನು ಬಂಧಿಸಿ ಲಕ್ಷಾಂತರ ರೂ. ಮಲ್ಯದ ಪೈಪ್ ಗಳು ಮತ್ತು ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದಿzರೆ.
ಸಾಗರ ತಾಲ್ಲೂಕಿನ ಹೆಗ್ಗೋ ಡಿನ ಕೇಡಲಸರ ಶಾಲಾ ಆವರಣ ದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಅಳವಡಿಸಲು ಸಂಗ್ರಹಿಸಿಟ್ಟಿದ್ದ ಪೈಪ್‌ಗಳನ್ನು ಕಳ್ಳತನ ಮಾಡಿಕೊಂಡು ಹೋಗಿ ರುವ ಘಟನೆಯ ಬಗ್ಗೆ ಪ್ರಾಜೆಕ್ಟ್ ಮ್ಯಾನೇಜರ್ ಕೃಷಪ್ರಸಾದ್ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ್ದರು.
ಸಾಗರದ ಪೊಲೀಸ್ ಉಪಾಧೀಕ್ಷಕರು ಗೋಪಾಲಕೃಷ ಟಿ. ನಾಯ್ಕ, ಮೇಲ್ವಿಚಾರಣೆಯಲ್ಲಿ, ಪಿಐ ಮಹಾಬಲೇಶ್ವರ, ಪಿಎಸ್‌ಐ ನಾರಾಯಣ ಮಧುಗಿರಿ ಹಾಗೂ ಸಿಬ್ಬಂಧಿಗಳಾದ ಹೆಚ್.ಸಿ, ಸನಾ ವು, ಫೈರೋಜ್ ಅಹಮದ್ ಮತ್ತು ಸಿಪಿಸಿ ರವಿಕುಮಾರ್ ರವರನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿತ್ತು.
ತನಿಖಾ ತಂಡವು ಹೊಸೂರು ಗ್ರಾಮದ ನಿವಾಸಿ ವೇಗರಾಜ್ (೪೦) ಬಂಧಿಸಿ ಆತನಿಂದ ಅಂದಾ ಜು ೧,೧೫,೦೦೦ ರೂ. ಮಲ್ಯದ ಪೈಪ್ ಬಂಡಲ್, ಕೃತ್ಯಕ್ಕೆ ಬಳಸಿದ ಟಾಟಾ ಸೂಪರ್ ಏಸ್ ಮಿಂಟ್ ವಾಹನ ವಶಪಡಿಸಿಕೊಂಡಿದೆ.